ಜನಸಾಹಿತ್ಯ ಸಮ್ಮೇಳನ ಸರಿಯಲ್ಲ: ನಟ ಚೇತನ್
Team Udayavani, Jan 7, 2023, 11:15 PM IST
ಹರಪನಹಳ್ಳಿ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಒಂದು ಪಕ್ಷಕ್ಕೆ ಸೀಮಿತವಾಗಿದೆ ಎಂದು ಅದನ್ನು ವಿರೋಧಿಸುವ ಪ್ರಯತ್ನದಲ್ಲಿ ಇನ್ನೊಂದು ಪಕ್ಷಕ್ಕೆ ಸೀಮಿತವಾಗಿ ಜನಸಾಹಿತ್ಯ ಸಮ್ಮೇಳನ ನಡೆಸುವುದು ಸಮಂಜಸವಲ್ಲ. ಸಾಮಾಜಿಕ ಹಾಗೂ ಸೈದ್ಧಾಂತಿಕವಾಗಿ ವ್ಯವಸ್ಥೆ ವಿರುದ್ಧ ಬಂಡಾಯವಾದರೆ ಉತ್ತಮ ಬೆಳವಣಿಗೆ ಎಂದು ಚಿತ್ರನಟ ಅಹಿಂಸಾ ಚೇತನ್ ಹೇಳಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಅವರವರ ಸಿದ್ಧಾಂತಗಳ ಮೇಲೆ ಸಾಹಿತ್ಯ ಸಮ್ಮೇಳನಗಳು ನಡೆಯುತ್ತಿರುವುದು ವಿಷಾದನೀಯ. ಬುದ್ಧ, ಬಸವ, ಅಂಬೇಡ್ಕರ್, ಪೆರಿಯಾರ್, ಪುಲೆಯಂತವರ ವಿಚಾರಗಳನ್ನು ಮುಂದಿಟ್ಟುಕೊಂಡು ವ್ಯವಸ್ಥೆ ವಿರುದ್ಧ ಸಾಹಿತ್ಯ ಚಳವಳಿ ಆಗಬೇಕು ಎಂದರು.
ಪಠ್ಯಪುಸ್ತಕ ವಿಷಯದಲ್ಲಿ ಬರಗೂರು ರಾಮಚಂದ್ರಪ್ಪ ಹಾಗೂ ರೋಹಿತ್ ಚಕ್ರತೀರ್ಥ ಇಬ್ಬರೂ ಸರಿಯಾದ ನ್ಯಾಯವನ್ನು ಒದಗಿಸಿಲ್ಲ ಎಂದು ಆರೋಪಿಸಿದರು.
ಚುನಾವಣೆ ಬಳಿಕ ಪೌರತ್ವ ಚಿಂತನೆ
ನನ್ನ ತಂದೆ-ತಾಯಿ ಈಗಲೂ ಅಮೆರಿಕದಲ್ಲಿದ್ದಾರೆ. ಸಂದರ್ಭ ಬಂದರೆ ನಾನೂ ಅಲ್ಲಿಗೆ ಹೋಗಬೇಕಾಗುತ್ತದೆ. ಸದ್ಯ ಹೋಗುವ ಯೋಚನೆ ಇಲ್ಲ. ಈಗ ಪೌರತ್ವ ಪಡೆದರೆ ಚುನಾವಣೆಗೆ ಸ್ಪರ್ಧಿಸಲು ಪಡೆದಿದ್ದಾರೆ ಎಂದು ಟೀಕಿಸುತ್ತಾರೆ. ನನಗೆ ಮತದಾನದ ಹಕ್ಕು ಹಾಗೂ ಸರಕಾರಿ ನೌಕರನಾಗಲು ಅರ್ಹತೆ ಇರುವುದಿಲ್ಲ. ನಾನು ದೇವದಾಸಿ ಮಹಿಳೆಯರು, ಕಾರ್ಮಿಕರು, ಬಡವರು, ದಲಿತರು ಒಳಗೊಂಡು ಸಮಾಜಮುಖೀ ಚಟುವಟಿಕೆಯಲ್ಲಿ ತೊಡಗಿಕೊಳ್ಳುವೆ. ಚುನಾವಣೆ ಮುಗಿದ ಬಳಿಕ ಪೌರತ್ವ ಪಡೆಯುವ ಬಗ್ಗೆ ಚಿಂತನೆ ಮಾಡುವುದಾಗಿ ಚೇತನ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!