ಬಸ್‌ ನಿಲ್ದಾಣದಲ್ಲಿಲ್ಲ ಮೂಲ ಸೌಕರ್ಯ

2.48 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿದ್ದ ನಿಲ್ದಾಣ

Team Udayavani, Apr 11, 2022, 2:25 PM IST

siraguppa

ಸಿರುಗುಪ್ಪ: ನಗರದ ಹೃದಯ ಭಾಗದಲ್ಲಿರುವ ಬಸ್‌ನಿಲ್ದಾಣವನ್ನು ರೂ. 2.48 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದರೂ ಪ್ರಯಾಣಿಕರು ಮೂಲ ಸೌಕರ್ಯಗಳಿಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಹಳೇ ಬಸ್‌ನಿಲ್ದಾಣವು ಚಿಕ್ಕದಾಗಿದ್ದು ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಇಲ್ಲಿ ಹೊಸ ಬಸ್‌ನಿಲ್ದಾಣವನ್ನು ಸರ್ಕಾರ ನಿರ್ಮಾಣ ಮಾಡಿದೆ. ಆದರೆ ಬಸ್‌ನಿಲ್ದಾಣದಲ್ಲಿರಬೇಕಾದ ಕನಿಷ್ಟ ಸೌಲಭ್ಯಗಳಿಲ್ಲದೆ ಪ್ರತಿನಿತ್ಯವೂ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ಇರುತ್ತದೆ.

ತಾಲೂಕಿನ ವಿವಿಧ ಗ್ರಾಮಗಳಿಂದ ಶಾಲಾ ಕಾಲೇಜುಗಳಿಗಾಗಿ ಸುಮಾರು 4-5 ಸಾವಿರ ವಿದ್ಯಾರ್ಥಿಗಳು ಮತ್ತು ವ್ಯಾಪಾರ ವಹಿವಾಟು, ಸರ್ಕಾರಿ ಕಚೇರಿಗಳಲ್ಲಿ ವಿವಿಧ ಕೆಲಸ ಕಾರ್ಯಗಳಿಗಾಗಿ ಒಂದು ಸಾವಿರಕ್ಕೂ ಹೆಚ್ಚು ಸಾರ್ವಜನಿಕರು ನಗರಕ್ಕೆ ಬರುತ್ತಿದ್ದಾರೆ. ಬೀದರ್‌ನಿಂದ ಚಾಮರಾಜ ನಗರದವರೆಗೆ ಮತ್ತು ರಾಯಚೂರಿನಿಂದ ಬೆಂಗಳೂರುವರೆಗೆ ಪ್ರತಿನಿತ್ಯವೂ ನೂರಾರು ಬಸ್‌ಗಳು ಇದೇ ನಿಲ್ದಾಣಕ್ಕೆ ಬಂದು ಹೋಗುತ್ತವೆ. ಈ ನಿಲ್ದಾಣದಲ್ಲಿ ಪ್ರತಿನಿತ್ಯ ಸುಮಾರು 10ಸಾವಿರಕ್ಕೂ ಹೆಚ್ಚು ಜನರು ಪ್ರಯಾಣ ಮಾಡುತ್ತಿದ್ದಾರೆ. ಇಷ್ಟೊಂದು ದೊಡ್ಡ ಸಂಖ್ಯೆಯ ಪ್ರಯಾಣಿಕರು ಸಂಚರಿಸುವ ನಿಲ್ದಾಣದಲ್ಲಿ ಕುಡಿಯುವ ನೀರು, ಉತ್ತಮ ಶೌಚಾಲಯ, ಕುಳಿತುಕೊಳ್ಳಲು ಆಸನಗಳು, ಬಿಸಿಲಿನ ತಾಪ ತಣಿಸಲು ಫ್ಯಾನ್‌ಗಳು, ಮನರಂಜನೆಗಾಗಿ ದೊಡ್ಡ ಪರದೆಯ ಟಿವಿಗಳನ್ನು ಅಳವಡಿಸಬೇಕಾಗಿದೆ.

ಹೊಸ ಬಸ್‌ನಿಲ್ದಾಣವು ನಿರ್ಮಾಣವಾಗಿ ಒಂದೂವರೆ ವರ್ಷದ ನಂತರ 20 ಫೆಬ್ರವರಿ 2022ರಂದು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ಶ್ರೀರಾಮುಲು ಬಸ್‌ನಿಲ್ದಾಣವನ್ನು ಲೋಕಾರ್ಪಣೆ ಮಾಡಿ ಹೋಗಿದ್ದರೂ ಮೂಲ ಸೌಕರ್ಯಗಳ ಕೊರತೆ ಮಾತ್ರ ನೀಗಿಲ್ಲ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಅನುದಾನ ರೂ. 30ಲಕ್ಷ ವೆಚ್ಚದಲ್ಲಿ ಈ ನಿಲ್ದಾಣದಲ್ಲಿ ಉತ್ತಮವಾದ ಶೌಚಾಲಯಗಳನ್ನು ನಿರ್ಮಿಸುವುದಾಗಿ ಈ ಕಾರ್ಯವನ್ನು ಆದಷ್ಟು ಶೀಘ್ರವಾಗಿ ಕೈಗೆತ್ತಿಕೊಳ್ಳುವುದಾಗಿ ಶಾಸಕ ಎಂ.ಎಸ್‌. ಸೋಮಲಿಂಗಪ್ಪ ನೀಡಿದ ಭರವಸೆಯೂ ಈಡೇರಿಲ್ಲ.

ಹಳೆಯ ಶೌಚಾಲಯಗಳಿದ್ದು, ಇವುಗಳು ಸರಿಯಾದ ನಿರ್ವಹಣೆ ಇಲ್ಲದೆ ಹಾಳಾಗಿದ್ದು, ಅನಿವಾರ್ಯವಾಗಿ ಸಾರ್ವಜನಿಕರು ಈ ಶೌಚಾಲಯಗಳನ್ನೇ ಬಳಸುತ್ತಿದ್ದಾರೆ. ಇನ್ನೂ ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಇಲ್ಲದೆ ಪ್ರಯಾಣಿಕರು ನೆಲದ ಮೇಲೆಯೇ ಕುಳಿತುಕೊಳ್ಳಬೇಕಾದ ಅನಿವಾರ್ಯತೆ ಇರುತ್ತದೆ. ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಸಾರ್ವಜನಿಕರು ಬಸ್‌ನಿಲ್ದಾಣದಲ್ಲಿರುವ ಬೇಕರಿ ಮತ್ತು ನಿಲ್ದಾಣದ ಮುಂದಿರುವ ಹೋಟೆಲ್‌ ಅಂಗಡಿಗಳಲ್ಲಿ ದುಡ್ಡುಕೊಟ್ಟು ನೀರು ಖರೀದಿಸಿ ಕುಡಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಆದರೂ ಕೂಡ ಸಾರಿಗೆ ಇಲಾಖೆ ಹಿರಿಯ ಅಧಿಕಾರಿಗಳು ನಿಲ್ದಾಣದಲ್ಲಿರುವ ಮೂಲ ಸೌಕರ್ಯಗಳನ್ನು ಕಲ್ಪಿಸಲು ಪ್ರಯತ್ನಿಸದೇ ಇರುವುದರಿಂದ ನಿತ್ಯವೂ ಪ್ರಯಾಣಿಕರು ಪರದಾಡುವಂತಾಗಿದೆ ಎಂದು ಪ್ರಯಾಣಿಕರಾದ ಹುಸೇನಪ್ಪ, ರಾಘವೇಂದ್ರರೆಡ್ಡಿ, ಮಂಜುನಾಥ, ಎಂ.ಎಸ್‌.ವೀರೇಶ, ಎಂ.ದೊಡ್ಡಬಸಪ್ಪ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿಲ್ದಾಣದಲ್ಲಿ ಆಸನಗಳ ವ್ಯವಸ್ಥೆ ಮಾಡಬೇಕೆಂದು ನಮ್ಮ ಮೇಲಧಿ ಕಾರಿಗಳ ಗಮನಕ್ಕೆ ತರಲಾಗಿದೆ. ಶೀಘ್ರವಾಗಿ ಆಸನಗಳ ವ್ಯವಸ್ಥೆಯನ್ನು ಪ್ರಯಾಣಿಕರಿಗೆ ಮಾಡಿಕೊಡಲಾಗುವುದು. ಕೆ.ಎಂ.ತಿರುಮಲೇಶ, ಸಾರಿಗೆ ಘಟಕದ ವ್ಯವಸ್ಥಾಪಕ, ಸಿರುಗುಪ್ಪ

ಆರ್‌.ಬಸವರೆಡ್ಡಿ ಕರೂರು

ಟಾಪ್ ನ್ಯೂಸ್

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

bellary

Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು

ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.