ಕೋವಿಡ್ ಸಂಕಷ್ಟ ಪರಿಹಾರಕ್ಕೆ ಪೂಜೆ
Team Udayavani, Apr 27, 2020, 5:52 PM IST
ಕಂಪ್ಲಿ: ದೇವಾಂಗ ಪೇಟೆಯ ರಾಮಲಿಂಗೇಶ್ವರ ಸ್ವಾಮಿಗೆ ಮಹಾಮಾರಿ ಕೋವಿಡ್ ಸಂಕಷ್ಟ ಪರಿಹಾರಕ್ಕಾಗಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಕಂಪ್ಲಿ: ಪಟ್ಟಣದಲ್ಲಿ ಮಹಾಮಾರಿ ಕೋವಿಡ್ ಸಂಕಷ್ಟ ಪರಿಹಾರಕ್ಕೆ ಸಂಕಲ್ಪಿಸಿ ಕಂಪ್ಲಿಯ ದೇವಾಂಗಪೇಟೆಯಲ್ಲಿನ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ವಿವಿಧ ಸದ್ಭಕ್ತರು ರಾಮಲಿಂಗೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.
ದೇವಸ್ಥಾನದಲ್ಲಿ ಅರ್ಚಕ ಮಿಟ್ಟಿ ಶಂಕರ್ ನೇತೃತ್ವದಲ್ಲಿ ಗಣಪತಿ ಪೂಜೆ, ಉಮಾಮಹೇಶ್ವರ ಕಳಸ ಪ್ರತಿಷ್ಠಾಪನೆ ಪೂಜೆಯೊಂದಿಗೆ ರುದ್ರಾಭಿಷೇಕ ಸೇರಿದಂತೆ ವಿವಿಧ ಅಭಿಷೇಕಗಳನ್ನು ಹಾಗೂ ಸಹಸ್ರ ಬಿಲ್ವಾರ್ಚನೆ ಸೇರಿದಂತೆ ವಿಶೇಷ ಪೂಜೆಯನ್ನು ಸಲ್ಲಿಸಿದರು. ನಂತರ ಮಹಾಮಂಗಳಾರತಿ ನಂತರ ಪ್ರಸಾದ ವಿತರಣೆ ಮಾಡಿದರು. ಮಾರಕ ಕೋವಿಡ್ ವೈರಸ್ ಹಿನ್ನೆಲೆಯಲ್ಲಿ ಕೆಲವೇ ಸಾರ್ವಜನಿಕರು ಸಾಮಾಜಿಕ ಅಂತರದಲ್ಲಿ ಭಾಗವಹಿಸಿದ್ದರು. ಪುಟ್ಟಿ ರಾಘವೇಂದ್ರ, ಬಂಗಿ ಸಣ್ಣಮಂಜುನಾಥ, ದೂಪದ ಸುಭಾಶ್ಚಂದ್ರ, ದೂಪದ ಪ್ರಶಾಂತ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ