ವಿಮ್ಸ್‌ ಪ್ರಕರಣಕ್ಕೆ ವೈದ್ಯರು ಕಾರಣರಲ್ಲ: ಸಚಿವ ಡಾ| ಸುಧಾಕರ್‌

ಚಿಕಿತ್ಸೆ ಫ‌ಲಿಸದೆ ಇಬ್ಬರ ಸಾವು ವೈದ್ಯಾಧಿಕಾರಿಗಳೊಂದಿಗೆ ಸಭೆ ಬಳಿಕ ಸಚಿವರ ಹೇಳಿಕೆ

Team Udayavani, Sep 18, 2022, 11:01 PM IST

ವಿಮ್ಸ್‌ ಪ್ರಕರಣಕ್ಕೆ ವೈದ್ಯರು ಕಾರಣರಲ್ಲ: ಸಚಿವ ಡಾ| ಸುಧಾಕರ್‌

ಬಳ್ಳಾರಿ: ವಿಮ್ಸ್‌ ನಲ್ಲಿ ಸೆ.14ರಂದು ಇಬ್ಬರು ಒಳ ರೋಗಿಗಳು ಸಾವಿಗೀಡಾದ ಘಟನೆಗೆ ನಿರ್ಲಕ್ಷ್ಯ ಕಾರಣ ಅಲ್ಲ ಎಂದು ಆರೋಗ್ಯ ಸಚಿವ ಡಾ| ಸುಧಾಕರ್‌ ಸ್ಪಷ್ಟಪಡಿಸಿದರು.

ಘಟನೆ ಕುರಿತು ವಿಮ್ಸ್‌ ಆಸ್ಪತ್ರೆಯಲ್ಲಿ ರವಿವಾರ ವೈದ್ಯಾ ಧಿಕಾರಿಗಳ ಜತೆಗೆ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.14ರ ಘಟನೆಗೆ ವಿದ್ಯುತ್‌ ಕಡಿತ ಅಥವಾ ವೆಂಟಿಲೇಟರ್‌ ಸಮಸ್ಯೆ ಕಾರಣವಲ್ಲ. ಆಗ ವರದಿಯಾದಂತೆ ಅಲ್ಲಿ ಮೂವರು ಮೃತಪಟ್ಟಿಲ್ಲ. ಅಸುನೀಗಿದ ಇಬ್ಬರು ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದರು. ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆ ಯುಸಿರೆಳೆದಿದ್ದಾರೆ ಎಂದು ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ನೀಡಿರುವ ವರದಿಗಳಲ್ಲಿ ಹೇಳಲಾಗಿದೆ ಎಂದರು.

ಮೃತರ ಪೈಕಿ ಓರ್ವ ಬಹು ಅಂಗಾಂಗ ವೈಫಲ್ಯಕ್ಕೆ ತುತ್ತಾಗಿ 2 ವರ್ಷಗಳಿಂದ ಡಯಾಲಿಸಿಸ್‌ ಮಾಡುತ್ತಿದ್ದರು. ಮೆದುಳಿನಿಂದ ರಕ್ತಸ್ರಾವ ಆಗುತ್ತಿದ್ದ ಅವರ ಆರೋಗ್ಯ ಸ್ಥಿತಿ ಕುರಿತು ಕುಟುಂಬಸ್ಥರಿಗೆ ವಿಮ್ಸ್‌ ವೈದ್ಯರು ಆಪ್ತ ಸಂದರ್ಶನದ ಮೂಲಕ ಸಂಪೂರ್ಣ ಮಾಹಿತಿ ನೀಡಿದ್ದರು. ಅವರು ಸೆ.14ರಂದು ಬೆಳಗ್ಗೆ 9.35ಕ್ಕೆ ಮೃತರಾದ ಕುರಿತು ಆಸ್ಪತ್ರೆ ದಾಖಲೆಗಳು ತಿಳಿಸಿವೆ ಎಂದರು.

ಸಾವಿಗೀಡಾದ ಮತ್ತೋರ್ವ ಮಹಿಳೆ ವಿಷಪೂರಿತ ಹಾವು ಕಡಿತಕ್ಕೆ ಒಳಗಾಗಿದ್ದರು. ಅವರು ಆಸ್ಪತ್ರೆಗೆ ಬಂದಾಗ ಅವರ ರಕ್ತದೊತ್ತಡ 90/50 ಇತ್ತು. ಬಾಯಿ, ಮೂಗಲ್ಲಿ ರಕ್ತಸ್ರಾವ ಆಗುತ್ತಿತ್ತು. ದೃಷ್ಟಿ ಕ್ಷೀಣಿಸಿತ್ತು. ಸೆ.13ರಂದು ದಾಖಲಾಗಿದ್ದ ಅವರಿಗೆ ನಮ್ಮ ವೈದ್ಯರ ತಂಡ ಹಾಗೂ ಸಿಬಂದಿ ಸೂಕ್ತ ಚಿಕಿತ್ಸೆ ಕೊಟ್ಟಿದ್ದಾರೆ. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ ಎಂದು ವಿವರಿಸಿದರು.

ಘಟನೆ ಕುರಿತು ತನಿಖೆ ನಡೆಸಲು ನೇಮಿಸಿದ್ದ ಡಾ|ಸ್ಮಿತಾ ನೇತೃತ್ವದ ತಂಡಕ್ಕೆ ವಿದ್ಯುತ್‌ ಕುರಿತಾದ ವಿಚಾರದಲ್ಲಿ ಸ್ಪಷ್ಟತೆ ಇಲ್ಲ. ಈ ಬಗ್ಗೆ ಮಾಹಿತಿ ನೀಡಲು ಓರ್ವ ವಿದ್ಯುತ್‌ ಎಂಜಿನಿಯರ್‌ನ ನೆರವು ಕೇಳಿದ್ದಾರೆ. ಸೋಮವಾರ ಅವರಿಗೆ ಕೆಪಿಟಿಸಿಎಲ್‌ ಅಧಿಕಾರಿಯೊಬ್ಬರ ನೆರವು ನೀಡಲಾಗುವುದು ಎಂದರು.

ಸುಳ್ಳು ಹೇಳಿ ರಾಜಕಾರಣ ಮಾಡಿಲ್ಲ: ಶ್ರೀರಾಮುಲು
ಬಳ್ಳಾರಿ: ನಾನು ಈ ನೆಲವನ್ನು ನಂಬಿಕೊಂಡು ರಾಜಕಾರಣ ಮಾಡಿಕೊಂಡು ಬಂದಿದ್ದೇನೆಯೇ ಹೊರತು ಸುಳ್ಳು ಹೇಳಿ ಅಲ್ಲ ಎಂದು ಸಾರಿಗೆ ಸಚಿವ ಬಿ. ಶ್ರೀರಾಮಲು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಅವರಂತೆ ಪಕ್ಷದಿಂದ ಪಕ್ಷಕ್ಕೆ ಬಂದು ಸುಳ್ಳು ಹೇಳಿದ್ದರೆ ಇನ್ನೂ ದೊಡ್ಡ ರಾಜಕಾರಣಿ ಆಗುತ್ತಿದ್ದೆ. ವಿಮ್ಸ್‌ ಪ್ರಕರಣಕ್ಕೆ ಸಂಬಂ ಧಿಸಿ ಎಲ್ಲ ಎಚ್‌ಒಡಿಗಳಿಂದ ಸಂಪೂರ್ಣ ಮಾಹಿತಿ ಪಡೆದಿದ್ದು, ಆಸ್ಪತ್ರೆ ಕಡೆಯಿಂದ ಯಾವುದೇ ಲೋಪವಾಗಿಲ್ಲ ಎಂದರು.

ವೈದ್ಯಕೀಯ ವಿಷಯದಲ್ಲಿ ನಾನು ತಜ್ಞನಲ್ಲ. ನಾನು ಏನು ಹೇಳಿದರೂ ರಾಜಕಾರಣ ಆಗುತ್ತದೆ. ಪ್ರಕರಣದ ಬಗ್ಗೆ ತನಿಖೆಗಾಗಿ ರಚಿಸಿರುವ ಸಮಿತಿಯವರು ಸೂಕ್ತವಾಗಿ ತನಿಖೆ ನಡೆಸಿ ವರದಿ ನೀಡಲಿದ್ದಾರೆ. ಅದನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು. ವಿಮ್ಸ್‌ಗೆ ಈಗಾಗಲೇ 500 ಕೆವಿ ಸಾಮರ್ಥ್ಯದ 2 ಜನರೇಟರ್‌ ನೀಡಲಾಗಿದೆ. ಜತೆಗೆ ಒಂದು ಬಾಡಿಗೆ ಜನರೇಟರ್‌ ಕೂಡ ನೀಡಲಾಗಿದೆ. ಕೆಎಂಆರ್‌ಇಸಿ ಅನುದಾನದಡಿ ಇನ್ನೆರಡು ಜನರೇಟರ್‌ ಖರೀದಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.