ಅನ್ನದಾತನ ಕೈ ಹಿಡಿಯದ ಮಲ್ಲಿಗೆ


Team Udayavani, Jun 4, 2018, 3:11 PM IST

dvg-4.jpg

ಹೂವಿನಹಡಗಲಿ: ಎಂತಹ ಸಂಕಷ್ಟದ ಪರಿಸ್ಥಿತಿಯಲ್ಲೂ ರೈತನ ಕೈಹಿಡಿದಿದ್ದ ಮಲ್ಲಿಗೆ ಬೆಳೆ ಇಂದು ಬೆಲೆ ಕುಸಿತದಿಂದಾಗಿ ಆತಂಕದಲ್ಲಿಯೇ ಕಾಲ ನೂಕುವಂತಹ ಸ್ಥಿತಿ ನಿರ್ಮಾಣವಾಗಿದೆ. ತಾಲೂಕಿನ ಹನಕನಹಳ್ಳಿ, ದೇವಗೊಂಡನಹಳ್ಳಿ, ಗುಜನೂರು, ಮೀರಾಕೊರ್ನಹಳ್ಳಿ, ಶಿವಲಿಂಗನಹಳ್ಳಿ, ನಾಗತಿಬಸಾಪುರ, ಹಗುಲೂರು, ಮುದೇನೂರು, ಹಡಗಲಿ, ಕೊಂಬಳಿ, ಆಂಕ್ಲಿ, ಪುರ, ಹೊನ್ನುರು, ಹಾಳ್‌ತಿಮ್ಲಾಪುರ, ತಿಪ್ಪಪುರ, ಹಗರನೂರು, ಹಿರೇಹಡಗಲಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಒಟ್ಟು 300 ಹೆಕ್ಟೇರ್‌ ಪ್ರದೇಶದಲ್ಲಿ ರೈತರು ಮಲ್ಲಿಗೆ ಹೂವು ಬೆಳೆಯುತ್ತಿದ್ದಾರೆ. 

ಆದರೆ ಇಷ್ಟೊಂದು ಪ್ರಮಾಣದಲ್ಲಿ ಮಲ್ಲಿಗೆ ಹೂವಿನ ಬೆಳೆಯುತ್ತಿರುವ ರೈತರಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಇಲ್ಲದಿರುವುದೇ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಆದರೂ ಇಲ್ಲಿ ಬೆಳೆದ ಮಲ್ಲಿಗೆ ಹೂವು ದೂರದ ಶಹರಗಳಿಗೆ ದಲ್ಲಾಳಿಗಳ ಮೂಲಕ ಪೂರೈಕೆಯಾಗುತ್ತದೆ. ಆದರೆ ಅವರು ಬಯಸಿದ ಲಾಭಕ್ಕೂ ಹೂವು ಮಾರಾಟವಾಗುವುದಿಲ್ಲ.
 
ಕನಿಷ್ಠ ಆರು ತಿಂಗಳು ಬೆಳೆಯಾಗಿರುವ ಮಲ್ಲಿಗೆ ಹೂವು, ಸಾಮಾನ್ಯವಾಗಿ ಮಾರ್ಚ್‌ ಕೊನೆ ವಾರದಿಂದ ಫಸಲು ಬರಲು ಪ್ರಾರಂಭವಾಗುತ್ತದೆ. ಅಲ್ಲಿಂದ ಸುಮಾರು ಸೆಪ್ಟಂಬರ್‌ ತಿಂಗಳವರೆಗೆ ಸುಮಾರು 6 ರಿಂದ 8 ತಿಂಗಳು ರೈತರಿಗೆ ಉದ್ಯೋಗ ಒದಗಿಸುವ ಬೆಳೆಯಾಗಿದೆ. ಮಲ್ಲಿಗೆ ಸಸಿ ಒಮ್ಮೆ ನಾಟಿ ಮಾಡಿ ವರ್ಷ ಪೋಷಣೆ ಮಾಡಿದರೆ ಸಾಕು, ಅದು ಸುಮಾರು 10 ರಿಂದ 15 ವರ್ಷಗಳವರೆಗೆ ರೈತನಿಗೆ ಆಸರೆಯಾಗಿ ನಿಲ್ಲುತ್ತದೆ. ಮೊದಲು 2 ರಿಂದ 3 ವರ್ಷದಲ್ಲಿ ಕಡಿಮೆ ಮೊಗ್ಗು ಕೊಡುತ್ತದೆ. ವರ್ಷ ಕಳೆದಂತೆ ಹೆಚ್ಚು ಹೆಚ್ಚು ಮೊಗ್ಗು ಬರಲು ಪ್ರಾರಂಭವಾಗುತ್ತದೆ. ಇದರಿಂದಾಗಿ ರೈತರಿಗೆ ಹೆಚ್ಚು ಲಾಭ ಸಿಗುತ್ತದೆ.

ಹೀಗಾಗಿಯೇ ತಾಲೂಕಿನಲ್ಲಿ ವರ್ಷದಿಂದ ವರ್ಷಕ್ಕೆ ಮಲ್ಲಿಗೆ ಬೆಳೆಗಾರರ ಸಂಖ್ಯೆ ಹೆಚ್ಚಾಗುತ್ತಿದೆ. ಕಳೆದ ಮೂರು ವರ್ಷದಲ್ಲಿ ಮಲ್ಲಿಗೆ ಬೆಳೆಗಾರರ ಸಂಖ್ಯೆ ದುಪ್ಪಟು ಆಗಿದೆ. ಆದರೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಮಲ್ಲಿಗೆ ಬೆಳೆಯುತ್ತಿರುವ ರೈತರಿಗೆ ಮಾರುಕಟ್ಟೆ ಒಂದು ದೊಡ್ಡ ಸಮಸ್ಯೆಯಾಗಿದ್ದು, ರೈತ ತಾನು ಬೆಳೆದ ಮಲ್ಲಿಗೆಗೆ ಸರಿಯಾದ ಬೆಲೆ ಸಿಗದೆ ನಷ್ಟ ಅನುಭವಿಸುತ್ತಿದ್ದಾನೆ. 

ರೈತರು ಮೊದಲಿನಿಂದಲೂ ಸಾಮಾನ್ಯವಾಗಿ ಶಿವಮೊಗ್ಗ, ದಾವಣಗೆರೆ, ಹುಬ್ಬಳ್ಳಿ, ಹಾವೇರಿ ಮುಂತಾದ ಶಹರಗಳಿಗೆ ಮಾತ್ರ ಮಾರುಕಟ್ಟೆ ಹುಡಿಕಿಕೊಂಡು ಕಳುಹಿಸುವುದು ವಾಡಿಕೆಯಾಗಿದೆ. ಈ ಮಾರುಕಟ್ಟೆಯಲ್ಲಿ ಯಾವಾಗ ಬೇಡಿಕೆಗಿಂತ ಹೆಚ್ಚು ಮಲ್ಲಿಗೆ ಮಗ್ಗು ಬರುತ್ತದೆಯೋ ಆ ತಕ್ಷಣದಲ್ಲಿ ದರ ಕಡಿಮೆಯಾಗುವ ಸಂದರ್ಭಗಳು ರೈತರಿಗೆ ಬಂದೋದಗುತ್ತದೆ. ಅಲ್ಲಿ ಕನಿಷ್ಠ ಬೆಲೆಗೆ ಪ್ರತಿ ಕ್ವಿಂಟಲ್‌ಗೆ ದರ ನಿಗದಿ ಮಾಡಿ ದಲ್ಲಾಳಿಗಳು ಮಾರಾಟ ಮಾಡುತ್ತಾರೆ. ಇದರಿಂದಾಗಿ ರೈತರಿಗೆ
ತುಂಬಲಾರದ ನಷ್ಟವಾಗುತ್ತದೆ.

ಮಲ್ಲಿಗೆ ಮೊಗ್ಗು ಬಿಡಿಸಲು ಕಾರ್ಮಿಕರಿಗೆ ಪ್ರತಿ ಕೆಜಿಗೆ 60 ರಿಂದ 70 ರೂ. ಕೂಲಿ ಕೊಡಬೇಕು. ಒಳ್ಳೆಯ ಬೆಲೆ ಸಿಕ್ಕರೆ ರೈತರಿಗೆ ತುಂಬಾ ಖುಷಿ.ಆದರೆ ಕೆಲವೊಮ್ಮೆ ಯಾವುದೇ ದರ ಸಿಗದೆ 30ರಿಂದ 35 ರೂ.ಗೆ ಕೆಜಿಯಂತೆ ದರ ಸಿಕ್ಕಾಗ ರೈತರಿಗೆ ತುಂಬಾ ನಷ್ಟವಾಗುತ್ತದೆ. ಇದರಿಂದ ರೈತ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕುತ್ತಾನೆ. ಇತ್ತೀಚಿಗೆ ಕಳೆದ 2 ರಿಂದ 3 ವಾರದಲ್ಲಿ ಮಲ್ಲಿಗೆ ಬೆಲೆ ಪಾತಾಳಕ್ಕೆ ಕುಸಿದು ರೈತರು ತುಂಬಾ ನಷ್ಟ ಅನುಭವಿಸುವ ಪರಿಸ್ಥಿತಿ ರ್ಮಾಣವಾಗಿದೆ.

ತಾಲೂಕಿನಲ್ಲಿ ಅತಿ ಹೆಚ್ಚು ಮಲ್ಲಿಗೆ ಬೆಳೆಯುತ್ತಿದ್ದು, ರೈತರಿಗೆ ಮಾರುಕಟ್ಟೆ ಒದಗಿಸುವುದು ದೊಡ್ಡ ಸವಾಲಾಗಿದೆ. ಈ ಬಗ್ಗೆ ಯೋಜನೆಯೊಂದು ರೂಪಿಸಿದ್ದು ಮಲ್ಲಿಗೆ ಬೆಳೆಗಾರಿಂದಲೇ ರೈತ ಉತ್ಪಾದಕ ಸಂಸ್ಥೆ ಸ್ಥಾಪಿಸಿ ಅವರಿಂದ ಷೇರು ಬಂಡವಾಳ ಪಡೆದುಕೊಂಡು ಸರ್ಕಾರದಿಂದ ಆವರ್ತ ನಿಧಿ,
ಸಹಾಯಧನ ರೂಪದಲ್ಲಿ ಬರುವಂತೆ ಮಾಡುವುದು ಒಂದು ಮಾರ್ಗವಾಗಿದೆ. ರೈತರು ಬೆಳೆದ ಮಲ್ಲಿಗೆ ಮೊಗ್ಗು ಬೇರೆ ಮಾರುಕಟ್ಟೆಗೆ ಕಳುಹಿಸುವ ಬದಲು ಇಲ್ಲಿಯೇ ರಾಜ್ಯ ಹಾಗೂ ಹೊರ ರಾಜ್ಯದ ಮಾರುಕಟ್ಟೆ ಕಲ್ಪಿಸುವ ವ್ಯವಸ್ಥೆ ಮಾಡಬೇಕಾಗಿದೆ. ತುಂಬಾ ದೂರದ ಮಾರುಕಟ್ಟೆಗೆ ಕೊಂಡೊಯ್ಯಲು ಸುಸಜ್ಜಿತ ವಾಹನ, ಇತರೆ ಸೌಕರ್ಯ ಕಲ್ಪಿಸುವ ಚಿಂತನೆ ಇದೆ. ಮುಂದಿನ ದಿನಗಳಲ್ಲಿ ರೈತರ ಸಹಕಾರದಿಂದ ಈ ಯೋಜನೆ ಜಾರಿಗೊಳಿಸಲು ಇಲಾಖೆ ಯೋಚಿಸಿದೆ.

ರೈತರು ಮಲ್ಲಿಗೆ ಬೆಳೆ ಜತೆಯಲ್ಲಿ ಪರ್ಯಾಯ ಬೆಳೆಯಾದ ಕನಕಾಂಬರಿ, ದುಂಡು ಮಲ್ಲಿಗೆ ಮುಂತಾದ ಬೆಳೆ ಬೆಳೆಯಲು ಮುಂದಾಗಬೇಕೆಂದು ಹಿರಿಯ ತೋಟಗಾರಿಕೆ ಸಹಾಯಕ ನಿರ್ದೇಶಕ ಪಿ.ಎಂ.ರಮೇಶ್‌ ರೈತರಿಗೆ ಸಲಹೆ ನೀಡಿದ್ದಾರೆ.

ಸುಮಾರು 50 ವರ್ಷದಿಂದ ಮಲ್ಲಿಗೆ ಬೆಳೆಯನ್ನು ಗುತ್ತಿಗೆ ಪಡೆದು ವ್ಯಾಪಾರ ಮಾಡುತ್ತಿದ್ದೇನೆ. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಮಲ್ಲಿಗೆ ಬೆಲೆ ಕುಸಿತ ಕಂಡಿರುವುದು ಇದೇ ಮೊದಲು. ಬೆಲೆ ಕುಸಿತದಿಂದ ಸುಮಾರು 5 ರಿಂದ 6 ಲಕ್ಷ ರೂ. ನಷ್ಟ ಹೊಂದಿದ್ದೇನೆ. 
ಗೌಸು ಸಾಹೇಬ್‌, ಮಲ್ಲಿಗೆ ಬೆಳೆಗಾರ.

ಪ್ರತಿ ಕೆಜಿ ಮೊಗ್ಗು ಬಿಡಿಸಲು 60ರಿಂದ 70 ರೂ. ಕೂಲಿ ಕೊಡಬೇಕು. ಎಕರೆ ಮಲ್ಲಿಗೆ ಬೆಳೆಯಲು ಲಕ್ಷಾಂತರ ರೂ. ಖರ್ಚಾಗುತ್ತದೆ. ಇಷ್ಟು ಖರ್ಚು ಮಾಡಿ ಬೆಳೆದ ಮಲ್ಲಿಗೆಗೆ ಸೂಕ್ತ ಬೆಲೆ ಸಿಗದೆ ತುಂಬಾ ಸಂಕಷ್ಟ ಅನುಭವಿಸುವ ಸ್ಥಿತಿ ನಿರ್ಮಾಣವಾಗುತ್ತದೆ. ಮಲ್ಲಿಗೆ ಬೆಳೆಗಾರನ ಬದುಕು ಉತ್ತಮ ವಾಗಬೇಕಾದರೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕು.
ಮಲ್ಲಿಗೆ ಬೆಳೆಗಾರ

„ವಿಶ್ವನಾಥ ಹಳ್ಳಿಗುಡಿ

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.