ನಾನು ರಾಜಕೀಯಕ್ಕೆ ಬಂದಿದ್ದೇ ಅನಿರೀಕ್ಷಿತ: ಡಿಸಿಎಂ ಲಕ್ಷ್ಮಣ ಸವದಿ
Team Udayavani, Sep 17, 2019, 10:54 AM IST
ಬಳ್ಳಾರಿ: ನನ್ನ ಜೀವನದಲ್ಲಿ ಎಲ್ಲವೂ ಅನಿರೀಕ್ಷಿತವಾಗಿ ಲಭಿಸಿದೆ. ನಾನು ರಾಜಕೀಯಕ್ಕೆ ಬಂದಿದ್ದು, ಉಪಮುಖ್ಯಮಂತ್ರಿಯಾಗಿದ್ದು, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದು ಎಲ್ಲವೂ ಅನಿರೀಕ್ಷಿತವಾಗಿ ನಡೆದಿದೆ ಎಂದು ಉಪಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸಂಗಪ್ಪ ಸವದಿ ಹೇಳಿದರು.
ನಗರದ ಮುನಿಸಿಪಲ್ ಕಾಲೇಜು ಮೈದಾನದಲ್ಲಿ ಮಂಗಳವಾರ ನಡೆದ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸೂಚನೆ ಮೇರೆಗೆ ಧ್ವಜಾರೋಹಣಕ್ಕೆ ಆಗಮಿಸಿದ್ದೇನೆ. ನನ್ನ ಜೀವನದಲ್ಲಿ ಎಲ್ಲವೂ ಅನಿರೀಕ್ಣಿತವಾಗಿ ನಡೆದಿದೆ. ನಾನು ರಾಜಕೀಯಕ್ಕೆ ಬಂದಿದ್ದು, ಶಾಸಕನಾಗಿ ಆಯ್ಕೆಯಾಗಿದ್ದು ಅನಿರೀಕ್ಷಿತವಾಗಿತ್ತು. ಅದರಂತೆ ಉಪಮುಖ್ಯಮಂತ್ರಿಯಾಗಿದ್ದು, ಬಳ್ಳಾರಿ ಜಿಲ್ಲಾ ಉಸ್ತುವಾರಿಯಾಗಿದ್ದು ಸಹ ಅನಿರೀಕ್ಷಿತವಾಗಿದೆ. ಶಾಸಕನಾಗದಿದ್ದ ನನಗೆ ಪಕ್ಷದ ವರಿಷ್ಠರು ಕರೆದು ಸಚಿವ ಸ್ಥಾನ ನೀಡಿ, ಡಿಸಿಎಂ ಕೊಟ್ಟಿರುವುದು ಸಹ ಅನಿರೀಕ್ಷಿತವಾಗಿದೆ. ಪಕ್ಷದ ನಾಯಕರು ಭರವಸೆ ಇಟ್ಟು ನಾನಾ ಜವಾಬ್ದಾರಿ ನೀಡಿದ್ದಾರೆ. ಅದನ್ನು ಸರಿಯಾಗಿ ನಿಭಾಯಿಸಲಾಗುವುದು ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಪ್ರಧಾನಿ ಮೋದಿ, ಅಮಿತ್ ಶಾ ಗುಜರಾತ್ ನಲ್ಲಿ ಸ್ಥಳೀಯರಿಗೆ ಸಚಿವ ಸ್ಥಾನ ನೀಡದೇ ಬೇರೆಯವರಿಗೆ ಅವಕಾಶ ನೀಡುವ ಮೂಲಕ ಅಭಿವೃದ್ಧಿಗೆ ನಾಂದಿ ಹಾಡಿದ್ದರು. ಈಗ ಕರ್ನಾಟಕ ರಾಜ್ಯದಲ್ಲಿ ಸಹ ಅದೇ ಪ್ರಯೋಗವನ್ನು ಅನುಸರಿಸುತ್ತಿದ್ದಾರೆ. ಬಳ್ಳಾರಿ ಉಸ್ತುವಾರಿ ನನಗೆ ಸಿಕ್ಕಿದಕ್ಕೆ ಶ್ರೀರಾಮುಲು ಅವರಿಗೆ ಸಂತಸ ತಂದಿದೆ. ರಾಮುಲು ಮತ್ತು ನಾನು ಸಹೋದರರಿದ್ದಂತೆ. ಬಳ್ಳಾರಿಯ ಸರ್ವತೋಮುಖ ಅಭಿ ವೃದ್ದಿಗೆ ಪ್ರಾಮಾಣಿಕವಾಗಿ ಶ್ರಮಿಸುವೆ ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ
Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ