ರಿಯಾಯಿತಿ ದರದ ಬೀಜ ಖರೀದಿಗೆ ಮುಂದಾಗಿ
Team Udayavani, Jun 14, 2020, 4:16 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕಂಪ್ಲಿ: ವಿವಿಧ ತಳಿಗಳ ಬೀಜಗಳನ್ನು ರೈತ ಸಂಪರ್ಕ ಕೇಂದ್ರದ ಮೂಲಕ ವಿತರಿಸಲಾಗುತ್ತಿದ್ದು, ತಾಲ್ಲೂಕಿನ ರೈತರು ರಿಯಾಯಿತಿ ದರದ ಬೀಜಗಳನ್ನು ಖರೀದಿಸುವಲ್ಲಿ ಮುಂದಾಗಬೇಕು ಎಂದು ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಶ್ರೀಧರ್ ಹೇಳಿದರು.
ಪಟ್ಟಣದ ಎಪಿಎಂಸಿ ಆವರಣದಲ್ಲಿರುವ ರೈತ ಸಂಪರ್ಕ ಕೇಂದ್ರದಲ್ಲಿ ಬಿತ್ತನೆ ಬೀಜ ವಿತರಿಸಿ ಮಾತನಾಡಿದ ಅವರು, ರೈತ ಸಂಪರ್ಕ ಕೇಂದ್ರದಲ್ಲಿ ಬಿಪಿಟಿ 5204 ಸೋನಾ, ಎಂಟಿವಿ 1010, ಆರ್ಎನ್ಆರ್ 15048 ತಳಿಗಳ ಭತ್ತದ ಬೀಜ, ಸೂರ್ಯಕಾಂತಿ, ಮೆಕ್ಕೆಜೋಳ, ತೊಗರಿ, ನವಣೆ ಹಾಗೂ ಹೆಸರು ಬಿತ್ತನೆ ಬೀಜಗಳ ಸಂಗ್ರಹವಿದೆ. ರಿಯಾಯಿತಿ ದರದಲ್ಲಿ ಖರೀದಿಸಲು ರೈತರು ಜಾಗೃತಿ ತೋರಬೇಕು. ಸಜ್ಜೆ, ರಾಗಿ, ಗಂಗಾವತಿ ಸೋನಾ ಭತ್ತದ ಬೀಜಗಳು ಶೀಘ್ರದಲ್ಲೇ ಬರಲಿವೆ. ಕಂಪ್ಲಿ ರೈತ ಸಂಪರ್ಕ ಕೇಂದ್ರದ ವ್ಯಾಪ್ತಿಯಲ್ಲಿ 26,671,43 ಹೆಕ್ಟೇರ್ ಭೌಗೋಳಿಕ ಪ್ರದೇಶವಿದ್ದು, 19,911 ಹೆಕ್ಟೇರ್ ನೀರಾವರಿ ಪ್ರದೇಶವಿದೆ. ಸುಮಾರು 23 ಸಾವಿರ ರೈತರಿದ್ದು, ಮುಂಗಾರು ಹಂಗಾಮಿಗೆ ಅಗತ್ಯವಿರುವ ಬೀಜಗಳ ದಾಸ್ತಾನು ಇದ್ದು, ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದರು.
ಎಮ್ಮಿಗನೂರು, ನೆಲ್ಲುಡಿ, ಸಣಾಪುರ, ರಾಮಸಾಗರ, ದೇವಸಮುದ್ರ, ನಂ.10 ಮುದ್ದಾಪುರ ಗ್ರಾಮಗಳ ರೈತರು ಪ್ರತಿದಿನ ಕೇಂದ್ರಕ್ಕೆ ಭೇಟಿ ನೀಡಿ ಬೀಜಗಳನ್ನು ಖರೀದಿಸುತ್ತಿದ್ದಾರೆ ಎಂದರು. ಈ ಸಂದರ್ಭದಲ್ಲಿ ಕೇಂದ್ರದ ಸಹಾಯಕ ಕೃಷಿ ಅಧಿಕಾರಿ ಲಕ್ಷ್ಮೀ, ಬಸವಣ್ಣೆಪ್ಪ, ರೈತ ಅನುವುಗಾರರಾದ ಅಮರೇಗೌಡ, ಜೆ.ಫಕ್ಕೀರಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ