ಅಕಾಲಿಕ ಮಳೆ-ಗಾಳಿಗೆ ನೆಲಕ್ಕುರುಳಿದ ಭತ್ತ -ಬಾಳೆ


Team Udayavani, Mar 22, 2020, 5:24 PM IST

22-March-19

ಕಂಪ್ಲಿ: ಪಟ್ಟಣವನ್ನೊಳಗೊಂಡಂತೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಗುರುವಾರ ರಾತ್ರಿ ಸುರಿದ ಅಕಾಲಿಕ ಮಳೆ ಹಾಗೂ ಬಿರುಗಾಳಿಗೆ ಹಿಂಗಾರು ಹಂಗಾಮಿನಲ್ಲಿ ನಾಟಿ ಮಾಡಿದ ಭತ್ತದ ಬೆಳೆ ಹಾಗೂ ಬಾಳೆತೋಟದಲ್ಲಿ ಗಿಡಗಳು ನೆಲಕ್ಕುರುಳಿವೆ.

ತುಂಗಭದ್ರಾ ನದಿ, ತುಂಗಭದ್ರಾ ಬಲದಂಡೆ ಕೆಳಮಟ್ಟದ ಕಾಲುವೆ, ವಿಜಯನಗರ ಕಾಲುವೆಗಳ ವ್ಯಾಪ್ತಿಯಲ್ಲಿ ನಾಟಿ ಮಾಡಲಾದ ಹಾಗೂ ನೆಡಲಾದ ಭತ್ತ ಮತ್ತು ಬಾಳೆಗಿಡಗಳು ನೆಲಕ್ಕಚ್ಚಿವೆ. ತಾಲೂಕಿನ ರಾಮಸಾಗರ, ಸಣಾಪುರ, ದೇವಸಮುದ್ರ, ಹಿರೇಜಾಯಿಗನೂರು, ಚಿಕ್ಕ ಜಾಯಿಗನೂರು ರೈತರು ಹಿಂಗಾರು ಅಂದರೆ ಬೇಸಿಗೆ ಹಂಗಾಮಿನಲ್ಲಿ ಭತ್ತವನ್ನು ನಾಟಿ ಮಾಡಿದ್ದಾರೆ.

ಸುಮಾರು 20ರಿಂದ 30 ನಿಮಿಷಗಳ ಕಾಲ ಭಾರಿ ಪ್ರಮಾಣದಲ್ಲಿ ಮಳೆಯಾಗುವುದರ ಜೊತೆಗೆ ಬಿರುಗಾಳಿ ಬೀಸಿದ್ದರಿಂದ ಕಾಳು ಕಟ್ಟಿದ ಭತ್ತದ ಬೆಳೆ ನೆಲಕ್ಕುರುಳಿದೆ. ಹೀಗೆ ಅಕಾಲಿಕ ಮಳೆ ಗಾಳಿಗೆ ನೆಲಕ್ಕುರುಳಿದ ಭತ್ತದ ಬೆಳೆಯನ್ನು ಕೃಷಿ ಕೂಲಿಕಾರ್ಮಿಕರು ಎತ್ತಿ ಕಟ್ಟುವ ಕಾರ್ಯದಲ್ಲಿ ಮಗ್ನರಾಗಿರುವುದು ಕಂಡು ಬಂತು.

ಇನ್ನು ತಾಲೂಕಿನ ರಾಮಸಾಗರ ಮತ್ತು ಕೋಟೆಯ ಮಾಗಾಣಿ ಪ್ರದೇಶದಲ್ಲಿ ಅಕಾಲಿಕ ಮಳೆ ಗಾಳಿಗೆ ಬಾಳೆಗಿಡಗಳು ನೆಲಕ್ಕುರುಳಿವೆ ಎಂದು ರೈತರು ತಮ್ಮ ನೋವನ್ನು ತೋಡಿಕೊಂಡರು. ಜೊತೆಗೆ ಯುಗಾದಿಗೆ ಮುನ್ನ ಇದುವರೆಗೂ ಮಳೆಯಾಗಿರಲಿಲ್ಲ. ಆದರೆ ಈ ವರ್ಷ ಅವಧಿಗೆ ಮುನ್ನ ಮುಂಗಾರು ಪೂರ್ವ ಮಳೆಯಾಗಿದ್ದು, ಇದು ರೈತರಿಗೆ ಅನುಕೂಲವಾಗುವ ಬದಲಿಗೆ ನಷ್ಟವನ್ನು ಉಂಟುಮಾಡಿದೆ ಎಂದರು.

ಕಂದಾಯ, ಕೃಷಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸುವಂತೆ ರೈತ ಮುಖಂಡರಾದ ಬಿ. ನಾರಾಯಣಪ್ಪ, ಕಟ್ಟೆ ಅಯ್ಯಪ್ಪ, ಕಾಮಗಂಡಿ ವಿರೂಪಾಕ್ಷಪ್ಪ, ಎಚ್‌. ರಾಜಶೇಖರಗೌಡ ಮನವಿ ಮಾಡಿದರು.

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

bellary

Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು

ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.