ಕುರುಗೋಡು: ಮಂಗನ ಕಡಿತಕ್ಕೆ ಗಂಭೀರ ಗಾಯಗೊಂಡ ಸಾರ್ವಜನಿಕರು, ವಿದ್ಯಾರ್ಥಿಗಳು

ವಾರದಿಂದ ಬೋನಿಗೆ ಬೀಳದೆ ಅಧಿಕಾರಿಗಳಿಗೆ ತಲೆ ನೋವು ತಂದ ಮಂಗ

Team Udayavani, Nov 25, 2022, 12:40 PM IST

news-4

ಕುರುಗೋಡು: ಯಾರಾದ್ರೂ ಕಿರಿಕ್ ಮಾಡಿಕೊಂಡಿದ್ದಾರೊ ಗೊತ್ತಿಲ್ಲ. ಆದರೂ ಪಟ್ಟಣ ಸಮೀಪದ ಎಂ. ಸೂಗೂರು ಗ್ರಾಮದಲ್ಲಿ ಕಳೆದ ವಾರದಿಂದ ಮಂಗ ರೊಚ್ಚಿಗೆದ್ದು ವೃದ್ಧರನ್ನು, ಶಾಲಾ ವಿದ್ಯಾರ್ಥಿಗಳನ್ನು ಹಾಗೂ ಕಿರಾಣಿ ಅಂಗಡಿ ಮಾಲೀಕರ ನಿದ್ದೆಗೆಡಿಸಿ ತುಂಬಾ ತೊಂದರೆ ಕೊಡುವುದಲ್ಲದೆ ಜನರ ತಲೆ, ಕೈಗೆ, ಕುತಿಯ ಭಾಗಕ್ಕೆ ಎಲ್ಲಂದರಲ್ಲಿ ದೊಡ್ಡ ಗಾತ್ರದಲ್ಲಿ ಕಚ್ಚಿ ಗಂಭೀರ ಗಾಯಗಳನ್ನು ಮಾಡಿದೆ.

ಸೂಗೂರು, ದೊಡ್ಡರಾಜ ಕ್ಯಾಂಪ್, ಇಟಗಿ, ವಿರಾಪುರ ಗ್ರಾಮದ ವಿದ್ಯಾರ್ಥಿಗಳು, ವೃದ್ಧರು ಸೇರಿದಂತೆ ಸುಮಾರು 40 ಕ್ಕೂ ಹೆಚ್ಚು ಜನರು ಕಡಿತದ ಒಳಗಾಗಿದ್ದಾರೆ. ದೊಡ್ಡರಾಜ ಕ್ಯಾಂಪ್ ನ ವೃದ್ಧ ಒಬ್ಬರಿಗೆ ತೆಲೆ ಭಾಗದಲ್ಲಿ ಸಿಕ್ಕಾಪಟ್ಟೆ ಕಚ್ಚಿದ್ದು, ಗಂಭೀರ ಗಾಯಗೊಂಡ ಅವರ ತಲೆಗೆ 8 ರಿಂದ 10 ಹೊಲಿಗೆಗಳನ್ನು ಹಾಕಲಾಗಿದೆ. ಎಂ. ಸೂಗೂರು ಶಾಲೆಯ ಅನೇಕ ವಿದ್ಯಾರ್ಥಿಗಳ ಕೈಗೆ ಕಚ್ಚಿ ಗಂಭೀರ ಗಾಯ ಮಾಡಿದೆ. ಅದಲ್ಲದೇ ಗ್ರಾಮದ ಕಿರಾಣಿ ಅಂಗಡಿಗಳಿಗೆ ನುಗ್ಗಿ ಅನೇಕ ತಿಂಡಿ-ತಿನಿಸುಗಳನ್ನು ಚೆಲ್ಲಾ-ಪಿಲ್ಲಿ ಮಾಡಿ ಹದಗೆಡಿಸುತ್ತಿದೆ. ಇದರಿಂದ ಗ್ರಾಮದ ಜನರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.

ಸುಮಾರು 3-4 ದಿನಗಳಿಂದ ಗ್ರಾಪಂ, ಕಂದಾಯ ಇಲಾಖೆ, ಅರಣ್ಯ ಇಲಾಖೆ ಅಧಿಕಾರಿಗಳು ಮಂಗನನ್ನು ಬೋನಿಗೆ ಹಾಕಲು ಹರಸಾಹಸ ಪಡುತಿದ್ದು, ಬೋನಿಗೆ ಬೀಳದೆ ಅವರ ಕೈಗೂ ಸಿಗದೇ ತಪ್ಪಿಸಿಕೊಂಡು ಗ್ರಾಮದಲ್ಲಿ ಓಡಾಡುತ್ತಿದೆ. ಇಂದು ಕೂಡ ಮಂಗನನ್ನು ಹಿಡಿಯುವ ಕಾರ್ಯಾಚರಣೆ ಬಿರುಸಿನಿಂದ ನಡೆಯುತ್ತಿದೆ. ಅಧಿಕಾರಿಗಳು ಮಾತ್ರವಲ್ಲದೇ ಸಾರ್ವಜನಿಕರು ಕೂಡ ತಿಂಡಿ ತಿನಿಸುಗಳಲ್ಲಿ ನಿದ್ರೆ ಮಾತ್ರೆ ಹಾಕಿ ಅದನ್ನು ಹಿಡಿಯುವ ಪ್ರಯತ್ನ ಮಾಡಿದರೂ ಪ್ರಯೋಜನವಾಗದೆ ಚಾಣಕ್ಷತನ ಮೆರೆಯುತ್ತಿದೆ. ಮಂಗನಿಂದಾಗಿ ಗ್ರಾಮದ ಸಾರ್ವಜನಿಕರಿಗೆ ಮತ್ತು ಅಧಿಕಾರಿಗಳಿಗೆ ತೆಲೆ ನೋವಾಗಿ ಕಾಡುತ್ತಿದೆ.

ಇದರಿಂದ ಗ್ರಾಮದ ರಸ್ತೆಯಲ್ಲಿ ಜನರು ಓಡಾಡುವುದು ಕಷ್ಟಕರವಾಗಿದೆ. ಇನ್ನೂ ಒಬ್ಬ ವಿದ್ಯಾರ್ಥಿಗೆ ಗಂಭೀರವಾಗಿ ಕಚ್ಚಿದ್ದು ಬಳ್ಳಾರಿ ವಿಮ್ಸ್ ನಲ್ಲಿ ಚಿಕಿತ್ಸೆ ಪಡೆದು ಬಂದಿದ್ದಾನೆ. ವಿದ್ಯಾರ್ಥಿಗಳು ಕೂಡ ಶಾಲೆಗೆ ಬರುವುದಕ್ಕೆ ಭಯ ಪಡುತ್ತಿದ್ದಾರೆ.

ಗ್ರಾ.ಪಂ. ಇಲಾಖೆ ಸಿಬ್ಬಂದಿಗಳು ಮಂಗನನ್ನು ಈ ಗ್ರಾಮದಿಂದ ಬೇರೆ ಬೇರೆ ಗ್ರಾಮಗಳಿಗೆ ಬಿಟ್ಟು ಬಂದರೂ ಕೂಡಾ ಅದು ಮತ್ತೆ ಮರಳಿ ಸೂಗೂರು ಗ್ರಾಮಕ್ಕೆ ಬಂದಿದೆ. ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಕಂಠಕವಾಗಿರುವ ಈ ಮಂಗನನ್ನು ಅಧಿಕಾರಿಗಳು ಯಾವ ರೀತಿಯಲ್ಲಿ ಸೆರೆ ಹಿಡಿದು ಜನರ ನೆಮ್ಮದಿಯನ್ನು ಕಾಪಾಡುತ್ತಾರೋ ಕಾದು ನೋಡಬೇಕು.

ಟಾಪ್ ನ್ಯೂಸ್

naval

ಡೈರೆಕ್ಟರ್ ಜನರಲ್ ನೇವಲ್ ಆಪರೇಷನ್ಸ್ ಆಗಿ ಅತುಲ್ ಆನಂದ ಅಧಿಕಾರ ಸ್ವೀಕಾರ

mattimood

ಕಲಬುರಗಿ ಗ್ರಾಮೀಣ ಬಿಜೆಪಿಯಲ್ಲಿ ಭುಗಿಲೆದ್ದ ಬಂಡಾಯ

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

1-ascdsadasd

ಬೈಂದೂರು ಕ್ಷೇತ್ರಕ್ಕೆ ಬಿಜೆಪಿಯಿಂದ ಮುನಿಯಾಲು ಉದಯಕುಮಾರ್ ಶೆಟ್ಟಿ ಹೆಸರು ಪ್ರಸ್ತಾಪ

Ra

ಜೈಲು ಶಿಕ್ಷೆ ವಿರುದ್ಧ ರಾಹುಲ್ ಗಾಂಧಿ ನಾಳೆ ಸೂರತ್ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪ್ರಯಾಣಿಕರ ಬಸ್: 2 ಮೃತ್ಯು, ಹಲವರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಬಸ್: 2 ಮೃತ್ಯು, ಹಲವರಿಗೆ ಗಂಭೀರ ಗಾಯ

1-sadsdsad

ಕುನೋ ಉದ್ಯಾನವನದಿಂದ ಸಮೀಪದ ಗ್ರಾಮ ಪ್ರವೇಶಿಸಿದ ಚೀತಾ!; ವಿಡಿಯೋ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

b-l-santhosh

ಬಿ. ಎಲ್‌ ಸಂತೋಷ್‌ ಭಾಷಣಕ್ಕೆ ಅಧಿಕಾರಿಗಳ ಆಕ್ಷೇಪ… ಬಿಜೆಪಿ ಸಭೆಯಲ್ಲಿ ಆಗಿದ್ದೇನು?

ಕೂಡ್ಲಿಗಿ ಬಿಜೆಪಿ ಟಿಕೆಟ್‌ ಭಾರೀ ಪೈಪೋಟಿ

ಕೂಡ್ಲಿಗಿ ಬಿಜೆಪಿ ಟಿಕೆಟ್‌ ಭಾರೀ ಪೈಪೋಟಿ

koodligi

ರಾಜೀನಾಮೆ ನೀಡಿದ ಕೂಡ್ಲಿಗಿಯ ಬಿಜೆಪಿ ಶಾಸಕ ಎನ್.ವೈ.ಗೋಪಾಲಕೃಷ್ಣ

After gathering the opinion of the activists, the candidate was selected: Nalin Kumar Kateel

ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿ ಆಯ್ಕೆ: ನಳಿನ್ ಕುಮಾರ್ ಕಟೀಲ್

crime (2)

ಬಳ್ಳಾರಿ: ತವರು ಮನೆ ಸೇರಿದ್ದ ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

naval

ಡೈರೆಕ್ಟರ್ ಜನರಲ್ ನೇವಲ್ ಆಪರೇಷನ್ಸ್ ಆಗಿ ಅತುಲ್ ಆನಂದ ಅಧಿಕಾರ ಸ್ವೀಕಾರ

mattimood

ಕಲಬುರಗಿ ಗ್ರಾಮೀಣ ಬಿಜೆಪಿಯಲ್ಲಿ ಭುಗಿಲೆದ್ದ ಬಂಡಾಯ

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

1-ascdsadasd

ಬೈಂದೂರು ಕ್ಷೇತ್ರಕ್ಕೆ ಬಿಜೆಪಿಯಿಂದ ಮುನಿಯಾಲು ಉದಯಕುಮಾರ್ ಶೆಟ್ಟಿ ಹೆಸರು ಪ್ರಸ್ತಾಪ

Ra

ಜೈಲು ಶಿಕ್ಷೆ ವಿರುದ್ಧ ರಾಹುಲ್ ಗಾಂಧಿ ನಾಳೆ ಸೂರತ್ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ