ಗ್ರಾಮವಿಕಾಸ ಯೋಜನೆಗೆ ಕಿತ್ನೂರ್ ಆಯ್ಕೆ


Team Udayavani, Jul 27, 2017, 9:43 AM IST

27-BLR-5.jpg

ಹಗರಿಬೊಮ್ಮನಹಳ್ಳಿ: ತಾಲೂಕಿನ ತೆಲುಗೋಳಿ ಗ್ರಾಮಕ್ಕೆ ಹಿಂದುಳಿದ ವರ್ಗಗಳ ಮೆಟ್ರಿಕ್‌ ಪೂರ್ವ ಬಾಲಕರ
ವಿದ್ಯಾರ್ಥಿ ನಿಲಯ ನಿರ್ಮಾಣಕ್ಕೆ 3ಕೋಟಿ ರೂ ಅನುದಾನ ಒದಗಿದ್ದು, ನಿವೇಶನ ಗುರುತುಪಡಿಸುವ ವಿಷಯಕ್ಕೆ
ಸಂಬಂಧಿಸಿದಂತೆ ಗ್ರಾಮಸ್ಥರ ಗುಂಪುಗಳ ನಡುವೆ ಭಿನ್ನಾಭಿಪ್ರಾಯವಿದ್ದ ಕಾರಣ ಶಾಸಕ ಭೀಮಾ ನಾಯ್ಕ ಗ್ರಾಮಸ್ಥರನ್ನು ಮನವೊಲಿಸಲು ಪ್ರಯತ್ನಿಸಿದರು.

ಒಂದು ಗುಂಪಿನ ಜನರು ತಿಪ್ಪೆಗಳನ್ನು ತೆಗೆದು ಹಾಸ್ಟೆಲ್‌ ಮಾಡುವುದು ಬೇಡ. ಗ್ರಾಮದ ಟಿಬಿಪಿ ಪ್ರದೇಶದಲ್ಲಿ ಸರಕಾರದ ಭೂಮಿಯಲ್ಲಿ ನಿರ್ಮಾಣ ಮಾಡಿ ಎಂದು ಶಾಸಕರನ್ನು ಮನವೊಲಿಸಿದರು. ಶಾಸಕರು ಪ್ರತಿಕ್ರಿಯಿಸಿ ಗ್ರಾಮಸ್ಥರೇ ನಿವೇಶನ ಗುರುತಿಸಿ ತೀರ್ಮಾನ ತೆಗೆದುಕೊಳ್ಳುವುದು ಸೂಕ್ತ, ನೀವು ತೋರಿಸಿದ ಸರಕಾರಿ
ಜಾಗದಲ್ಲಿ ಹಾಸ್ಟೆಲ್‌ ನಿರ್ಮಾಣ ಮಾಡಲಾಗುವುದು ಎಂದರು.

ನಂತರ ಮುತೂರು ಗ್ರಾಪಂ ವ್ಯಾಪ್ತಿಯ ಕಿತ್ನೂರ್  ಗ್ರಾಮಸ್ಥರು ಗ್ರಾಪಂ ಚುನಾವಣೆಯನ್ನು 6 ಬಾರಿ ಬಹಿಷ್ಕರಿಸಿದ
ಹಿನ್ನೆಲೆಯಲ್ಲಿ, ಮುಖಂಡರನ್ನು ಬಂಡೇ ರಂಗನಾಥೇಶ್ವರ ದೇವಸ್ಥಾನದ ಸಭಾ ಮಂಟಪಕ್ಕೆ ಕರೆಸಿ ಚರ್ಚಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಮುತೂರು ಗ್ರಾಮದಲ್ಲಿರುವ ಗ್ರಾಪಂ ಕಚೇರಿಯನ್ನು ಎಲ್ಲಾ ಗ್ರಾಮಗಳಿಗೆ ಮಧ್ಯ ಆಗುವಂತೆ ನೂತನ ಕಚೇರಿ ನಿರ್ಮಾಣ ಮಾಡಲಾಗುವುದು. ಗ್ರಾ.ಪಂ.ಗೆ ಕಿತ್ನೂರ್  ಮುತೂರು ಗ್ರಾಪಂ ಎಂದು ನಾಮಕರಣ ಮಾಡಲಾಗುವುದು. ಕಿತೂ°ರು ಗ್ರಾಮಸ್ಥರು ಗ್ರಾಮದ ಜನತೆಯೊಂದಿಗೆ ಚರ್ಚಿಸಿ ತೀರ್ಮಾನ ಹೇಳುತ್ತಾರೆ ಎಂದು ತಿಳಿಸಿದರು. ಗ್ರಾಮದ ಕೆಲವರು ಗ್ರಾಪಂ ಕಚೇರಿಯನ್ನು ಕಿತೂ°ರು ಗ್ರಾಮದಲ್ಲಿಯೇ ಮಾಡಿ ಎಂದು ಶಾಸಕರನ್ನು ಒತ್ತಾಯಿಸಿದರು.

ಇದಕ್ಕೂ ಮುನ್ನ ಶಾಸಕರು ಕಿತ್ನೂರ್  ಗ್ರಾಮದಲ್ಲಿ ನಿರ್ಮಿಸಲಾದ ನೂತನ ಅಂಗನವಾಡಿ ಕಟ್ಟಡ ಉದ್ಘಾಟಿಸಿ, ಕಿತೂ°ರು ಗ್ರಾಮಕ್ಕೆ ಗ್ರಾಮ ವಿಕಾಸ ಯೋಜನೆಯಡಿ 1ಕೋಟಿ ರೂ.ಅನುದಾನದಡಿ ಮೂಲ ಸೌಲಭ್ಯ ಕಲ್ಪಿಸುವ ಕಾಮಗಾರಿಗೆ ಶೀಘ್ರ ಚಾಲನೆ ನೀಡಲಾಗುವುದು. ಹಿನ್ನೀರಿನ ರಭಸ ಹೆಚ್ಚುತ್ತಿದ್ದು ತಂಬ್ರಹಳ್ಳಿ ಏತನೀರಾವರಿ ರೀಪೇರಿ ಕೆಲಸ ಸೇರಿ ಇತರೆ ಕಾಮಗಾರಿಗಳಿಗೆ 50ಲಕ್ಷ ರೂಅನುದಾನ ನೀಡಲಾಗಿದೆ. ಮುತೂರು, ಕಿತೂ°ರು, ರಾಮೇಶ್ವರ ಬಂಡಿ ಸೇರಿ ಒಟ್ಟು 5 ಗ್ರಾಮಗಳಲ್ಲಿ 1.20 ಕೋಟಿ ರೂ. ಅಂದಾಜು ಮೊತ್ತದಲ್ಲಿ ಸಿಮೆಂಟ್‌ ರಸ್ತೆ ನಿರ್ಮಿಸಲಾಗುವುದು. ತಂಬ್ರಹಳ್ಳಿ ಉತ್ತರ ಭಾಗದಿಂದ ಬಂಡೇ ರಂಗನಾಥನ ತೇರು ಬೀದಿಯವರೆಗೆ ರಸ್ತೆ ನಿರ್ಮಾಣ ಮಾಡಲು 1 ಕೋಟಿ ರೂ.ಅಂದಾಜು ಮೊತ್ತ ನೀಡಲಾಗಿದೆ. ಯಾತ್ರಿ ನಿವಾಸ ನಿರ್ಮಿಸಲು ಕೋಟಿ ರೂ.ಅನುದಾನ ಕೋರಿ ಪ್ರಸ್ತಾವನೆ
ಸಲ್ಲಿಸಲಾಗಿದೆ. ತಂಬ್ರಹಳ್ಳಿ ಗ್ರಾಪಂ ಕಚೇರಿಯ ಮೇಲ್ಮಹಡಿ ನಿರ್ಮಾಣಕ್ಕೆ ಅಗತ್ಯ ಅನುದಾನ ನೀಡಲಾಗುವುದು.

ಗ್ರಾಮಕ್ಕೆ ಬಸವ ವಸತಿ ಯೋಜನೆಯಡಿ 60 ಮನೆಗಳನ್ನು ನೀಡಲಾಗಿದೆ. ಗ್ರಾಮದ ಕೂಲಿ ಕಾರ್ಮಿಕರು ನರೇಗಾ ಮಾನವ ದಿನಗಳನ್ನು ಹೆಚ್ಚಿಸಲು ಶಾಸಕರನ್ನು ಒತ್ತಾಯಿಸಿದಾಗ, ಶಾಸಕರು ನರೇಗಾ ನಿರ್ದೇಶಕ ವಿಶ್ವನಾಥರಿಗೆ ಕೂಲಿ ಕಾರ್ಮಿಕರಿಗೆ ಹೆಚ್ಚು ಕೆಲಸ ನೀಡಿ, ಕಾರ್ಮಿಕರ ಕೂಲಿ ಮೊತ್ತವನ್ನು ಕೂಡಲೇ ಪಾವತಿಸಿ ಎಂದು ತಿಳಿಸಿದರು. 

ಜಿಪಂ ಮಾಜಿ ಸದಸ್ಯ ಅಕ್ಕಿ ತೋಟೇಶ್‌, ತಂಬ್ರಹಳ್ಳಿ ಗ್ರಾಪಂ ಅಧ್ಯಕ್ಷೆ ಗೌಸಿಯಾಬೇಗಂ, ತಾಪಂ ಸದಸ್ಯರಾದ
ಪಿ.ಕೊಟ್ರೇಶ್‌, ಪಾಂಡು ನಾಯ್ಕ, ಎಪಿಎಂಸಿ ಅಧ್ಯಕ್ಷ ಅಳವಂಡಿ ವೀರಣ್ಣ, ನಿರ್ದೇಶಕಿ ವಸಂತಮ್ಮ, ಗ್ರಾಪಂ  ಸದಸ್ಯರಾದ ಗೌರಜ್ಜನವರ ಗಿರೀಶ, ಕೊರವರ ಯಮನೂರಪ್ಪ, ಶ್ರೀನಿವಾಸ, ಹನುಮಂತಮ್ಮ, ಮಡಿವಾಳ ಕೊಟ್ರೇಶ,
ಗ್ರಾಪಂ ಮಾಜಿ ಅಧ್ಯಕ್ಷ ಬಣಕಾರ ಕೊಟ್ರೇಶ, ಗೌರಜ್ಜನವರ ಬಸವರಾಜಪ್ಪ, ರೋಗಾಣಿ ಪ್ರಕಾಶ್‌, ಕಿತೂ°ರು ಗ್ರಾಮದ
ಮುಖಂಡರಾದ ಚಂದ್ರಶೇಖರ ಪಾಟೀಲ್‌, ಉಮೇಶ, ಸಿದ್ದಣ್ಣ, ಮಾರುತೇಶ, ಹನುಮಂತಪ್ಪ, ದುರುಗಪ್ಪ, ಚೌಟಿ ನಾಗರಾಜ, ಹೇಮಣ್ಣ, ತಹಶೀಲ್ದಾರ್‌ ಆನಂದಪ್ಪ ನಾಯಕ, ಪಿಡಬ್ಲೂಡಿ ಸಹಾಯಕ ನಿರ್ದೇಶಕ ಪ್ರಭಾಕರ ಶೆಟ್ರಾ, ದೇವೆಂದ್ರನಾಯ್ಕ ಇತರರಿದ್ದರು.

ಟಾಪ್ ನ್ಯೂಸ್

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.