ಆಟೋ ಹುಲಗಪ್ಪನ ರಾಜ್ಯೋತ್ಸವ ಸಂಭ್ರಮ


Team Udayavani, Nov 1, 2021, 3:54 PM IST

ಆಟೋ ಹುಲಗಪ್ಪನ ರಾಜ್ಯೋತ್ಸವ ಸಂಭ್ರಮ

ಹೊಸಪೇಟೆ: ಕನ್ನಡ ರಾಜ್ಯೋತ್ಸವ ಆಚರಣೆ ಬಂತ್ತೆಂದರೆ ನೂತನ ವಿಜಯನಗರ ಜಿಲ್ಲಾ ಕೇಂದ್ರ ಹೊಸಪೇಟೆ ನಗರದ ಆಟೋ ಚಾಲಕರೊಬ್ಬರಿಗೆ ಸಡಗರ-ಸಂಭ್ರಮ.

ಹೌದು! ನಗರದ ಆಟೋಚಾಲಕ ಗುಜ್ಜಲ ಹುಲಗಪ್ಪ ಎಂಬ ಕನ್ನಡಾಭಿಮಾನಿಗೆ ಕನ್ನಡ ಬಾವುಟ ಹಾರಿಸುವುದು, ಕನ್ನಡ ಗೀತೆಗಳನ್ನು ಕೇಳಿಸುವುದು ಎಂದರೆ ಎಲ್ಲಿಲ್ಲದ ಖುಷಿ.

ಕನ್ನಡ ರಾಜ್ಯೋತ್ಸವ ದಿನ ಅವರು ತಮ್ಮ ಆಟೋ ತುಂಬೆಲ್ಲ ಕನ್ನಡ ಧ್ವಜ ರಾರಾಜಿಸುವಂತೆಅಲಂಕಾರ ಮಾಡುವುದು, ಜತೆಗೆ ಧ್ವನಿವರ್ಧಕದ ಮೂಲಕ ಕನ್ನಡ ಅಭಿಮಾನ ಸಾರುವ ಖ್ಯಾತ ಗಾಯಕರ ಕನ್ನಡ ಗೀತೆಗಳನ್ನು ಜನರಿಗೆ ಕೇಳಿಸುವುದು, ಇಡೀ ದಿನ ನಗರ ಪ್ರದಕ್ಷಣೆ ಮಾಡಿ, ಕನ್ನಡಾಭಿಮಾನ ಮೆರೆಯುತ್ತಾರೆ. ಕುವೆಂಪು, ದ.ರಾ. ಬೇಂದ್ರೆ, ಡಾ| ರಾಜಕುಮಾರ್‌, ಯು.ಆರ್‌. ಅನಂತಮೂರ್ತಿ, ಗಿರೀಶ್‌ ಕಾರ್ನಾಡ್‌, ಮಹಾತ್ಮ ಗಾಂಧೀ ಜಿ, ಸುಭಾಷ್‌ ಚಂದ್ರಭೋಷ್‌ ಮುಂತಾದ ಮಹನೀಯರ ಭಾವಚಿತ್ರಗಳನ್ನುಆಟೋದಲ್ಲಿ ಅಳವಡಿಸಿ ಖುಷಿ ಪಡುತ್ತಾರೆ.

ಕಳೆದ 25 ವರ್ಷಗಳಿಂದಲೂ ಕನ್ನಡದ ಮೇಲಿನ ಪ್ರೀತಿಯನ್ನು ಈ ಮೂಲಕ ವ್ಯಕ್ತಪಡಿಸುತ್ತಿರುವ ಆಟೋಚಾಲಕ ಗುಜ್ಜಲ ಹುಲಗಪ್ಪನವರು ಮುಂದಿನ ವರ್ಷ ತಮ್ಮಆಟೋವನ್ನು ಕನ್ನಡ ಧ್ವಜದಿಂದ ಸಿಂಗರಿಸಿಕೊಂಡು ರಾಜಧಾನಿ ಬೆಂಗಳೂರಿನಿಂದ ಹೊಸಪೇಟೆವರೆಗೆಆಗಮಿಸಬೇಕು. ದಾರಿಯುದಕ್ಕೂ ಬರುವ ಗ್ರಾಮ, ಪಟ್ಟಣಗಳಲ್ಲಿ ಕನ್ನಡ ಪ್ರೇಮವನ್ನುಹೊರ ಹಾಕಬೇಕು ಎಂಬುದು ಬಹುದಿನದ ಆಸೆಯಾಗಿದೆ.

ಕನ್ನಡ ರಾಜ್ಯೋತ್ಸವ ಆಚರಣೆ ಮಾತ್ರವಲ್ಲದೆ, ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ ದಿನದಲ್ಲಿ ಕೂಡ ಅವರ ಆಟೋದ ಮೇಲೆ ತ್ರೀವರ್ಣ ಧ್ವಜ ಹಾರಾಡುತ್ತಿರುತ್ತದೆ. ನಾಡ ದೇವತೆ ಭುವನೇಶ್ವರಿ ದೇವಿ ಹಾಗೂ ಭಾರತಮಾತೆ ಭಾವಚಿತ್ರ ಹೊಂದಿರುವಧ್ವಜ ಹಾರಿಸುವುದು, ದೇಶಭಕ್ತಿ ಗೀತೆಗಳನ್ನು ಕೇಳಿಸುವುದು, ನಗರ ಸುತ್ತುವುದು ಇವರ ಪ್ರತಿವರ್ಷದ ವಾಡಿಕೆ. ಗೆಳೆಯರೊಂದಿಗೆ ಸೇರಿಕೊಂಡು ನಗರದ ಜೋಳದ ರಾಶಿ ಗುಡ್ಡದ ತುದಿಯಲ್ಲಿ ರಾಷ್ಟ್ರಧ್ವಜ ಹಾರಿಸಿ ಸಂಭ್ರಮ ಪಡುತ್ತಾರೆ. ಪ್ರತಿವರ್ಷ ನ.1, ಆ.15 ಹಾಗೂ ಜ. 26ರಂದು ನಗರದ ಮೃತ್ಯುಂಜಯ ನಗರದ 9 ನೇ ಕ್ರಾಸ್‌ನ ಆಟೋ ಸ್ಟಾಂಡ್‌ನ‌ಲ್ಲಿಧ್ವಜಾರೋಹಣ ನೆರವೇರಿಸಿ ದೇಶಾಭಿಮಾನ ತೋರುತ್ತಾರೆ.

ಉಚಿತ ಸೇವೆ: ಕನ್ನಡ ರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆ ದಿನದಂದು ಗರ್ಭಿಣಿ ಹಾಗೂ ವೃದ್ಧರು ಹಾಗೂ ಮಕ್ಕಳಿಗೆ ಹಣ ಪಡೆಯದೇ ತಮ್ಮ ಆಟೋದಲ್ಲಿ ಉಚಿತ ಸೇವೆ ನೀಡುತ್ತಾರೆ.ನ. 1ರಂದು ಕನ್ನಡ ರಾಜ್ಯೋತ್ಸವ ಸಂಭ್ರಮಕ್ಕಾಗಿ ತುದಿಗಾಲಿನಲ್ಲಿ ನಿಂತಿರುವ ಹುಲಗಪ್ಪನವರುತಮ್ಮ ಆಟೋವನ್ನು ಈ ವರ್ಷ ವಿಶಿಷ್ಟ ರೀತಿಯಲ್ಲಿ ಅಲಂಕಾರ ಮಾಡುವ ಮೂಲಕ ಕನ್ನಡಪ್ರೇಮವನ್ನು ಮೆರೆಯಬೇಕು. ಈ ಮೂಲಕ ಕನ್ನಡಾಭಿಮಾನಿಗಳಿಗೆ ಕನ್ನಡ ರಾಜ್ಯೋತ್ಸವದವಿಶೇಷ ಶುಭಾಶಯಗಳನ್ನು ಪರಸ್ಪರಹಂಚಿಕೊಂಡು ನಾಡಿಗೆ ಮಾದರಿಯಾಗಬೇಕು ಎಂಬುದು ಇವರ ಸಂಕಲ್ಪ.

1998ರಿಂದ ನಾನು ಕನ್ನಡ ರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆ ದಿನದಂದು ನನ್ನ ಆಟೋಕ್ಕೆ ಕನ್ನಡ ಬಾವುಟ ಹಾಗೂ ರಾಷ್ಟ್ರಧ್ವಜದಿಂದ ಸಿಂಗಾರ ಮಾಡುತ್ತೇನೆ. ಜತೆಗೆ ನಾಡಿನ ಖ್ಯಾತ ಗಾಯಕರ ಕನ್ನಡ ಅಭಿಮಾನ ಸೂಸುವ ಗೀತೆ ಹಾಗೂ ದೇಶಭಕ್ತಿಗೀತೆಗಳನ್ನು ಧ್ವನಿವರ್ಧಕದ ಮೂಲಕ ದಾರಿಯುದ್ದಕ್ಕೂ ಕೇಳಿಸುತ್ತೇನೆ. ಈ ಮೂಲಕ ದೇಶಾಭಿಮಾನ, ಕನ್ನಡಾಭಿಮಾನ ಮೆರೆಯುತ್ತೇನೆ.– ಗುಜ್ಜಲ ಹುಲಗಪ್ಪ ಆಟೋಚಾಲಕ, ಹೊಸಪೇಟೆ

-ಪಿ. ಸತ್ಯನಾರಾಯಣ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.