ಕುರುಗೋಡು: ಆರೋಗ್ಯ ಕೇಂದ್ರದ ಶುಶ್ರೂಷಕಿ ಮನೆ ಮುಂದೆ ವಿಕೃತ ವಾಮಾಚಾರ
ಆತಂಕಕ್ಕೀಡಾದ ಕುಟುಂಬ; ಬೇರೆ ಕಡೆ ವರ್ಗಾವಣೆ ಮಾಡುವಂತೆ ಕೋರಿ ಅರ್ಜಿ ಸಲ್ಲಿಕೆ!
Team Udayavani, Jan 7, 2023, 4:22 PM IST
ಕುರುಗೋಡು: ಸಮೀಪದ ಸಿರಿಗೇರಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಶುಶ್ರೂಷಕಿ(ಅಧಿಕಾರಿ) ಮನೆಯ ಮುಂದೆ ಕೆಲ ಕಿಡಿಗೇಡಿಗಳು ನಾಯಿಯನ್ನು ಬಡಿದು ಹಾಕಿ ವಿಕೃತ ವಾಮಾಚಾರ ಮಾಡಿದ್ದಾರೆ.
ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈಗಾಗಲೇ ಸಿಬ್ಬಂದಿಗಳ ಕೊರತೆ ಬಹಳ ಎದುರಾಗಿದೆ.ಕೆಲ ದಿನಗಳ ಹಿಂದೆರಾತ್ರಿ ವೇಳೆಯಲ್ಲಿ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಸ್ಥಳೀಯರು ಅಧಿಕಾರಿಗಳಿಗೆ ಒತ್ತಡ ಹೇರಿ ಒಬ್ಬ ಸ್ಟಾಪ್ ನರ್ಸ್ ಅಮಾನತು ಮಾಡಲಾಗಿತ್ತು.
ಶುಶ್ರೂಷಕಿ ಯಶೋಧ ಸುಮಾರು 4 ವರ್ಷಗಳಿಂದ ಕಾರ್ಯನಿರ್ವಹಿಸಿಕೊಂಡು ಬಂದಿದ್ದಾರೆ. ಇತ್ತೀಚ್ಚಿಗೆ ಅವರು ರಜೆ ಮೇಲೆ ತಮ್ಮ ಗ್ರಾಮಕ್ಕೆ ತೆರಳಿದ್ದಾರೆ. ಸ್ವಲ್ಪ ದಿನಗಳ ನಂತರ ಮರಳಿ ಸಿರಿಗೇರಿ ಗ್ರಾಮಕ್ಕೆ ಬಂದಾಗ ಅವರ ಮನೆಯ ಮುಂದೆ ಕೆಲ ಕಿಡಿಗೇಡಿಗಳು ನಾಯಿಯನ್ನು ಬಡಿದು ಹಾಕಿ ಅದರ ಮೇಲೆ ವಿವಿಧ ರೀತಿಯ ಕುಂಕುಮ, ನಿಂಬೆಹಣ್ಣು, ಕಾಯಿಗಳನ್ನು ಒಡೆದು ವಾಮಾಚಾರ ಮಾಡಿದ್ದಾರೆ. ಇದನ್ನು ನೋಡಿ ಶುಶ್ರೂಷಕಿ ಹಾಗೂ ಅವರ ಕುಟುಂಬ ಸದಸ್ಯರು ಭಯಭೀತಗೊಂಡಿದ್ದಾರೆ.
ಪರಿಣಾಮವಾಗಿ ಸಿರಿಗೇರಿ ಯಲ್ಲಿ ಕರ್ತವ್ಯ ನಿರ್ವಹಿಸಲು ನನಗೆ ಕಷ್ಟಕರ ವಾಗುತ್ತಿದೆ. ಇಲ್ಲಿ ಕೆಲ ಕಿಡಿಗೇಡಿಗಳು ಹಾಗೂ ನಮ್ಮ ಸಿಬಂದಿಗಳಿಗೆ ಜೀವ ಬೆದರಿಕೆ ಇದೆ. ನನ್ನನ್ನು ಕುರುಗೋಡು ಸಮುದಾಯ ಅರೋಗ್ಯ ಕೇಂದ್ರಕ್ಕೆ ವರ್ಗಾವಣೆ ಮಾಡುವಂತೆ ಆರೋಗ್ಯ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿದ್ದಾರೆ.
ಸಿರಿಗೇರಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬಂದಿಗಳು ಕೊರತೆ ಎದುರಾಗಿದ್ದು, ಈಗಾಗಲೇ ಸ್ಥಳೀಯರಿಗೆ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ ಹಲವಾರು ಜೀವಗಳು ಕೂಡ ಕಳೆದುಕೊಂಡಿದ್ದಾರೆ. ಸಿಬಂದಿಗಳು ಕೇಂದ್ರದಲ್ಲಿ ಕಾರ್ಯನಿರ್ವಹಿಸಿ ಬರುವ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಆದರೆ ಕಿಡಿಗೇಡಿಗಳು ಇಂತಹ ಕೃತ್ಯಕ್ಕೆ ಕೈ ಹಾಕಿರುವುದು ವಿಪರ್ಯಾಸವಾಗಿದೆ.
ಆರೋಗ್ಯ ಅಧಿಕಾರಿಗಳು ನಡೆದ ಘಟನೆ ಬಗ್ಗೆ ಪರಿಶೀಲನೆ ನಡೆಸಿ ಇಂತಹ ಕೃತ್ಯ ವೆಸಗಿರುವ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಕಾರ್ಯನಿರ್ವಹಿಸುವ ಅಧಿಕಾರಿಗಳ ವರ್ಗಕ್ಕೆ ಸಮಸ್ಯೆಗಳು ಎದುರಾಗದಂತೆ ನಿಗಾ ವಹಿಸಬೇಕಾಗಿದೆ ಎಂದು ಸ್ಥಳೀಯರು ಒತ್ತಾಯ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ