ಇಬ್ಬರಿಗೆ ಸೋಂಕು: ಬೆಚ್ಚಿಬಿದ್ದ ಕುರುಗೋಡು ಜನ
Team Udayavani, Jun 28, 2020, 2:29 PM IST
ಕುರುಗೋಡು: ಚಾನಾಳ್ ಗ್ರಾಮದ ವ್ಯಕ್ತಿಯೊಬ್ಬರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಸ್ಥಳಕ್ಕೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲಿಸಿತು.
ಕುರುಗೋಡು: ಸಮೀಪದ ಚಾನಾಳ್ ಗ್ರಾಮದ 58 ವರ್ಷದ ವ್ಯಕ್ತಿಗೆ ಹಾಗೂ ಸೋಮಸಮುದ್ರ ಗ್ರಾಮದ 45 ವರ್ಷದ ವ್ಯಕ್ತಿಗೆ ಕೋವಿಡ್ ಸೋಂಕು ಇರುವುದು ಶನಿವಾರ ದೃಢಪಟ್ಟಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಚಾನಾಳ್ ಗ್ರಾಮದ ವ್ಯಕ್ತಿ ತನ್ನ ಕುಟುಂಬಸ್ಥರೊಂದಿಗೆ ತಲಮಾಮಡಿ ಎಂಬ ಗ್ರಾಮಕ್ಕೆ ಮದುವೆಗೆ ಹೋಗಿ ಬರುವಾಗ ಅಪಘಾತಕ್ಕೆ ಈಡಾಗಿ ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾನೆ. ಅಲ್ಲಿ ರಕ್ತ ಪರೀಕ್ಷೆ ಮಾಡಿದಾಗ ಕೋವಿಡ್ ಸೋಂಕು ಇರುವುದು ಕಂಡುಬಂದಿದೆ. ಇನ್ನೂ 6 ಜನ ಕುಟುಂಬಸ್ಥರನ್ನು ಕ್ವಾರಂಟೈನ್ಗೆ ಒಳಪಡಿಸಲಾಗಿದೆ. ಸ್ಥಳಕ್ಕೆ ಪಿಡಿಒ ರುದ್ರಪ್ಪ, ಗ್ರಾಮಲೆಕ್ಕಾಧಿಕಾರಿ ಮಹೆಬೂಬ್ಬಾಷಾ, ಗ್ರಾಪಂ ಸಿಬ್ಬಂದಿ ತಿಪ್ಪಮ್ಮ, ಮಲ್ಲಿಕಾರ್ಜುನ, ಮಲ್ಲೇಪ್ಪ, ಅಳ್ಳಪ್ಪ, ಆಶಾ ಕಾರ್ಯಕರ್ತೆಯರು ಭೇಟಿ ನೀಡಿ ಗ್ರಾಮವನ್ನು ಕಂಟೇನ್ಮೆಂಟ್ ಪ್ರದೇಶವನ್ನಾಗಿಸಿ ಬ್ಯಾರಿಕೇಡ್ ಅಳವಡಿಸಿ ಸ್ಯಾನಿಟೈಸ್ ಮಾಡಿಸಿದ್ದಾರೆ.
ಸೋಮಸಮುದ್ರ ಗ್ರಾಮದ 45 ವರ್ಷದ ವ್ಯಕ್ತಿಗೆ ಕೋವಿಡ್ ಸೋಂಕು ಇರುವುದು ದೃಢವಾಗಿದ್ದು, ಸುಮಾರು ದಿನಗಳಿಂದ ದಮ್ಮು, ಕೆಮ್ಮುನಿಂದ ಆನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಬಳ್ಳಾರಿ ವಿಮ್ಸ್ಗೆ ಹೋದಾಗ ಕೊರೊನಾ ಸೋಂಕು ಇರುವುದು ಕಂಡುಬಂದಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ