ಕುರುಗೋಡು: ಗದ್ದೆಗೆ ನೀರು ಕಟ್ಟಲು ಹೋಗಿ ವ್ಯಕ್ತಿ ಸಾವು; ಕೊಲೆ ಶಂಕೆ
Team Udayavani, Sep 16, 2022, 6:56 PM IST
ಕುರುಗೋಡು: ಗದ್ದೆಗೆ ನೀರು ಕಟ್ಟಲು ಮನೆಯಿಂದ ಹೊರಹೋದ ವ್ಯಕ್ತಿಯೊಬ್ಬರು ಅನುಮಾನಸ್ಪಾದವಾಗಿ ಸಾವನ್ನಪ್ಪಿದ್ದು, ಇದು ಸಹಜ ಸಾವಲ್ಲ, ಕೊಲೆಯಾಗಿದೆ ಎಂದು ಮೃತನ ಕುಟುಂಬಸ್ಥರು ದೂರು ನೀಡಿದ್ದಾರೆ.
ಸಮೀಪದ ಗುತ್ತಿಗನೂರು ಸಿದ್ದಪ್ಪ (35) ಅನುಮಾಸ್ಪದವಾಗಿ ತಲೆಗೆ ಮತ್ತು ಮುಖಕ್ಕೆ ಅಲ್ಲಲ್ಲಿ ಪೆಟ್ಟು ಬಿದ್ದು ಮೃತಪಟ್ಟ ವ್ಯಕ್ತಿ.ವಿವಾಹ ವಾಗಿ ಇಬ್ಬರು ಹೆಣ್ಣುಮಕ್ಕಳು ಮತ್ತು ಪತ್ನಿ ಹಾಗೂ ತಾಯಿ ಇದ್ದಾರೆ ಎಂದು ತಿಳಿದು ಬಂದಿದೆ.
ಮೃತ ದುರ್ದೈವಿ ಸಿದ್ದಪ್ಪ ತನ್ನ ಅಕ್ಕನ 1 ಎಕರೆ ಭತ್ತದ ಗದ್ದೆ ನಾಟಿ ಮಾಡಿದ್ದು, ಗದ್ದೆಗೆ ನೀರು ಕಟ್ಟಲು ಗುರುವಾರ ಸಂಜೆ 7 ಗಂಟೆಗೆ ಹೋಗಿದ್ದು ಸತತ ಮೂರು ದಿನ ಗದ್ದೆಗೆ ನೀರು ಹರಿಸಿದರು ಗದ್ದೆಯಲ್ಲಿ ನೀರು ಕಾಣದ ಕಾರಣ ಮೂರು ದಿನ ದಿಂದ ಗದ್ದೆ ಕಡೆಗೆ ಸುತ್ತಾಡಿದ್ದಾನೆ. ಗುರುವಾರ ರಾತ್ರಿ ಕುಟುಂಬದವರು ಇನ್ನೂ ಮನೆಗೆ ಬಂದಿಲ್ಲ ಎಂದು ಬೇರೆ ಕಡೆಯಲ್ಲ ಹುಡುಕಾಡಿದ್ದಾರೆ ಸಿಕ್ಕಿಲ್ಲ. ಶುಕ್ರವಾರ ಬೆಳಿಗ್ಗೆ ಗದ್ದೆಯ ಕಾಲುವೆಯಲ್ಲಿ ಮೃತ ದೇಹ ಪತ್ತೆಯಾಗಿದೆ. ತೆಲೆಗೆ ಪೆಟ್ಟು ಹಾಗೂ ಮೂಗು ಬಾಯಿಯಲ್ಲಿ ರಕ್ತ ಬಂದಿರುವುದು ಕಂಡು ಕುಟುಂಬಸ್ಥರು ಇದು ಸಹಜ ಸಾವಲ್ಲ ಕೊಲೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಕುರುಗೋಡು ಸಿಪಿಐ ಚಂದನ್ ಗೋಪಾಲ್ ಮತ್ತು ಪಿಎಸ್ ಐ ರಘು ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ.ಈ ಕುರಿತು ಕುರುಗೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ