ಗಾಳಿ-ಮಳೆಯಿಂದ ತೋಟಗಾರಿಕೆ ಬೆಳೆ ಹಾನಿ
Team Udayavani, Apr 24, 2020, 4:04 PM IST
ಜಗಳೂರು: ತಾಲೂಕಿನ ಐನಳ್ಳಿ ಗ್ರಾಮದ ಜಮೀನಿನಲ್ಲಿ ಅಡಿಕೆ ಮರಗಳು ನೆಲಕ್ಕುರುಳಿರುವುದು.
ಜಗಳೂರು: ತಾಲೂಕಿನಾದ್ಯಾಂತ ಬುಧವಾರ ರಾತ್ರಿ ಸುರಿದ ಮಳೆಯಿಂದಾಗಿ 13 ಹೆಕ್ಟೇರ್ ಪ್ರದೇಶದ ತೋಟಗಾರಿಕೆ ಬೆಳೆಗಳು ಸೇರಿದಂತೆ ಕೆಲವು ಮನೆಗಳ ಮೇಲ್ಛಾವಣಿಗೆ ಧಕ್ಕೆಯಾಗಿದೆ. ಕೆಲವೆಡೆ ಮರಗಳು ಧರೆಗುರುಳಿವೆ ಎಂದು ತಹಶೀಲ್ದಾರ್ ಹುಲ್ಲುಮನಿ ತಿಮ್ಮಣ್ಣ ತಿಳಿಸಿದ್ದಾರೆ.
ತಾಲೂಕಿನಲ್ಲಿ ಬುಧವಾರ ಸಂಜೆ ಅಶ್ವಿನಿ ಮಳೆಯ ಆರ್ಭಟ ಭಾರೀ ಜೋರಾಗಿದ್ದು, ವಿಪರೀತ ಗಾಳಿ, ಮಳೆಯಿಂದಾಗಿ 8 ಹೆಕ್ಟೇರ್ ಬಾಳೆ , 2 ಹೆಕ್ಟೇರ್ ಅಡಿಕೆ , 1 ಎಕರೆಯಲ್ಲಿದ್ದ ಎಲೆಬಳ್ಳಿಗೆ ಹಾನಿಯಾಗಿದೆ. ಬೈರನಾಯಕನಹಳ್ಳಿ, ಪಟ್ಟಣದ ಅಶ್ವತ್ಥರೆಡ್ಡಿ ನಗರದ ಸಮೀಪವಿರುವ ಅಲೆಮಾರಿ ಸಮುದಾಯದವರ ಗುಡಿಸಲುಗಳಿಗೆ ಧಕ್ಕೆಯಾಗಿದ್ದು, ಕೆಚ್ಚೇನಹಳ್ಳಿ ಸೇರಿದಂತೆ ಇತರೆ ಗ್ರಾಮಗಳಲ್ಲಿ ಮರಗಳು ರಸ್ತೆ ಮೇಲೆ ಬಿದ್ದಿವೆ. ಮುಸ್ಟೂರು ಗ್ರಾಮದ ಸಮೀಪ ತೆರೆಯಯಾಗಿದ್ದ ಚೆಕ್ಪೋಸ್ಟ್ನ ಶಾಮಿಯಾನಾ ಗಾಳಿಗೆ ಹಾರಿ ಹೋಗಿದೆ. ಜಗಳೂರು 28.20 ಮಿಮೀ, ಸಂಗೇನಹಳ್ಳಿ 9, ಬಿಳಿಚೋಡು 7 ಮಿಮೀ ಸೇರಿದಂತೆ ಒಟ್ಟು 44.20 ಮಿಮೀ ದಾಖಲಾಗಿದೆ. ಸರಾಸರಿ 8.84 ರಷ್ಟು ಮಳೆಯಾಗಿದ್ದು ಸೊಕ್ಕೆ ಮತ್ತು ಚಿಕ್ಕಬಂಟನಹಳ್ಳಿ ಭಾಗದಲ್ಲಿ ಮಳೆಯಾಗಿಲ್ಲ. ಉಳಿದಂತೆ ತಾಲೂಕಿನಾದ್ಯಾಂತ ಮಳೆ ಸುರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ
MUST WATCH
ಹೊಸ ಸೇರ್ಪಡೆ
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್