ಕಾಂಗ್ರೆಸ್ ಗೆಲ್ಲಲು ಸೂರ್ಯ ನಾರಾಯಣ ರೆಡ್ಡಿಗೆ ಉಸ್ತುವಾರಿ ನೀಡಲು ಹೈಕಮಾಂಡ್ ಚಿಂತನೆ.!
ಹಾಗಾದ್ರೆ ಶಿಷ್ಯ ಶಾಸಕ ಗಣೇಶ್ ಗೆ ಬೆಂಬಲ ಸಿಗುತ್ತಾ.?
Team Udayavani, Jan 16, 2023, 1:34 PM IST
ಕುರುಗೋಡು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ನಿಟ್ಟಿನಲ್ಲಿ ಕಂಪ್ಲಿ-ಕುರುಗೋಡಲ್ಲಿ ರಾಜಕೀಯ ಕಾವು ದಿನದಿಂದ ದಿನಕ್ಕೆ ರಂಗೇರಿದೆ.
ಹಾಲಿ ಶಾಸಕ ಗಣೇಶ್ ಹಾಗೂ ಮಾಜಿ ಶಾಸಕ ಸುರೇಶ್ ಬಾಬು ಹಳ್ಳಿ ಹಳ್ಳಿಗಳಿಗೆ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ತಿರುಗಾಡುತ್ತಾ ಮತದಾರರನ್ನು ಭೇಟಿ ಮಾಡಲು ನಾನಾ ಕಸರತ್ತು ನಡೆಸುತ್ತಿದ್ದಾರೆ.
ಈಗಾಗಲೇ ಟಿಕೇಟ್ ಗಾಗಿ ಬಿಜೆಪಿಯಿಂದ ಕೇವಲ ಮಾಜಿ ಶಾಸಕ ಸುರೇಶ್ ಬಾಬು ಹೆಸರು ಕಂಡು ಬಂದರೆ ಕಾಂಗ್ರೆಸ್ ನಿಂದ ಹಾಲಿ ಶಾಸಕ ಗಣೇಶ್ ಮತ್ತು ನಾರಾಯಣಪ್ಪ, ರಾಜುನಾಯಕ್ ಹೆಸರುಗಳು ಕಂಡು ಬರುತ್ತಿವೆ.
ಇದಲ್ಲದೆ ಕುರುಗೋಡು ಮತ್ತು ಕಂಪ್ಲಿಯ ಕಾಂಗ್ರೆಸ್ ನ ಕೆಲ ಮುಖಂಡರು ಶಾಸಕರ ನಡುವೆ ಒಡನಾಟ ಕಡಿಮೆಯಾಗಿದ್ದು, ಇದರ ಪರಿಣಾಮ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಎದುರಾಗುವ ಸನ್ನಿವೇಶಗಳು ಕಂಡು ಬರುತ್ತಿವೆ.
2018ರ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಶಾಸಕ ಸೂರ್ಯನಾರಾಯಣ ರೆಡ್ಡಿ, ಶ್ರೀರಾಮುಲು ಅವರಿಗೆ ಟಾಂಗ್ ಕೊಟ್ಟು ಕಂಪ್ಲಿಯಿಂದ ಗಣೇಶ್ ಅವರನ್ನು ಗೆಲ್ಲಿಸಿಕೊಂಡು ಬಂದಿದ್ರು.
ಸದ್ಯ ಈಗ ಜನಾರ್ದನ ರೆಡ್ಡಿ ಕೂಡ ಹೊಸ ಪಕ್ಷ ಕಟ್ಟಿರುವುದರಿಂದ ಅದರಲ್ಲಿ ರೆಡ್ಡಿ ಹಣಬಲ ಹೊಂದಿರುವ ವ್ಯಕ್ತಿಯಾಗಿದ್ದು, ಈ ವಿಷಯವನ್ನಿಟ್ಟುಕೊಂಡು ಕಾಂಗ್ರೆಸ್ ಹೈಕಮಾಂಡ್ ಬಳ್ಳಾರಿ ನಗರ, ಬಳ್ಳಾರಿ ಗ್ರಾಮೀಣ, ಕಂಪ್ಲಿ, ಸಿರುಗುಪ್ಪ ಈ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಿಸಲು ಸೂರ್ಯನಾರಾಯಣ ರೆಡ್ಡಿ ಅವರಿಗೆ ಉಸ್ತುವಾರಿ ನೀಡಲು ಈಗಾಗಲೇ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ.
ಈ ಕುರಿತು ಕೂಡ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರೆಡ್ಡಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎನ್ನುವ ಸುದ್ದಿ ರಾಜಕೀಯ ವಲಯದಲ್ಲಿ ಕಂಡು ಬರುತ್ತಿದೆ.
ಜನಾರ್ದನ ರೆಡ್ಡಿ ಹಣ ಬಲ ಯಾವ ರೀತಿ ಹೊಂದಿದ್ದರೋ ಅದರಂತೆ ಕಾಂಗ್ರೆಸ್ ನಲ್ಲಿ ಅದಕ್ಕೆ ತಕ್ಕ ಹಾಗೆ ಹಣಬಲ ಹೊಂದಿರುವ ನಾಯಕರಿಗೆ ಉಸ್ತುವಾರಿ ಕೊಟ್ಟು, ಬಿಜೆಪಿ, ಜೆಡಿಎಸ್, ಕೆ.ಆರ್.ಪಿ.ಪಿ. ಪಕ್ಷವನ್ನು ಕಟ್ಟಿ ಹಾಕಿ ಕಾಂಗ್ರೆಸ್ ನ್ನು ಗೆಲ್ಲಿಸಲು ನಾನಾ ರಣತಂತ್ರಗಳನ್ನು ಕಾಂಗ್ರೆಸ್ ರೂಪಿಸುತ್ತಿದೆ.
ಅದರಲ್ಲಿ ಸೂರ್ಯನಾರಾಯಣ ರೆಡ್ಡಿ ಸಿರುಗುಪ್ಪ, ಕಂಪ್ಲಿ, ಬಳ್ಳಾರಿ, ಸಂಡೂರು ಹೊಸಪೇಟೆ ಸೇರಿದಂತೆ ಇತರೆ ಭಾಗದಲ್ಲಿ ವರ್ಚಸ್ಸು ಚೆನ್ನಾಗಿ ಇರುವ ಕಾರಣ ಕಾಂಗ್ರೆಸ್ ಗೆಲ್ಲಿಸಲು ರೆಡ್ಡಿಯನ್ನು ಮಣಿ ಹಾಕುತ್ತಿದ್ದಾರೆ.
ಈಗಾಗಲೇ ಸೂರ್ಯನಾರಾಯಣ ರೆಡ್ಡಿಗೆ ಉಸ್ತುವಾರಿ ಕೊಡುವ ಸುದ್ದಿ ಕುರುಗೋಡು ಮತ್ತು ಕಂಪ್ಲಿ ರಾಜಕೀಯ ವಲಯದಲ್ಲಿ ಸದ್ದು ಮಾಡುತ್ತಿದ್ದು, ಇದರಿಂದ ಕೆಲ ತಿಂಗಳಗಳಿಂದ ಸೂರ್ಯನಾರಾಯಣ ರೆಡ್ಡಿಗೆ ಮತ್ತು ಶಾಸಕ ಗಣೇಶ್ ಇಬ್ಬರ ನಡುವೆ ಅಸಮಾಧಾನ ವ್ಯಕ್ತವಾಗಿದ್ದು, ಮೊದಲಿನಂತೆ ಅವರ ನಡವಳಿಕೆಗಳು ಕಂಡು ಬರುತ್ತಿಲ್ಲ. ಆದ್ದರಿಂದ ರೆಡ್ಡಿಗೆ ಉಸ್ತುವಾರಿಯ ಜವಾಬ್ದಾರಿ ಸಿಕ್ಕಿದರೆ ಕಂಪ್ಲಿಯಲ್ಲಿ ಗಣೇಶ್ ಗೆಲ್ಲಲು ಕಂಟಕವಾಗಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ