ಬಂಧನಕ್ಕೊಳಗಾಗಿ ಬೆಂಗಳೂರಿಗೆ ಬಂದ ಶಾಸಕ ಕಂಪ್ಲಿ ಗಣೇಶ್
Team Udayavani, Feb 21, 2019, 3:54 AM IST
ಬೆಂಗಳೂರು: ನಗರದ ಈಗಲ್ ಟನ್ ರೆಸಾರ್ಟ್ ನಲ್ಲಿ ಕಾಂಗ್ರೆಸ್ ಶಾಸಕ ಆನಂದ ಸಿಂಗ್ ಅವರ ಮೇಲೆ ಹಲ್ಲೆ ನಡೆಸಿ ಬಳಿಕ ತಲೆಮರೆಸಿಕೊಂಡಿದ್ದ ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ಅವರನ್ನು ಬಿಡದಿ ಪೊಲೀಸರ ವಿಶೇಷ ತಂಡವು ಬುಧವಾರದಂದು ಗುಜರಾತ್ ನಲ್ಲಿ ಬಂಧಿಸಿತ್ತು. ಘಟನೆ ನಡೆದು ಒಂದು ತಿಂಗಳ ಬಳಿಕ ಪೊಲೀಸರ ಬಲೆಗೆ ಬಿದ್ದ ಶಾಸಕ ಗಣೇಶ್ ಅವರನ್ನು ಇಂದು ಬೆಳಿಗ್ಗೆ ನಗರಕ್ಕೆ ಕರೆತರಲಾಯಿತು.
ಗುಜರಾತ್ ನ ಸೋಮನಾಥ ಬಳಿಯ ಸುಖಸಾಗರ್ ಹೊಟೇಲ್ ನಲ್ಲಿ ಬಿಡದಿ ಪೊಲೀಸರ ವಿಶೇಷ ತಂಡವು ಶಾಸಕ ಗಣೇಶ್ ಅವರನ್ನು ಬಂಧಿಸಿತ್ತು. ಇಂದು ಕೆ.ಐ.ಎ.ಎಲ್. ವಿಮಾನ ನಿಲ್ದಾಣದ ಮೂಲಕ ಪೊಲೀಸರು ಶಾಸಕ ಗಣೇಶ್ ಅವರನ್ನು ನಗರಕ್ಕೆ ಕರೆತಂದರು. ವಿಮಾನ ನಿಲ್ದಾಣದಿಂದ ನೇರವಾಗಿ ಬಂಧಿತ ಶಾಸಕ ಗಣೇಶ್ ಅವರನ್ನು ಬಿಗು ಪೊಲೀಸ್ ಬಂದೋಬಸ್ತ್ ನಲ್ಲಿ ಬಿಡದಿ ಠಾಣೆಗೆ ಕರೆದೊಯ್ಯಲಾಯಿತು. ಅಲ್ಲಿಂದ ಅವರನ್ನು ರಾಮನಗರದಲ್ಲಿರುವ ಸಿ.ಜೆ.ಎಂ. ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಲಿದ್ದಾರೆ. ಬಂಧಿತ ಶಾಸಕ ಗಣೇಶ್ ಅವರನ್ನು ಠಾಣೆಗೆ ಕರೆತರಲಾಗುತ್ತಿರುವ ಹಿನ್ನಲೆಯಲ್ಲಿ ಬಿಡದಿ ಠಾಣೆಯ ಸುತ್ತಮುತ್ತ ಪೊಲೀಸ್ ಬಂದೋಬಸ್ತ್ ಅನ್ನು ಬಿಗಿಗೊಳಿಸಲಾಗಿದೆ.
ಜೈಲೂಟ ಗ್ಯಾರಂಟಿ?
ಬಿಡದಿ ಪೊಲೀಸರ ವಶದಲ್ಲಿರುವ ಕಂಪ್ಲಿ ಗಣೇಶ್ ಅವರನ್ನು ಇಂದೇ ರಾಮನಗರದಲ್ಲಿರುವ ಸಿ.ಜೆ.ಎಂ. ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ. ಅಲ್ಲಿ ಅವರಿಗೆ ನ್ಯಾಯಾಂಗ ಬಂಧನ ವಿಧಿಸುವ ಸಾಧ್ಯತೆ ಹೆಚ್ಚಾಗಿರುವುದರಿಂದ ಗಣೇಶ್ ಗೆ ಕೆಲ ದಿನಗಳ ಕಾಲ ಜೈಲೂಟ ಗ್ಯಾರಂಟಿ ಎನ್ನಲಾಗುತ್ತಿದೆ. ಶುಕ್ರವಾರದಂದು ಶಾಸಕ ಗಣೇಶ್ ಅವರ ಬೇಲ್ ಅರ್ಜಿಯನ್ನು ಸಲ್ಲಿಸಲಾಗುವುದು ಎಂದು ಅವರ ಪರ ವಕೀಲ ಹನುಮಂತರಾಯ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
MUST WATCH
ಹೊಸ ಸೇರ್ಪಡೆ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ