Kurugodu; ಹೊಲಕ್ಕೆ ನೀರು ಹರಿಸುವಾಗ ಹಾವು ಕಡಿದು ರೈತ ಮೃತ್ಯು
ಚಿಕಿತ್ಸೆ ಪಡೆದ ಬಳಿಕ ಆಸ್ಪತ್ರೆ ಆವರಣದಲ್ಲೇ ನೆಲಕ್ಕೆ ಕುಸಿದು ಕೊನೆಯುಸಿರು
Team Udayavani, Sep 24, 2023, 7:08 PM IST
ಕುರುಗೋಡು: ಹೊಲಕ್ಕೆ ನೀರು ಹರಿಸುವಾಗ ಹಾವಿನ ಕಡಿತದಿಂದಾಗಿ ಓರ್ವ ರೈತ ಮೃತಪಟ್ಟ ದುರ್ಘನೆೆ ತಾಲೂಕಿನ ಎಮ್ಮಿಗನೂರು ಗ್ರಾಮದ ಬಳಿಯಲ್ಲಿರುವ ತಿಮ್ಮಣಕೇರಿ ಕ್ಯಾಂಪಿನಲ್ಲಿ ನಡೆದಿದೆ.
ತಿಮ್ಮಣಕೇರಿಕ್ಯಾಂಪಿನ ರೈತ ನಂದ್ಯಾಳ ರಾಮ ಭದ್ರಿರಾಜ್(45) ಮೃತಪಟ್ಟ ದುರ್ದೈವಿ. ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಎಮ್ಮಿಗನೂರು ಗ್ರಾಮ ದಂಡಾಧಿಕಾರಿ ಮಂಜುನಾಥ ಅವರು ಮೃತ ಕುಟುಂಬಸ್ಥರ ಮನೆಗೆ ತೆರಳಿ, ಘಟನೆಯ ವಿವರ ಸಂಗ್ರಹಿಸಿದ, ನಂತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಮತ್ತು ಸರ್ಕಾರಿದಿಂದ ಪರಿಹಾರ ಒದಗಿಸುವ ಭರವಸೆ ನೀಡಿದರು.
ಎಮ್ಮಿಗನೂರು ಗ್ರಾಪಂ ವ್ಯಾಪ್ತಿಗೆ ಬರುವ ತಿಮ್ಮಣಕೇರಿ ಕ್ಯಾಂಪಿನ ರೈತನಾದ ನಂದ್ಯಾಳ ರಾಮ ಭದ್ರಿರಾಜ್ ಭಾನುವಾರ ಬೆಳಗ್ಗೆ ದಿನನಿತ್ಯದಂತೆ ಹೊಲಕ್ಕೆ ತೆರಳಿ, ಕೃಷಿ ಚಟುವಟಿಕೆ ನಡೆಸಿ ಹೊಲಕ್ಕೆ ನೀರು ಹಾಯಿಸುವ ವೇಳೆ ಹುರಿಪಂಚರಿ ಹಾವು ಕಚ್ಚಿದೆ. ನಂತರ ಚಿಕಿತ್ಸೆಗಾಗಿ ಕಂಪ್ಲಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆತಂದು, ಆರೋಗ್ಯ ಅಧಿಕಾರಿಗಳಿಂದ ಚಿಕಿತ್ಸೆ ಪಡೆದ ನಂತರ ಇನ್ನೇನು ಗುಣಮುಖನಾಗಿ, ತದನಂತರ ಆಸ್ಪತ್ರೆ ಆವರಣದಲ್ಲೇ ನಡೆದಾಗುವಾಗ ಮೂರ್ಛೆ ಬಂದು, ನೆಲಕ್ಕೆ ಕುಸಿದು ಬಿದ್ದು, ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ