ಕುರುಗೋಡು: ದಮ್ಮೂರು ಗ್ರಾ.ಪಂ. ನೂತನ ಅಧ್ಯಕ್ಷೆಯಾಗಿ ನಾಗವೇಣಿ ಅವಿರೋಧವಾಗಿ ಆಯ್ಕೆ
Team Udayavani, Nov 27, 2022, 12:06 PM IST
ಕುರುಗೋಡು: ಸಮೀಪದ ದಮ್ಮೂರು ಗ್ರಾ.ಪಂ. ಸಭಾಂಗಣದಲ್ಲಿ ಗ್ರಾ.ಪಂ. ಅಧ್ಯಕ್ಷರ ಚುನಾವಣೆ ಶಾಂತಿಯುತವಾಗಿ ಜರುಗಿತು.
ಪ್ರಾರಂಭದಲ್ಲಿ ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ಬಿ. ನಾಗವೇಣಿ ದೇವರೆಡ್ಡಿಯವರು ನಾಮಪತ್ರ ಸಲ್ಲಿಸಿದರು. ಅವರ ವಿರುದ್ಧ ಅಧ್ಯಕ್ಷ ಸ್ಥಾನಕ್ಕೆ ಯಾರು ಕೂಡಾ ನಾಮಪತ್ರ ಸಲ್ಲಿಸದ ಕಾರಣ ಚುನಾವಣೆ ಅಧಿಕಾರಿ ವಿ. ನಿರ್ಮಲ, ನಾಗವೇಣಿ ಬಿ. ದೇವರೆಡ್ಡಿಯನ್ನು ದಮ್ಮೂರು ಗ್ರಾ.ಪಂ. ನೂತನ ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ ಎಂದು ಘೋಷಿಸಿದರು.
ಇದೆ ವೇಳೆ ನೂತನ ಅಧ್ಯಕ್ಷೆ ಬಿ. ನಾಗವೇಣಿ ಮಾತನಾಡಿ, ಗ್ರಾ.ಪಂ. ಸದಸ್ಯರನ್ನು ವಿಸ್ವಾಸಕ್ಕೆ ತೆಗೆದುಕೊಂಡು ಗ್ರಾಮದ ಅಭಿವೃದ್ಧಿಗೆ ಶ್ರಮಿಸಲಾಗುವುದು. ಇದಕ್ಕೆ ಪ್ರತಿಯೊಬ್ಬರ ಸಹಕಾರ ಅತ್ಯಗತ್ಯ ಎಂದರು.
ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ಲಕ್ಷ್ಮಿ ಮಂಜುನಾಥ, ಸದಸ್ಯರಾದ ಪಾರ್ವತಿ, ಹೆಚ್. ಗೋವರ್ಧನ ರೆಡ್ಡಿ, ಸಿ. ಹರಿಚಂದ್ರ ರೆಡ್ಡಿ, ಡಿ. ದೇವಣ್ಣ, ಬಸವರಾಜ್, ಪಿ. ಜಯಮ್ಮ ಗಿರೀರೆಡ್ಡಿ, ಗಂಗಮ್ಮ, ಹೊನ್ನಪ್ಪ, ಜಾಯಿ ಪ್ರಕಾಶ್ ರೆಡ್ಡಿ, ಮಾಳಮ್ಮ, ಲಕ್ಷ್ಮಿ ದೇವಿ, ಗೋಪಲರಾವ್, ಪಿಡಿಒ ಮಲ್ಲಿಕಾರ್ಜುನ, ಸಿಬ್ಬಂದಿ ವರ್ಗ ಸೇರಿದಂತೆ ಇತರರು ಇದ್ದರು.
ನೂತನ ಗ್ರಾ.ಪಂ. ಅಧ್ಯಕ್ಷೆಯನ್ನು ಸದಸ್ಯರು, ಗ್ರಾಮದ ಮುಖಂಡರು ಸನ್ಮಾನಿಸಿ, ಗೌರವಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅದ್ದೂರಿಯಾಗಿ ನೆರೆವೆರಿದ ದಮ್ಮೂರು ವೆಂಕಾವಧೂತ ರಥೋತ್ಸವ
ಮಠಗಳು ಇಲ್ಲದಿದ್ದರೆ ಶಿಕ್ಷಣ ಒದಗಿಸುವುದು ಅಸಾಧ್ಯವಾಗುತ್ತಿತ್ತು: ಸಿಎಂ ಬೊಮ್ಮಾಯಿ
ಕಾಂಗ್ರೆಸ್ ಅಧಿಕಾರಕ್ಕೆ ಬರುವುದು, ಗಣೇಶ್ ಶಾಸಕರಾಗುವುದು ನಿಚ್ಚಿತ: ಸಂತೋಷ್ ಲಾಡ್
ಹಳ್ಳಕ್ಕೆ ಬಿದ್ದು ಒಂದೇ ಕುಟುಂಬದ ಇಬ್ಬರು ಬಾಲಕರು ಮೃತ್ಯು… ಮುಗಿಲು ಮುಟ್ಟಿದ ಸಂಬಂಧಿಕರ ಆಕ್ರಂದನ
ಸಿ.ಡಿ ವಿಚಾರದಲ್ಲಿ ಡಿಕೆಶಿ ಕಾಂಗ್ರೆಸ್ ನಾಯಕರ ಬಾಯಿ ಮುಚ್ಚಿಸಿದ್ದಾರೆ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
ಅಂತಾರಾಷ್ಟ್ರೀಯ ಕ್ರಿಕೆಟಿಗೆ ವಿದಾಯ ಹೇಳಿದ ಆಸ್ಟ್ರೇಲಿಯದ ಆರೋನ್ ಫಿಂಚ್
ಬೆಳ್ತಂಗಡಿ: ಉಜಿರೆ ಲಾಡ್ಜ್ ಗಳ ಮೇಲೆ ಏಕಕಾಲದಲ್ಲಿ ಎಸ್.ಪಿ. ನೇತೃತ್ವದಲ್ಲಿ ದಾಳಿ
ಮಂಗಳವಾರದ ರಾಶಿ ಭವಿಷ್ಯ: ಈ ರಾಶಿ ಅವರಿಗಿಂದು ಗೃಹ ಆಸ್ತಿ ಸಂಬಂಧ ಚಿಂತೆ ಎದುರಾದೀತು
ಜೋಶಿ ಅವರು ದೇಶಸ್ಥರಲ್ಲ ಅವರು ಮಾಧ್ವ ಸಂಪ್ರದಾಯಕ್ಕೆ ಸೇರಿದವರು: ಅಶೋಕ್ ಹಾರನಹಳ್ಳಿ
ಸ್ಪಿನ್ ಎದುರಿಸುವುದೇ ಕಠಿನ ಸವಾಲು: ಉಸ್ಮಾನ್ ಖ್ವಾಜಾ