ಒಂದೂವರೆ ವರ್ಷದಲ್ಲಿ ಕೋವಿಡ್ ನಾಶ: ಕೋಡಿಮಠ ಶ್ರೀ ಭವಿಷ್ಯ
Team Udayavani, Jun 12, 2022, 12:33 AM IST
ಬಳ್ಳಾರಿ: ಎರಡು ವರ್ಷಗಳಿಂದ ಕಾಡುತ್ತಿರುವ ಮಾರಕ ಕೋವಿಡ್ ಸೋಂಕು ಇನ್ನು ಒಂದೂವರೆ ವರ್ಷದಲ್ಲಿ ನಾಶವಾಗಲಿದೆ. ಆದರೆ ಅದು ಜಗತ್ತಿನಾದ್ಯಂತ ಸಾಕಷ್ಟು ಕಷ್ಟವನ್ನು ನೀಡಲಿದೆ ಎಂದು ಕೋಡಿಮಠದ ಸ್ವಾಮೀಜಿಗಳು ಭವಿಷ್ಯ ನುಡಿದಿದ್ದಾರೆ.
ಇಲ್ಲಿನ ಗಾಂಧಿ ನಗರದ ಮನೆಯೊಂದಕ್ಕೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರು ತಿಂಗಳ ಮೊದಲೇ ಪುನಃ ಕೋವಿಡ್ ಬರಲಿದೆ ಎಂದು ಹೇಳಿದ್ದೆ. ಅದರಂತೆ ಬಂದಿದೆ ಎಂದರು.
ರಾಜ್ಯದಲ್ಲಿ ಎಲ್ಲ ಕಡೆ ಕೆಂಡ-ಮಂಡಲ ಆಗುತ್ತೆ. ಗುಡುಗು ಸಿಡಿಲು ಮಿಂಚು ಬರಲಿದೆ.
ಪ್ರಕೃತಿ ಮೇಲೆ ದಾಳಿ ಮಾಡುತ್ತದೆ, ಮಲೆನಾಡು ಬಯಲು ಆಗುತ್ತದೆ, ಬಯಲು ಮಲೆನಾಡು ಆಗುತ್ತದೆ ಎಂದು ಹೇಳಿದ್ದೆ. ಅದರಂತೆ ದೊಡ್ಡ ದೊಡ್ಡ ನಗರಕ್ಕೆ ಮಳೆಯಿಂದ ಹಾನಿಯಾಗುತ್ತದೆ.
ಮುಂಗಾರು ಇನ್ನೂ ಹೆಚ್ಚುತ್ತದೆ. ಹಿಂಗಾರಿನಲ್ಲಿ ಅಕಾಲಿಕ ಮಳೆ ಆಗುವ ಲಕ್ಷಣಗಳಿವೆ. ಕಳೆದ ಯುಗಾದಿ ವೇಳೆಗೆ ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಆಗಲಿದೆ ಎಂದು ಹೇಳಿದ್ದೆ. ಗುಂಪುಗಳು ಆಗಲಿವೆ. ದೇಶದಲ್ಲಿ ಅವಘಡ ಆಗಲಿದೆ. ಪೈಗಂಬರ್ ಬಗ್ಗೆ ಅವಹೇಳನ ಮಾಡುವ ಮೂಲಕ ಆ ಅವಘಡ ಈಗ ಆರಂಭವಾಗಿದೆ.
ಜಗತ್ತಿನ ಎಲ್ಲ ರಾಷ್ಟ್ರಗಳಲ್ಲಿ ಅದರ ಮುಂದುವರಿದ ಭಾಗವಾಗಿ ಅಪಾಯವಿದೆ. ಮತೀಯ ಗಲಭೆ ಆಗಲಿದೆ, ಸಾವುನೋವು ಆಗುವ ಬಗ್ಗೆಯೂ ಹೇಳಿದ್ದೆ ಎಂದು ಶ್ರೀಗಳು ಸ್ಮರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ