ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ: ತುಬಾಕೆ
Team Udayavani, Jun 8, 2020, 6:14 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕೂಡ್ಲಿಗಿ: ಪ್ರಕೃತಿ ನಮಗೆ ಎಲ್ಲವನ್ನು ನೀಡಿದೆ. ಅದನ್ನು ಸಂರಕ್ಷಿಸಿಕೊಂಡು ಹೋಗುವುದು ಮಾನವ ಧರ್ಮ ಎಂದು ಕಿರಿಯ ಶ್ರೇಣಿ ನ್ಯಾಯಾಧೀಶರಾದ ಮುರಗೇಂದ್ರ ತುಬಾಕೆ ಹೇಳಿದರು.
ಅರಣ್ಯ ಇಲಾಖೆ ಮತ್ತು ಪಟ್ಟಣ ಪಂಚಾಯಿತಿ ಸಹಯೋಗದಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಬಸವೇಶ್ವರ ನಗರದಲ್ಲಿ ಸಸಿಗಳನ್ನು ನೆಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪರಿಸರವನ್ನು ಉಳಿಸಿ, ಬೆಳೆಸುವುದು ಪ್ರತಿ ಮನುಷ್ಯನ ಕರ್ತವ್ಯ. ಪರಿಸರವು ಮಾನವನ ಏಳ್ಗೆಗೆ ಸಕರಾತ್ಮಕವಾಗಿ ಕೊಡುಗೆ ನೀಡಿದೆ ಎಂದರು. ತಹಶೀಲ್ದಾರ್ ಎಸ್. ಮಹಾಬಲೇಶ್ವರ ಮಾತನಾಡಿ, ಸಮಾಜದಲ್ಲಿ ಬದುಕುವ ಪ್ರತಿಯೊಬ್ಬ ವ್ಯಕ್ತಿ ತಮ್ಮ ತಮ್ಮ ಮನೆಗಳ ಮುಂದೆ ಸಸಿಯನ್ನು ನೆಟ್ಟು ಪೋಷಣೆ ಮಾಡಬೇಕು. ತನ್ನ ಉದ್ದಾರಕ್ಕಾಗಿ ಸಮತೋಲನವಾದ ಪರಿಸರ ಹುಡುಕುವತ್ತ ಮಾನವ ದಾಪುಗಾಲು ಹಾಕುತ್ತಿದ್ದಾನೆ. ಈಗಲಾದರೂ ಪರಿಸರದ ಕಾಳಜಿ ನಮ್ಮೆಲ್ಲರ ಹೊಣೆಯಾಗಬೇಕು ಎಂದರು.
ಈ ಸಂದರ್ಭದಲ್ಲಿ ಹಿರಿಯ ಶ್ರೇಣಿ ನ್ಯಾಯಾಧಿಧೀಶರಾದ ಕೆ.ಎ. ನಾಗೇಶ, ಇ.ಒ. ಬಸಣ್ಣ, ವಲಯ ಅರಣ್ಯಾಧಿಕಾರಿ ರೇಣುಕ, ಪ.ಪಂ. ಮುಖ್ಯಾಧಿಕಾರಿ ಪಕೃದ್ದೀನ್ ಮತ್ತು ಕಿರಿಯ ಆರೋಗ್ಯ ನಿರೀಕ್ಷಕಿ ಲತಾ, ಶಾಸಕರ ಆಪ್ತ ಸಹಾಯಕ ಶ್ರೀಕಾಂತ ಮತ್ತು ಭೀಮಣ್ಣ ಗಜಾಪುರ, ಬಿ.ನಾಗರಾಜ, ಸೋಮಶೇಖರ್ ಆರಾಧ್ಯ, ಅಂಗಡಿ ವೀರೇಶ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ