ಬಳ್ಳಾರಿ ಜೈಲು ಹಕ್ಕಿಗಳಿಗೆ ಜನ್‌ಧನ್‌ ಬಲ!


Team Udayavani, Nov 22, 2018, 6:00 AM IST

jan.jpg

ಬಳ್ಳಾರಿ: ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಜನ್‌ಧನ್‌ ಯೋಜನೆ ಜೈಲುವಾಸಿಗಳಿಗೆ ಬಲ ತಂದುಕೊಟ್ಟಿದೆ!  ರಾಜ್ಯದಲ್ಲೇ ಇದೇ ಮೊದಲ ಬಾರಿಗೆ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಈ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗಿದೆ. 

ಇಲ್ಲಿನ ಸಜಾಬಂಧಿ ಕೈದಿಗಳಿಗೆ ಬ್ಯಾಂಕ್‌ ಖಾತೆ ಕೊಡಿಸುವ ಜತೆಗೆ ಜೈಲಿನಲ್ಲೇ ದುಡಿದ ಕೂಲಿ ಹಣವನ್ನೂ ನೇರವಾಗಿ ಖಾತೆಗೆ ಜಮಾ ಮಾಡುವಂತೆಯೂ ಮಾಡಲಾಗಿದೆ. ಇದಕ್ಕಾಗಿ ಕಾರಾಗೃಹದಲ್ಲೇ ನೋಂದಾಯಿಸಲಾಗಿದ್ದ ಆಧಾರ್‌ ಕಾರ್ಡ್‌ ಬಳಸಿಕೊಂಡು ಸಿಂಡಿಕೇಟ್‌ ಬ್ಯಾಂಕಿನಲ್ಲಿ ಉಳಿತಾಯ ಖಾತೆ ಮಾಡಿಕೊಡಲಾಗಿದೆ. ಕೈದಿಗಳು ಜೈಲಲ್ಲಿ ಇರುವವರೆಗೂ ಎಟಿಎಂ ಕಾರ್ಡ್‌ ನೀಡಲ್ಲ. ಬಿಡುಗಡೆಯಾದ ಬಳಿಕ ಅಧೀಕ್ಷಕರೇ ಬ್ಯಾಂಕ್‌ನವರಿಗೆ ಪತ್ರ ಬರೆದು ಅವರಿಗೆ ಎಲ್ಲ ಸೌಲಭ್ಯ ಕಲ್ಪಿಸುವಂತೆ ಸೂಚಿಸಲಿದ್ದಾರೆ.

ದಿನಕ್ಕೆ 100 ರೂ. ಭತ್ಯೆ:
ನಗರದ ಕೇಂದ್ರ ಕಾರಾಗೃಹದಲ್ಲಿ 411 ಸಜಾಬಂಧಿ, 187 ವಿಚಾರಣಾಧೀನ ಕೈದಿ ಸೇರಿದಂತೆ ಒಟ್ಟು 598 ಕೈದಿಗಳು ಇದ್ದಾರೆ. ಇದರಲ್ಲಿ ಸುಮಾರು 100 ರಿಂದ 112 ಕೈದಿಗಳು ಕಾರಾಗೃಹದಲ್ಲಿ ವಿವಿಧ ಕೆಲಸ ಮಾಡುತ್ತಾರೆ. ಈ ಕೈದಿಗಳಿಗೆ ದಿನಕ್ಕೆ 100 ರೂ. ಭತ್ಯೆ ನೀಡಲಾಗುತ್ತಿದ್ದು, ಈ ಹಣ ಇದೀಗ ನೇರವಾಗಿ ಕೈದಿಗಳ ಉಳಿತಾಯ ಖಾತೆಯಲ್ಲಿ ಜಮಾಗೊಳ್ಳಲಿದೆ. ಈ ಹಣವನ್ನು ಅಗತ್ಯವಿದ್ದಾಗ ಮಕ್ಕಳ ವಿದ್ಯಾಭ್ಯಾಸಕ್ಕೆ ಇನ್ನಿತರೆ ಅನಿವಾರ್ಯ ಕೆಲಸಗಳಿಗೆ ಕಾರಾಗೃಹದ ಅಧೀಕ್ಷಕರಿಂದ ಒಪ್ಪಿಗೆ ಮೇರೆಗೆ ಪಡೆಯಬಹುದು.

ಈ ಮೊದಲು ಪುಸ್ತಕದಲ್ಲಿ ಕೈದಿಗಳಿಂದ ಸಹಿ ಪಡೆದು ಹಣ ನೀಡಲಾಗುತ್ತಿತ್ತು. ಈ ಪದ್ಧತಿ ದುರುಪಯೋಗಕ್ಕೂ ಅವಕಾಶ ನೀಡುತ್ತಿತ್ತು. ಇದೀಗ ಬ್ಯಾಂಕ್‌ ಖಾತೆಗೆ ಜಮಾಗೊಳ್ಳುವುದರಿಂದ ಈ ಪದ್ಧತಿಗೆ ಬ್ರೇಕ್‌ ಬೀಳುವ ಜತೆಗೆ ಆಡಳಿತದಲ್ಲಿ ಪಾರದರ್ಶಕತೆ ಇದೆ ಎಂಬುದನ್ನು ಸೂಚಿಸುತ್ತದೆ ಎನ್ನುತ್ತಾರೆ ಅಧೀಕ್ಷಕ ಪಿ.ರಂಗನಾಥ್‌.

ಆಧಾರ್‌ ಕೇಂದ್ರ:
ಕೇಂದ್ರ ಕಾರಾಗೃಹದಲ್ಲೇ ಆಧಾರ್‌ ನೋಂದಣಿ ಕೇಂದ್ರವಿದ್ದು, ಜೈಲಿಗೆ ಬರುವ ಸಜಾಬಂಧಿ ಕೈದಿಗಳಿಗೆ ಮೊದಲು ಆಧಾರ್‌ ನೋಂದಣಿ ಮಾಡಿಸಲಾಗುತ್ತದೆ. ಕಾರ್ಡ್‌ನಲ್ಲಿ ಕಾರಾಗೃಹದ ವಿಳಾಸದ ಬದಲಿಗೆ ಕೈದಿಗೆ ಸಂಬಂಧಿಸಿದ ಊರಿನ ವಿಳಾಸವನ್ನು ನಮೂದಿಸಲಾಗಿರುತ್ತದೆ. ಜೈಲಿನಿಂದ ಬಿಡುಗಡೆಯಾದ ಮೇಲೂ ಈ ಆಧಾರ್‌ ಸಂಖ್ಯೆ ಬಳಸಿಕೊಂಡು ನರೇಗಾ ಸೇರಿದಂತೆ ಬೇರೆ ರೀತಿಯ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. 

ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿನ ಸಜಾಬಂಧಿ ಕೈದಿಗಳಿಗೆ ಸಿಂಡಿಕೇಟ್‌ ಬ್ಯಾಂಕ್‌ನಲ್ಲಿ ಜನ್‌ಧನ್‌ ಯೋಜನೆಯಡಿ ಜೀರೊ ಬ್ಯಾಲೆನ್ಸ್‌ ಉಳಿತಾಯ ಖಾತೆ ತೆರೆಯಲಾಗಿದೆ. ಅವರ ಕೂಲಿಯ ಹಣವನ್ನೂ ಇದಕ್ಕೆ ಜಮಾ ಮಾಡಲಾಗುತ್ತದೆ. ಹಿಂದೆ ಆಗುತ್ತಿದ್ದ ದುರ್ಬಳಕೆಯನ್ನು ತಪ್ಪಿಸಲು ಇದು ಸಹಕಾರಿಯಾಗಿದೆ.
– ಪಿ.ರಂಗನಾಥ್‌, ಅಧೀಕ್ಷಕರು, ಕೇಂದ್ರ ಕಾರಾಗೃಹ, ಬಳ್ಳಾರಿ

– ವೆಂಕೋಬಿ ಸಂಗನಕಲ್ಲು

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.