ನಾಳೆಯಿಂದ ಬಳ್ಳಾರಿಯಲ್ಲಿ ಖಾದಿ ಉತ್ಸವ


Team Udayavani, Aug 13, 2018, 4:52 PM IST

bell-1.jpg

ಬಳ್ಳಾರಿ: ನಗರದ ಜಿಲ್ಲಾ ಕ್ರೀಡಾಂಗಣ ರಸ್ತೆಯ ವಾಲ್ಮೀಕಿ ಭವನದ ಎದುರು ಆ.14 ರಿಂದ 28ರ ವರೆಗೆ 15 ದಿನಗಳ ಕಾಲ ರಾಜ್ಯಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತು ಪ್ರದರ್ಶನ ಹಾಗೂ ಮಾರಾಟದ ಖಾದಿ ಉತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಗ್ರಾಮೋದ್ಯೋಗದ ಅಭಿವೃದ್ಧಿ ಅಧಿಕಾರಿ ಅಣ್ಣಪ್ಪ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಥಳೀಯರಲ್ಲಿ ಗುಡಿ ಕೈಗಾರಿಕೆ ಸ್ಥಾಪಿಸುವ ಮೂಲಕ ನಿರುದ್ಯೋಗ ಸಮಸ್ಯೆ ನಿವಾರಿಸುವ ಸಲುವಾಗಿ ಈ ಖಾದಿ ಗ್ರಾಮೋದ್ಯೋಗ ವಸ್ತು ಪ್ರದರ್ಶನ
ಆಯೋಜಿಸಲಾಗುತ್ತಿದೆ. ವಸ್ತು ಪ್ರದರ್ಶನದಲ್ಲಿ ಒಟ್ಟು 75 ಮಳಿಗೆಗಳನ್ನು ನಿರ್ಮಿಸಲಾಗುತ್ತಿದೆ.

ಇದರಲ್ಲಿ 40 ಮಳಿಗೆಗಳು ಖಾದಿ ಗ್ರಾಮೋದ್ಯಗಕ್ಕೆ ಮೀಸಲಿರಿಸಲಾಗಿದ್ದು, ಪ್ರತಿ ಮಳಿಗೆಗೆ 12 ಸಾವಿರ ರೂ. ಶುಲ್ಕ ನಿಗದಿಪಡಿಸಲಾಗಿದೆ. ಇನ್ನುಳಿದ 35 ಮಳಿಗೆಗಳನ್ನು ಗ್ರಾಮೀಣ ಭಾಗದ ಗುಡಿಕೈಗಾರಿಕೆಗೆ ಮೀಸಲಿಡಲಾಗಿದ್ದು, ಪ್ರತಿ ಮಳಿಗೆಗೆ 10 ಸಾವಿರ ರೂ. ಶುಲ್ಕವನ್ನು ನಿಗದಿಪಡಿಸಲಾಗಿದೆ ಎಂದವರು ತಿಳಿಸಿದರು.

ಪ್ರದರ್ಶನದಲ್ಲಿ ಕೇವಲ ಬಳ್ಳಾರಿ ಜಿಲ್ಲೆಯ ಖಾದಿ ಮತ್ತು ಗುಡಿ ಕೈಗಾರಿಕೆಗಳ ಮಳಿಗೆಗಳು ಆಗಮಿಸದೆ, ನೆರೆಹೊರೆಯ ಜಿಲ್ಲೆ, ರಾಜ್ಯ ಮತ್ತು ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಖಾದಿ ಹಾಗೂ ಗುಡಿ ಕೈಗಾರಿಕೆ ವ್ಯಾಪಾರಿಗಳು ಉತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಜ್ಯ ಸರ್ಕಾರ ನೀಡಿರುವ 25 ಲಕ್ಷ ರೂ. ಅನುದಾನದಲ್ಲಿ ಖಾದಿ ಗ್ರಾಮೋದ್ಯೋಗ ಆಯೋಜಿಸಲಾಗುತ್ತಿದೆ. 15 ದಿನಗಳ ಕಾಲ ನಡೆಯಲಿರುವ ಗ್ರಾಮೋದ್ಯೋಗ ಮೇಳದಲ್ಲಿ ಸುಮಾರು 1 ಕೋಟಿ ರೂ.ಗೂ ಅ ಕವಹಿವಾಟು ನಡೆಯುವ ನಿರೀಕ್ಷೆ ಹೊಂದಲಾಗಿದೆ ಎಂದರು.

ಮೇಳದಲ್ಲಿ ಕೈಯಲ್ಲಿ ನೇಯ್ದ, ಕೈಯಿಂದ ನೂಲಿದ ಖಾದಿ ಮತ್ತು ರೇಷ್ಮೆ ವಸ್ತ್ರಗಳಿಗೆ ಸಂಬಂಧಿಸಿದ್ದ ಉತ್ಪನ್ನಗಳನ್ನು ಮಾತ್ರ ಪ್ರದರ್ಶಿಸಲಾಗುತ್ತದೆ. ಪ್ರತಿ ವಸ್ತ್ರಗಳಿಗೆ ನಿಗದಿತ ಬೆಲೆಗಿಂತ ಶೇ.35 ರಷ್ಟು ರಿಯಾಯಿತಿ ದರದಲ್ಲಿ ಗ್ರಾಹಕರಿಗೆ ದೊರೆಯಲಿದೆ. ಕಡಿತಗೊಳಿಸಿದ್ದ ಶೇ. 35 ರಷ್ಟು ದರವನ್ನು ಗ್ರಾಹಕರ ಪರವಾಗಿ ಸರ್ಕಾರ ವ್ಯಾಪಾರಿಗಳಿಗೆ ನೀಡಲಾಗುತ್ತದೆ ಎಂದು ತಿಳಿಸಿದರು.

ಗುಡಿ ಕೈಗಾರಿಕೆಗಳಲ್ಲಿ ರೆಡಿಮೇಡ್‌ ವಸ್ತ್ರಗಳು, ಲಿಡ್‌ಕರ್‌, ಅಗರ್‌ಬತ್ತಿ, ಅಪ್ಪಳ ತಯಾರಿಕೆ, ವ್ಯಾನಿಟಿ ಬ್ಯಾಗ್‌ ಸಿದ್ಧ ಪಡಿಸುವುದು ಇನ್ನಿತರೆ ಗುಡಿಕೈಗಾರಿಕೆಗಳ ವಸ್ತುಗಳನ್ನು ಪ್ರದರ್ಶಿಸಲಾಗುತ್ತದೆ. ಮೇಳದಿಂದ ಖಾದಿ ವ್ಯಾಪಾರಿಗಳು ಮತ್ತು ಗ್ರಾಹಕರ ನಡುವೆ ನೇರ ವಹಿವಾಟು ಸಂಪರ್ಕ ಬೆಳೆಯಲಿದ್ದು, ಮಧ್ಯವರ್ತಿಗಳ ಹಾವಳಿ ತಪ್ಪಲಿದೆ ಎಂದರು.
 
ಖಾದಿ ಗ್ರಾಮೋದ್ಯೋಗ ಉತ್ಸವವನ್ನು ಜಿಲ್ಲಾಮಟ್ಟ, ವಲಯಮಟ್ಟ, ರಾಜ್ಯಮಟ್ಟ ಎಂದು ಮೂರು ವಿಭಾಗದಲ್ಲಿ ಆಯೋಜಿಸಲಾಗುತ್ತದೆ. ಪ್ರಸಕ್ತ 2018-19ನೇ ಸಾಲಿನ ಮೊದಲ ರಾಜ್ಯಮಟ್ಟದ ಖಾದಿ ಗ್ರಾಮೋದ್ಯೋಗ ವಸ್ತು ಪ್ರದರ್ಶನ ಮತ್ತು ಮಾರಾಟವನ್ನು ಬಳ್ಳಾರಿಯಲ್ಲಿ ಆ.14 ರಿಂದ ಚಾಲನೆ ಪಡೆದುಕೊಳ್ಳಲಿದೆ. ಬಳಿಕ ಸೆಪ್ಟೆಂಬರ್‌ ತಿಂಗಳಲ್ಲಿ ಕಲಬುರ್ಗಿ, ಅಕ್ಟೋಬರ್‌ ತಿಂಗಳಲ್ಲಿ ಮೈಸೂರು, ವಿಜಯಪುರ, ಡಿಸೆಂಬರ್‌ ತಿಂಗಳಲ್ಲಿ ತುಮಕೂರು, ಬೆಂಗಳೂರು ಮತ್ತು ಮಂಡ್ಯ ಜಿಲ್ಲೆಯಲ್ಲಿ ವಲಯ ಮಟ್ಟದ ಖಾದಿ ಗ್ರಾಮೋದ್ಯೋಗ ಮೇಳವನ್ನು ಆಯೋಜಿಸಲಾಗುತ್ತದೆ ಎಂದವರು ತಿಳಿಸಿದರು.

ಮೇಳವನ್ನು ಆ.14 ರಂದು ಬೆಳಗ್ಗೆ 11ಕ್ಕೆ ಸಣ್ಣ ಕೈಗಾರಿಕೆ ಸಚಿವ ಎಸ್‌.ಆರ್‌. ಶ್ರೀನಿವಾಸ್‌ ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್‌ ಮಳಿಗೆಗಳಿಗೆ ಚಾಲನೆ ನೀಡುವರು. ಜಿಪಂ ಅಧ್ಯಕ್ಷೆ ಸಿ. ಭಾರತಿ ತಿಮ್ಮಾರೆಡ್ಡಿ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡುವರು. ಶಾಸಕ ಜಿ. ಸೋಮಶೇಖರರೆಡ್ಡಿ ಅಧ್ಯಕ್ಷತೆ ವಹಿಸುವರು. ಡಿಸಿ ರಾಮ್‌ ಪ್ರಸಾತ್‌ ಮನೋಹರ್‌, ಜಿಪಂ ಸಿಇಒ ಡಾ| ಕೆ.ವಿ.ರಾಜೇಂದ್ರ, ಎಸ್‌ಪಿ ಅರುಣ್‌ ರಂಗರಾಜನ್‌ ಸೇರಿದಂತೆ ಜಿಲ್ಲೆಯ ವಿವಿಧ ಕ್ಷೇತ್ರಗಳ ಶಾಸಕರು, ಪಾಲಿಕೆ ಮೇಯರ್‌, ಸದಸ್ಯರು ಇತರರು ಉಪಸ್ಥಿತರಿರುವರು.

ಮಂಡಳಿಯ ಉಪಮುಖ್ಯ ಕಾರ್ಯದರ್ಶಿ ಸೋಮನಾಥ್‌, ಜಿಲ್ಲಾಖಾದಿ ಮತ್ತು ಗ್ರಾಮೋದ್ಯೋಗದ ಅಧಿಕಾರಿ ಗೋವಿಂದಪ್ಪ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಬಿ.ಕೆ. ರಾಮಲಿಂಗಪ್ಪ ಇದ್ದರು

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.