![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಗ್ರಾಪಂಗಳಿಗೆ ನಾಮನಿರ್ದೇಶನ ಮಾಡಿದರೆ ಹೋರಾಟ: ಶಾಸಕ ಗಣೇಶ
Team Udayavani, May 31, 2020, 1:01 PM IST
![31-May-09](https://www.udayavani.com/wp-content/uploads/2020/05/31-May-09-547x465.gif)
ಕಂಪ್ಲಿ: ಮೇ ಮತ್ತು ಜೂನ್ ತಿಂಗಳಲ್ಲಿ ಆಡಳಿತಾವಧಿ ಮುಗಿಸುತ್ತಿರುವ ಗ್ರಾಪಂಗಳಿಗೆ ನಾಮನಿರ್ದೇಶನ ಮಾಡಿದರೆ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಸ್ಥಳೀಯ ಶಾಸಕ ಜೆ.ಎನ್. ಗಣೇಶ್ ತಿಳಿಸಿದರು.
ಅವರು ಪಟ್ಟಣದ ತಮ್ಮ ನಿವಾಸದ ಜನಸಂಪರ್ಕ ಕಚೇರಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಕಂಪ್ಲಿ ವಿಧಾನಸಭಾ ಕ್ಷೇತ್ರದ 28 ಗ್ರಾಮ ಪಂಚಾಯಿತಿಗಳಿಗೆ ನಾಮನಿರ್ದೇಶನ ಮಾಡುವ ಸಂಬಂಧ ಮಾಜಿ ಶಾಸಕ ಟಿ.ಎಚ್. ಸುರೇಶಬಾಬು ಕೆಲವರಿಂದ ದಾಖಲಾತಿಗಳನ್ನು ಪಡೆಯುವ ಮೂಲಕ ಕ್ಷೇತ್ರದಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆಂದು ಆರೋಪಿಸಿದರು. ನಾಮನಿರ್ದೇಶನಕ್ಕಾಗಿ ಗುರುತಿನ ಚೀಟಿ, ಆಧಾರ್ ಕಾರ್ಡ್ ಸಂಗ್ರಹಿಸುತ್ತಿದ್ದು, ಕಾಂಗ್ರೆಸ್ ಕಾರ್ಯಕರ್ತರನ್ನು ಮತ್ತು ಗ್ರಾಮೀಣ ಜನತೆಯನ್ನು ದಾರಿತಪ್ಪಿಸುತ್ತಿದ್ದಾರೆ. ಅವರು ಗ್ರಾಮ ಪಂಚಾಯಿತಿಗೆ ನಾಮನಿರ್ದೇಶನ ಮಾಡುವ ಕುರಿತಂತೆ ಸರ್ಕಾರದಿಂದ ಜಾರಿಯಾಗಿಲ್ಲ. ನಾಗರಿಕರು, ಕಾಂಗ್ರೆಸ್ ಕಾರ್ಯಕರ್ತರು ಮಾಜಿ ಶಾಸಕರ ಮಾತಿಗೆ ಮರುಳಾಗಬಾರದೆಂದು ಮನವಿ ಮಾಡಿದರು. ಕೆಪಿಸಿಸಿ ಸದಸ್ಯರಾದ ಕಲ್ಲುಕಂಬ ಪಂಪಾಪತಿ, ಎಚ್. ಮಹ್ಮದ್ ಗೌಸ್, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಇಟಗಿ ಬಸವರಾಜಗೌಡ ಇದ್ದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.