ಗೃಹರಕ್ಷಕರ ಸೇವೆ ಅನನ್ಯ: ರಘುಕುಮಾರ್
Team Udayavani, Jun 5, 2020, 3:33 PM IST
ಕಂಪ್ಲಿ: ಗೃಹರಕ್ಷಕ ದಳ ಕಚೇರಿಯಲ್ಲಿ ಸ್ಥಳೀಯ ಗೃಹರಕ್ಷಕರಿಗೆ ಪಟ್ಟಣದ ಪೆಟ್ರೋಲ್ ಬಂಕ್ ಮಾಲೀಕರು ನೀಡಿದ ಆಹಾರ ಧಾನ್ಯ ಕಿಟ್ಗಳನ್ನು ಡಿವೈಎಸ್ಪಿ ವಿ. ರಘುಕುಮಾರ್ ವಿತರಿಸಿದರು.
ಕಂಪ್ಲಿ: ಸರ್ಕಾರದ ಎಲ್ಲ ಇಲಾಖೆಗಳಲ್ಲಿಯೂ ಸಹಿತ ಉತ್ತಮ ಸೇವೆ ನೀಡುತ್ತಿರುವ ಗೃಹರಕ್ಷಕ ದಳದ ಸಿಬ್ಬಂದಿ ಕಾಯಂ ವೇನತವಿಲ್ಲದಿದ್ದರೂ ಸಹಿತ ಉತ್ತಮ ಸೇವೆ ನೀಡುತ್ತಿದ್ದಾರೆಂದು ಹೊಸಪೇಟೆ ಉಪ ವಿಭಾಗದ ಡಿವೈಎಸ್ಪಿ ವಿ. ರಘುಕುಮಾರ್ ತಿಳಿಸಿದರು.
ಅವರು ಪಟ್ಟಣದ ಗೃಹರಕ್ಷಕದಳದ ಕಚೇರಿಯಲ್ಲಿ ಗೃಹರಕ್ಷಕರಿಗೆ ಸ್ಥಳೀಯ ಪೆಟ್ರೋಲ್ ಬಂಕ್ ಮಾಲೀಕರು ಸ್ಥಳಿಯ 90 ಗೃಹರಕ್ಷಕರಿಗೆ ನೀಡಿದ ಆಹಾರ ಧಾನ್ಯ ಕಿಟ್ಗಳನ್ನು ವಿತರಿಸಿ ಮಾತನಾಡಿದರು. ಕಳೆದ 60 ದಿನಗಳಿಂದ ಆವರಿಸಿಕೊಂಡಿರುವ ಮಹಾಮಾರಿ ಕೋವಿಡ್ ವೈರಸ್ ವಿರುದ್ಧ ಹೋರಾಡುತ್ತಿರುವ ವಾರಿಯರ್ಗಳಲ್ಲಿ ಗೃಹರಕ್ಷಕ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು ಅವರಿಗೆ ಸರ್ಕಾರದ ಕಾಯಂ ವೇತನ ಇಲ್ಲದಿದ್ದರೂ ಸಹಿತ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಗೌರವಧನಕ್ಕೆ ಕಾರ್ಯನಿರ್ವಹಿಸುತ್ತಿದ್ದು, ಅವರ ಸೇವೆಯನ್ನು ಗುರುತಿಸಿ ಕಂಪ್ಲಿ ಪಟ್ಟಣದ ಪೆಟ್ರೋಲ್ ಬಂಕ್ ಮಾಲೀಕರು ಸುಮಾರು 90 ಗೃಹರಕ್ಷಕರಿಗೆ ದಿನನಿತ್ಯದ ಆಹಾರ ಧಾನ್ಯಗಳ ಕಿಟ್ ವಿತರಿಸಿರುವುದು ಶ್ಲಾಘನೀಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಪಿ.ಬ್ರಹ್ಮಯ್ಯ, ಸದಸ್ಯರಾದ ಡಾ| ವಿ.ಎಲ್. ಬಾಬು, ಪೆಟ್ರೋಲ್ ಬಂಕ್ ಮಾಲೀಕರಾದ ವಾಲಿಕೊಟ್ರಪ್ಪ ಮಾತನಾಡಿದರು. ನಂತರ 90 ಜನ ಗೃಹರಕ್ಷಕರಿಗೆ ಆಹಾರ ಧಾನ್ಯ ಕಿಟ್ಗಳನ್ನು ವಿತರಿಸಿದರು. ಕಾರ್ಯಕ್ರಮದಲ್ಲಿ ಗೃಹರಕ್ಷಕ ದಳದ ಹೊಸಪೇಟೆ ಘಟಕಾಧಿಕಾರಿ ಎಸ್. ಎನ್. ಗೀರೀಶ್, ಕಂಪ್ಲಿ ಘಟಕಾ ಧಿಕಾರಿ ಮೋಹನ್ಮೂರ್ತಿ, ಪೆಟ್ರೋಲ್ ಬಂಕ್ ಮಾಲೀಕರಾದ ರಮೇಶ್ ಬಬಲೇಶ್ವರ, ಕೆ.ಬಿ. ಮಂಜುನಾಥ್, ಕೃಷ್ಣ ಎಸ್. ಪೋಳ್, ಕೋಟೆ ರಾಜಶೇಖರ್, ಎನ್. ಪುರುಷೋತ್ತಮ, ಕೊಡಿದಲ್ ರಾಜು, ವಾಲಿ ಗುರು, ಎಸ್. ಪುಲ್ಲಾರೆಡ್ಡಿ, ಆರ್. ಇಮಾಮ್ ಸಾಬ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ