ಬೆಳೆ ಕಟಾವು: ಕಾರ್ಮಿಕರಿಗೆ ಫುಲ್‌ ಡಿಮ್ಯಾಂಡ್‌!

ಕಾರ್ಮಿಕರ ಹುಡುಕಾಟದಲ್ಲಿ ಅನ್ನದಾತ ಇಳುವರಿ ಕುಂಠಿತದಿಂದ ರೈತರಿಗೆ ಹೊರೆ

Team Udayavani, Mar 2, 2020, 12:52 PM IST

2-March-10

ಕುರುಗೋಡು: ರೈತರು ಬೆಳೆದ ಬೆಳೆಗಳನ್ನು ಕಟಾವು ಮಾಡಲು ದೂರದ ಗ್ರಾಮಗಳಿಂದ ಟಾಟಾ ಏಸ್‌ಗಳಲ್ಲಿ ಬಂದಿರುವ ಕೂಲಿ ಕಾರ್ಮಿಕರು

ಕುರುಗೋಡು: ರೈತರು ಬೆಳೆದ ಮಿಶ್ರ ಬೇಸಾಯದ ಬೆಳೆಗಳನ್ನು ಕಟಾವು ಮಾಡಿಸಲು ರೈತರಿಗೆ ಕೂಲಿ ಕಾರ್ಮಿಕರು ಸರಿಯಾಗಿ ಸಿಗದೆ ಬೇರೆ ಬೇರೆ ಗ್ರಾಮಗಳಿಂದ ಕೂಲಿ ಕಾರ್ಮಿಕರನ್ನು ಕರೆತಂದು ಬೆಳೆಗಳನ್ನು ಕಟಾವು ಮಾಡಿಸಿಕೊಳ್ಳುವ ಅನಿವಾರ್ಯತೆ ಉಂಟಾಗಿದೆ.

ಕುರುಗೋಡು ಪಟ್ಟಣ ಸೇರಿದಂತೆ ಸಿದ್ದಮ್ಮನಹಳ್ಳಿ, ಯರ್ರಂಗಳ್ಳಿ, ಕೋಳೂರು, ಕೊರ್ಲಗುಂ , ಹಡ್ಲಿಗಿ, ಜಾಲಿಬೆಂಚಿ, ದಮ್ಮೂರು, ಬೈಲೂರು, ಏಳುಬೆಂಚಿ ಇತರೆ ಗ್ರಾಮಗಳಲ್ಲಿ ಅತಿ ಹೆಚ್ಚಾಗಿ ಮೆಣಿಸಿನಕಾಯಿ, ಜೋಳ, ಹತ್ತಿ, ಸಜ್ಜಿ, ಅಲಸಂ , ತೋಗರಿ ಇತರೆ ಮಿಶ್ರ ಬೇಸಾಯ ಪದ್ಧತಿ ಬೆಳೆಗಳನ್ನು ರೈತರು ಬೆಳೆದಿದ್ದಾರೆ. ಇನ್ನೂ ಕುರುಗೋಡು ಮತ್ತು ಕೋಳೂರು ರೈತ ಸಂಪರ್ಕ ಕೇಂದ್ರದ ವ್ಯಾಪ್ತಿಯಲ್ಲಿ ರೈತರು ಮೆಣಿಸಿನಕಾಯಿ 14 ಸಾವಿರ ಎಕರೆ, ಹತ್ತಿ 7 ಸಾವಿರ ಎಕರೆ, ಜೋಳ 11 ಸಾವಿರ ಎಕರೆ, ಸಜ್ಜಿ 600 ಎಕರೆ, ತೋಗರಿ 4 ಸಾವಿರ ಎಕರೆ ಪ್ರದೇಶದಲ್ಲಿ ಬೆಳೆಗಳು ನಾಟಿ ಮಾಡಿದ್ದಾರೆ.

ಜುಲೈ ತಿಂಗಳಲ್ಲಿ ಬೆಳೆಗಳು ನಾಟಿ ಮಾಡಿದ್ದು ಡಿಸೆಂಬರ್‌ ತಿಂಗಳ ಕೊನೆ ದಿನಗಳಿಂದ ಕಟಾವು ಮಾಡಲಾರಂಭಿಸಿದ್ದಾರೆ. ಈಗಾಗಲೇ ಎರಡು ಮೂರು ತಿಂಗಳಿಂದ ಮೆಣಿಸಿನಕಾಯಿ ಮತ್ತು ಹತ್ತಿ ಬೆಳೆಯ ಕಟಾವು ಬಹಳ ಜೋರಾಗಿ ನಡೆಯುತ್ತಿದ್ದು ಸರಿಯಾದ ಸಮಯಕ್ಕೆ ಬೆಳೆಗಳನ್ನು ಕಟಾವು ಮಾಡಿಸಲು ಕೂಲಿಕಾರ್ಮಿಕರು ಸಿಗದ ಕಾರಣ ಕನಕಗಿರಿ, ಸಿರಿಗೇರಿ, ಕುಡತಿನಿ, ಬಳ್ಳಾರಿ, ಕಂಪ್ಲಿ, ಎಮ್ಮಿಗನೂರು, ಕುರುಗೋಡು, ಮಣ್ಣೂರು ಸೂಗೂರು, ನಡವಿ, ರುದ್ರಪಾದ, ರಾಮಸಾಗರ, ಇಟ್ಲಾಪುರ ಸೇರಿದಂತೆ ಇತರೆ ಬೇರೆ ಬೇರೆ ಗ್ರಾಮಗಳಿಂದ ಕೂಲಿಕಾರ್ಮಿಕರು ಟಾಟಾ ಎಸಿಗಳಲ್ಲಿ ಬೆಳ್ಳಂಬೆಳಗ್ಗೆ ಬಂದು ಬೆಳೆಗಳನ್ನು ಕಟಾವು ಮಾಡುತ್ತಿದ್ದಾರೆ.

ಕೂಲಿ ಕಾರ್ಮಿಕರಿಗೆ ಡಿಮ್ಯಾಂಡ್‌: ಮೆಣಿಸಿನಕಾಯಿ ಮತ್ತು ಹತ್ತಿ
ಸೇರಿದಂತೆ ಇತರೆ ಬೆಳೆಗಳನ್ನು ಕಟಾವು ಮಾಡಲು ಸ್ಥಳೀಯವಾಗಿ ಕೂಲಿ ಕಾರ್ಮಿಕರು ಸಿಗದ ಪರಿಣಾಮ ರೈತರು ಬೇರೆ ಬೇರೆ ಗ್ರಾಮಗಳಿಂದ ಕಾರ್ಮಿಕರನ್ನು ಕರೆತಂದು ಒಪ್ಪಂದದ ಮೇರೆಗೆ ಕಟಾವು ಮಾಡಿಸುತ್ತಿದ್ದಾರೆ. ಮೆಣಿಸಿನಕಾಯಿ ಬೆಳೆಗಳಲ್ಲಿ ಸಿಡ್ಸ್‌
ಕಾಯಿ, 5531, 255, 355, ಹಿಂಡೋ 05, ದ್ಯಾವನೂರು ಸಿಡ್‌ ಕಾಯಿಗಳನ್ನು ಕಾರ್ಮಿಕರು ಎಕರೆಗೆ 16 ಸಾವಿರದಿಂದ 20 ಸಾವಿರದವರೆಗೆ ಒಪ್ಪಂದದ ಮೇರೆಗೆ ಕಟಾವು ಮಾಡುತ್ತಿದ್ದಾರೆ.

ಇನ್ನೂ ಕೆಡಿಎಲ್‌ ಬ್ಯಾಡಗಿ, ಸರ್ಪನ್‌ ಬ್ಯಾಡಗಿ 102, ಸಿಜೆಂಟಾ ಕಾಯಿಗಳನ್ನು ಎಕರೆಗೆ 8 ಸಾವಿರದಿಂದ 11 ಸಾವಿರದವರೆಗೆ ಕಟಾವು ಮಾಡುತ್ತಿದ್ದಾರೆ. ರೈತರು ಎಕರೆಗೆ ದುಪ್ಪಟ್ಟು ಹಣ ನೀಡಿದರೂ ಬೆಳೆಗಳ ಕಟಾವಿಗೆ ಕೂಲಿ ಕಾರ್ಮಿಕರು ಸಿಗದೆ ನಿತ್ಯ ಪರದಾಡಬೇಕಾಗಿದೆ. ಇದರಿಂದ ಕಾರ್ಮಿಕರಿಗೆ ಡಿಮ್ಯಾಂಡ್‌ ಹೆಚ್ಚಾಗಿದೆ.

ತಾಲೂಕಿನ ವ್ಯಾಪ್ತಿಯಲ್ಲಿ ರೈತರು ಬೆಳೆದ ಬೆಳೆಗಳು ಅಚ್ಚುಕಟ್ಟಾಗಿ ಬೆಳದಿವೆ. ರೈತರು ಇವುಗಳ ಜೊತೆಗೆ ಇನ್ನೂ ಹೆಚ್ಚಾಗಿ ಮಿಶ್ರ ಬೇಸಾಯದ ಬೆಳೆಗಳು ಬೆಳೆದರೆ ಯಾವುದೇ ರೋಗಬಾಧೆಗಳು ಕಾಣದೆ. ಹೆಚ್ಚಿನದಾಗಿ ಇಳುವರಿ ಕಾಣಬಹುದು.
ದೇವರಾಜ,
ಕೃಷಿ ಅಧಿಕಾರಿಗಳು ಕುರುಗೋಡು

ಈ ಭಾಗದಲ್ಲಿ ಅತಿ ಹೆಚ್ಚಾಗಿ ಮೆಣಿಸಿನಕಾಯಿ ಮತ್ತು ಹತ್ತಿ ಬೆಳೆಗಳು ಬೆಳದಿದ್ದಾರೆ. ಈಗಾಗಲೇ ಬೆಳೆಗಳು ಕಟಾವಿಗೆ ಬಂದಿದ್ದು ಸರಿಯಾಗಿ ಕೂಲಿ ಕಾರ್ಮಿಕರು ಸಿಗುತ್ತಿಲ್ಲ. ಬೇರೆ ಬೇರೆ ದೂರದ ಗ್ರಾಮಗಳ ಕೂಲಿ ಕಾರ್ಮಿಕರನ್ನು ಕರೆಸಿ ಬೆಳೆಗಳನ್ನು ಕಟಾವು ಮಾಡಿಸಬೇಕಾಗಿದೆ. ಅವರನ್ನು ಕರೆಸುವುದರಿಂದ ಸಿಕ್ಕಾಪಟ್ಟೆ ಖರ್ಚು ಬರುತ್ತಿದೆ. ಅದರಲ್ಲಿ ಬೆಳೆಗಳ ಇಳುವರಿ ಕೂಡ ಕಡಿಮೆ. ಇದರಿಂದ ರೈತರ ಬದುಕ ಚಿಂತಾಜನಕವಾಗಿದೆ.
ಸಿದ್ದನಗೌಡ ಬಾದನಹಟ್ಟಿ , ರೈತ

„ಸುಧಾಕರ್‌ ಮಣ್ಣೂರು

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.