ಕುರುಗೋಡು: ಲೋಕಾಯುಕ್ತರಿಂದ ಬಿಇಒ ವೆಂಕಟೇಶ್ ರಾಮಚಂದ್ರಪ್ಪ ತರಾಟೆಗೆ.!
Team Udayavani, Dec 15, 2022, 4:36 PM IST
ಕುರುಗೋಡು: ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಇಂದು ಬಳ್ಳಾರಿ ಲೋಕಾಯುಕ್ತರಿಂದ ಸಾರ್ವಜನಿಕರ ಕುಂದು-ಕೊರತೆ ಸಭೆ ಹಾಗೂ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮದಲ್ಲಿ ಲೋಕಾಯುಕ್ತ ಸಿಪಿಐ ಸಂಗಮೇಶ ಪಟ್ಟಣ್ಣದ ಜನರ ವಿವಿಧ ಕುಂದು-ಕೊರತೆಗಳನ್ನು ವಿಚಾರಣೆ ಮಾಡುತಿದ್ದರು. ಇದೆ ವೇಳೆ ಮಾಜಿ ಪುರಸಭೆ ಸದಸ್ಯ ಜೆ. ಮಹೇಶ್ ಲೇಔಟ್ ಸಮಸ್ಯೆಯ ವಿಚಾರಣೆಯ ಸಂದರ್ಭದಲ್ಲಿ ಬಿಇಒ ವೆಂಕಟೇಶ್ ರಾಮಚಂದ್ರಪ್ಪ ಶಾಲೆಯ ಸಿಬ್ಬಂದಿ ಜೊತೆಗೆ ಗಟ್ಟಿ ದ್ವನಿಯಲ್ಲಿ ಮಾತನಾಡುತ್ತಾ ಪತ್ರ ಬರೆಯುತ್ತಿದ್ದರು.
ಇದರಿಂದ ಸಭೆಯಲಿದ್ದ ಜನರಿಗೆ ಸಮಸ್ಯೆ ಉಂಟು ಮಾಡುವುದು ಕಂಡು ಬಂದು ಸಮಸ್ಯೆಗಳು ಅಸ್ಪಷ್ಟವಾಗಿ ಕೇಳಿಸುತ್ತಿದ್ದ ಹಿನ್ನಲೆ ಲೋಕಾಯುಕ್ತ ಸಿಪಿಐ ಅವರು ಬಿಇಒ ಅವರನ್ನು ಸಭೆಯ ಮುಂದೆ ಕರೆದು ಬಿಇಒ ಅವರೇ ಇದು ನನ್ನ ಕಾರ್ಯಕ್ರಮ. ಇದರಲ್ಲಿ ಯಾರ್ಯಾರನ್ನೋ ಕರೆದುಕೊಂಡು ಏನು ಅದು ಗಲಾಟೆ, ಕಾರ್ಯಕ್ರಮ ನಡೆಯುವ ವೇಳೆ ಇದು ಶೋಭೆಯಲ್ಲ ಎಂದು ತರಾಟೆಗೆ ತೆಗೆದುಕೊಂಡ ಪ್ರಸಂಗ ಜರುಗಿತು.
ಕೊನೆಯದಾಗಿ, ನಾನು ಏನು ಮಾಡಬೇಕು ಅಂತ ಗೊತ್ತಿದೆ ಎಂದು ಖಡಕ್ ಆಗಿ ಎಚ್ಚರಿಸಿದರು.
ಅದಕ್ಕುತ್ತರವಾಗಿ ಬಿಇಓ, ನಿಮಗೆ ಮನವಿ ಕೊಡುವುದಕ್ಕೆ ಪತ್ರ ಬರೆದು ತಯಾರಿ ಮಾಡುತ್ತಿದ್ದೇವೆ ಸರ್ ಅಷ್ಟೇ ಅಂತ ಹೇಳಿ ಸಮಸ್ಯೆಯಿಂದ ಜಾರಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
MUST WATCH
ಹೊಸ ಸೇರ್ಪಡೆ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್