ಕೊಟ್ಟೂರು ಸ್ವಾಮಿ ಮಠದ ಡಾ.ಸಂಗನಬಸವ ಸ್ವಾಮೀಜಿ ಲಿಂಗೈಕ್ಯ


Team Udayavani, Nov 22, 2021, 9:01 AM IST

gyyuytr

ಬಳ್ಳಾರಿ: ಹಂಪಿ ಹೇಮಕೂಟ ಸಿಂಹಾಸನಾಧೀಶ್ವರ ಕೊಟ್ಟೂರು ಸ್ವಾಮಿ ಮಠದ ಡಾ. ಸಂಗನಬಸವ ಸ್ವಾಮೀಜಿ ಭಾನುವಾರ ರಾತ್ರಿ ಲಿಂಗೈಕ್ಯರಾಗಿದ್ದಾರೆ.

ಕಳೆದ ಹಲವು ದಿನಗಳಿಂದ ವಯೋಸಹ ಕಾಯಿಲೆಯಿಂದ ಬಳಲುತ್ತಿದ್ದ ಸ್ವಾಮೀಜಿಗಳು ಬೆಂಗಳೂರಿನ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಫಲಕಾರಿಯಾಗದೆ ಭಾನುವಾರ ರಾತ್ರಿ ಇಹಲೋಕ ತ್ಯಜಿಸಿದ್ದಾರೆ.

1972 ರಲ್ಲಿ ಬಳ್ಲಾರಿ-ಹೊಸಪೇಟೆ ಕೊಟ್ಟೂರು ಸ್ವಾಮಿ ಮಠದ ಅಧಿಕಾರ ವಹಿಸಿಕೊಂಡ ಡಾ.ಸಂಗನಬಸವ ಸ್ವಾಮೀಜಿಗಳು, 1987 ರಲ್ಲಿ ಹಾಲಕೆರೆ ಅನ್ನದಾನೇಶ್ವರ ಮಠದ ಅಧಿಕಾರ‌ ವಹಿಸಿಕೊಂಡರು. ಶಿವಯೋಗ ಮಂದಿರದ ಅಧ್ಯಕ್ಷರಾಗಿ 25 ವರ್ಷಗಳ ಕಾಲ ಸೇವೆ ಸಲ್ಲಿಸಿ, ಬಳಿಕ ಆಜೀವ ಅಧ್ಯಕ್ಷರಾದರು. 9 ಬಸವ ಪುರಾಣಗಳ ಪ್ರತಿಪಾದಕರಾಗಿದ್ದ ಶ್ರೀಗಳು, ಈ ಮೂಲಕ ಸರ್ವಧರ್ಮಗಳ ಸಾಮೂಹಿಕ ವಿವಾಹಗಳನ್ನು ನೆರೆವೇರಿಸಿ, ಸಮಾಜದ ಅಭ್ಯುದಯಕ್ಕೆ ಸೇವೆ ಸಲ್ಲಿಸಿದ್ದಾರೆ. ಹರಿಜನ-ಗಿರಿಜನ ಓಣಿಗಳಲ್ಲಿ ಪಾದಯಾತ್ರೆ ನಡೆಸಿ ಮನೆ ಮನೆಗೆ ಪ್ರಸಾದ ವಿತರಿಸಿದರು. ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ 9 ಮಠಗಳಲ್ಲಿ ನಿರಂತರವಾಗಿ ಶಿವಾನುಭವಗೋಷ್ಠಿ ರೂಪಿಸಿದ್ದರು. ಹೀಗೆ ಸಾಮಾಜದ ಬಗ್ಗೆ ಕಳಕಳಿ ಹೊಂದಿದ್ದ ಶ್ರೀಗಳು ಹಲವಾರು ಸಮಾಜಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಕಳೆದ ಹಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಸ್ವಾಮೀಜಿಗಳು, ಭಾನುವಾರ ರಾತ್ರಿ ಲಿಂಗೈಕ್ಯರಾಗಿದ್ದಾರೆ.

ಶ್ರೀಗಳ ಹಿನ್ನೆಲೆ;

ಜಮಖಂಡಿ ತಾಲೂಕಿನ ಬಿದರೆ ಗ್ರಾಮದ ಸ್ವತಂತ್ರ ಮಠದ ಶ್ರೀ ಬಸವಲಿಂಗಯ್ಯ, ಗುರಮ್ಮ ದಂಪತಿಗಳಿಗೆ 1938 ರಲ್ಲಿ ಜನಿಸಿದರು. ಚಿಕ್ಕವಯಸ್ಸಿನಲ್ಲೇ ತಾಯಿಯನ್ನು ಕಳೆದುಕೊಂಡ ಸಂಗನಬಸವ ಶ್ರೀಗಳು, ಬೈಲಹೊಂಗಲದ ಕುಂಬಾರಗೇರಿ ಮಠದ ಶಿವಬಸಯ್ಯನವರ ಆಶ್ರಮದಲ್ಲಿ ಪ್ರಾಥಮಿಕ ವಿದ್ಯಾಭ್ಯಾಸವನ್ನು ಮುಗಿಸಿದರು. ಕೆಲದಿನ ಅನ್ನದಾನೀಶ್ವರ ಮಠದಲ್ಲಿಯೂ ಓದಿದ್ದರು. ಶ್ರೀಗಳ ತಂದೆ ಬಸವಲಿಂಗಯ್ಯನವರು ಸಂಗನಬಸವರು ಬಾಲಕರಾಗಿದ್ದಾಗ ಒಮ್ಮೆ ಹಾವೇರಿಯ ಮಹಾತಪಸ್ವಿ ಶಿವನಸವ ಸ್ವಾಮಿಗಳ ದರ್ಶನಕ್ಕೆ ಕರೆದೊಯ್ದಿದ್ದರಂತೆ. ಬಾಲಕನ ಲಕ್ಷಣಗಳನ್ನು ನೋಡಿದ್ದ ಸ್ವಾಮೀಜಿಗಳು, ದಯಾದೃಷ್ಟಿ ಬೀರಿ, ತಲೆಯ ಮೇಲೆ ಹಸ್ತವನ್ನಿಟ್ಟು, ಸಂತೋಷದಿಂದ ಹರಿಸಿದರಂತೆ. ಇದು ಸಂಗನಬಸವ ಸ್ವಾಮಿಗಳ ಭವಿಷ್ಯದ ಸಂಕೇತವಾಗಿದ್ದು, ಮುಂದೆ ಮಗನಬಸವರನ್ನು ಜಮಖಂಡಿ ವಿರಕ್ತ ಮಠಕ್ಕೆ ನೇಮಿಸಿ ಮುಂದಿನ ಅಭ್ಯಾಸಕ್ಕೆ ಶಿವಯೋಗ ಮಂದಿರಕ್ಕೆ ಸೇರಿಸಲಾಯಿತು ಎಂದು ಪುಸ್ತಕವೊಂದರಲ್ಲಿ ಉಲ್ಲೇಖಿಸಲಾಗಿದೆ.

ಬಳಿಕ 12 ವರ್ಷಗಳ ಕಾಲ ಶಿವಯೋಗ ಮಂದಿರದಲ್ಲಿದ್ದು ಒಬ್ಬ ಆದರ್ಶ ಸ್ವಾಮಿಗಿರಬೇಕಾದ ಎಲ್ಲವನ್ನು ಕರಗತ ಮಾಡಿಕೊಂಡರು. ಶಿವಯೋಗ ಸಾಧನೆಗೆ ತಮ್ಮನ್ನು ಪರಿಪೂರ್ಣವಾಗಿ ಒಪ್ಪಿಕೊಂಡರು. ಕನ್ನಡ, ಇಂಗ್ಲೀಷ್, ಸಂಸ್ಕೃತ ಭಾಷೆಗಳ ಜತೆಗೆ ಹಿಂದಿ ಭಾಷೆಯನ್ನು ಸಹ ಕಲಿತು ಕರಗತ ಮಾಡಿಕೊಂಡರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.