ಜಿಂದಾಲ್ ಭೂಮಿ ಪರಭಾರೆ ತಡೆ ನೀಡಿರುವುದು ಸರಿಯಲ್ಲ: ಕೆ.ಸಿ.ಕೊಂಡಯ್ಯ
Team Udayavani, Jun 3, 2021, 1:03 PM IST
ಬಳ್ಳಾರಿ: ಜಿಂದಾಲ್ 3667 ಎಕರೆ ಭೂಮಿಯನ್ನು ಪರಭಾರೆಗೆ ತಡೆ ನೀಡಿರುವುದು ಸರ್ಕಾರದ ನಿರ್ಧಾರ ಸರಿಯಲ್ಲ ಎಂದು ವಿಧಾನ ಪರಿಷತ್ ಸದಸ್ಯ ಕೆ.ಸಿ.ಕೊಂಡಯ್ಯ ಹೇಳಿದರು.
ಚೇಂಬರ್ ಆಫ್ ಕಾಮರ್ಸ್ ಜೊತೆ ಜಂಟಿ ಸುದ್ಧಿಗೋಷ್ಠಿ ನಡೆಸಿದ ಅವರು ಜಿಂದಾಲ್ ಪರ ಬ್ಯಾಟ್ ಬೀಸಿದರು.
ಲೀಜ್ ಕಮ್ ಸೇಲ್ ಮಾಡೋ ಬಗ್ಗೆ ಈ ಹಿಂದೆಯೇ ಸರ್ಕಾರ ನಿಯಮಗಳನ್ನು ರೂಪಿಸಿದೆ. ಅಗ್ರಿಮೆಂಟ್ ಪ್ರಕಾರ ನಡೆದುಕೊಳ್ಳಬೇಕು. ಈ ಹಿಂದೆಯೂ ಈ ರೀತಿ ಪರಭಾರೆ ಮಾಡಿಕೊಟ್ಟಿದೆ. ಯಾರದೋ ಮಾತಿಗೆ ಮಣಿದು ಪರಭಾರೆ ಮಾಡದೆ ಇರುವುದು ಸರಿಯಲ್ಲ ಎಂದು ಸಚಿವ ಆನಂದ ಸಿಂಗ್ ಗೆ ಕುಟುಕಿದರು.
ಇದನ್ನೂ ಓದಿ:ಎಸ್ಎಸ್ಸಿ ಫಲಿತಾಂಶ ಗೊಂದಲ ಮಧ್ಯೆ 11ನೇ ತರಗತಿಗೆ ಪ್ರವೇಶ ಪ್ರಕ್ರಿಯೆ ಪ್ರಾರಂಭ
ಪರಭಾರೆ ವಿಚಾರದಲ್ಲಿ ವಿನಾಕಾರಣ ಗೊಂದಲ ಮತ್ತು ರಾಜಕೀಯ ಮಾಡುತ್ತಿದ್ದಾರೆ. ಬೇರೆ ಜಿಲ್ಲೆಯವರು ಈ ಬಗ್ಗೆ ಮಾತನಾಡುತ್ತಾರೆ ಎಂದು ಹೆಚ್.ಕೆ. ಪಾಟೀಲ್ ಹೆಸರು ಹೇಳದೇ ಕೊಂಡಯ್ಯ ಟಾಂಗ್ ಕೊಟ್ಟರು.
ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಜಿಂದಾಲ್ ಮೇಲೆ ಎರಡು ಲಕ್ಷ ಜನರು ಅವಲಂಭಿತರಾಗಿದ್ದಾರೆ. ಕೋವಿಡ್ ಸಮಯದಲ್ಲಿ ಆಕ್ಸಿಜನ್ ನೀಡಿದ್ದಾರೆ. ಸಾವಿನ ಸಂಖ್ಯೆ ಕಡಿಮೆ ಮಾಡಿದ್ದಾರೆ. ಕಾಲಕಾಲಕ್ಕೆ ಎಲ್ಲ ಸರ್ಕಾರಗಳು ಜಿಂದಾಲ್ ಸೇರಿದಂತೆ ಇತರೆ ಇಂಡಸ್ಟ್ರಿಗಳಿಗೆ ಈ ರೀತಿ ಲೀಜ್ ಕಂ ಸೇಲ್ ಕೊಟ್ಟಿದ್ದಾರೆ. ಜಿಂದಾಲ್ ನವರು ಕಾನೂನು ಹೋರಾಟ ಮಾಡಿದರೆ ಸರ್ಕಾರ ಮುಜುಗರ ಅನುಭವಿಸಬೇಕಾಗುತ್ತದೆ. ಸರ್ಕಾರದ ವಿರುದ್ಧ ನಾನೇ ಕೋರ್ಟ್ ಗೆ ಪಿಐಎಲ್ ಮೊರೆ ಹೋಗುವೆ ಎಂದು ಕೊಂಡಯ್ಯ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ