ನಾರಾಯಣರಾವ್‌ ಉದ್ಯಾನವನದಲ್ಲಿ ನಿರ್ವಹಣೆ ಕೊರತೆ!


Team Udayavani, Feb 5, 2019, 10:58 AM IST

bell.jpg

ಬಳ್ಳಾರಿ: ನಗರದ ಹೃದಯಭಾಗದಲ್ಲಿ ನಿರ್ಮಿಸಲಾಗಿರುವ ನಗರೂರು ನಾರಾಯನರಾವ್‌ (ಕಾಗೆ) ಉದ್ಯಾನವನ ನಿರ್ವಹಣೆಯ ಕೊರತೆ ಎದುರಿಸುತ್ತಿದೆ. ಸ್ವಚ್ಛತೆ ಕಾಪಾಡಬೇಕಿದ್ದ ಮಹಾನಗರ ಪಾಲಿಕೆ ನಿರ್ಲಕ್ಷ್ಯದಿಂದಾಗಿ ಉದ್ಯಾನವನದಲ್ಲಿನ ಕನ್ನಡ ತಾಯಿ ಭುವನೇಶ್ವರಿ ವಿಗ್ರಹ ಬಳಿಯೆಲ್ಲ ಮದ್ಯದ ಬಾಟಲ್‌ಗ‌ಳೇ ರಾರಾಜಿಸುತ್ತಿದ್ದು, ಕಿಡಿಗೇಡಿಗಳ ಹಾವಳಿ ಅಧಿಕವಾಗಿದೆ.

ನಗರದ ಡಾ. ರಾಜ್‌ಕುಮಾರ್‌ ರಸ್ತೆಯಲ್ಲಿ ಕಳೆದ ಎರಡು ದಶಕಗಳ ಹಿಂದೆ ನಿರ್ಮಿಸಲಾಗಿದ್ದ ನಗರೂರು ನಾರಾಯಣರಾವ್‌ ಉದ್ಯಾನವನ ಸದ್ಯ ನಿರ್ವಹಣೆ ಕೊರತೆ ಎದುರಿಸುತ್ತಿದೆ. ಆರಂಭದಲ್ಲಿ ಒಂದಷ್ಟು ವರ್ಷಗಳ ಕಾಲ ಸಾರ್ವಜನಿಕರ ಬಳಕೆಗೆ ಅಣಿಯಾಗಿದ್ದ ಉದ್ಯಾನವನ ನಂತರದ ದಿನಗಳಲ್ಲಿ ನಿರ್ವಹಣೆ ಕೊರತೆಯಿಂದಾಗಿ ಸ್ವಚ್ಛತೆಯಿಲ್ಲದೆ, ಮೂಲೆಗುಂಪಾಗಿದೆ. ಮಾಜಿ ಉಪಮುಖ್ಯಮಂತ್ರಿ ದಿ.ಎಂ.ಪಿ.ಪ್ರಕಾಶರ ಅಧಿಕಾರವಧಿಯಲ್ಲಿ ಉದ್ಯಾನವನದಲ್ಲಿ ಕನ್ನಡತಾಯಿ ಭುವನೇಶ್ವರಿ ಮೂರ್ತಿ ಸ್ಥಾಪಿಸಲಾಗಿದೆ. ಉದ್ಯಾನದ ಮೂಲೆಯಲ್ಲಿ ಈ ಮೂರ್ತಿಯನ್ನ ಸ್ಥಾಪಿಸಿದ್ದು, ಅದರ ಹಿಂದುಗಡೆ ಕಾರಂಜಿ ನಿರ್ಮಿಸಲಾಗಿದೆ. ಆದರೆ, ಸಂಜೆಯೊತ್ತಿಗೆ ಈ ಕಾರಂಜಿ ಬಳಿ ಮಗದೊಂದು ಲೋಕ ತೆರೆದುಕೊಳ್ಳುತ್ತದೆ. ಉದ್ಯಾನದ ಹಿಂಭಾಗ ಕೊಳಚೆ ಪ್ರದೇಶದ ನಿವಾಸಿಗಳು ವಾಸಿಸುತ್ತಿದ್ದಾರೆ. ಉದ್ಯಾನದ ಮುಖ್ಯರಸ್ತೆಯ ಗೇಟ್‌ಗೆ ಬೀಗ ಜಡಿದರೂ ಸಹ ಉದ್ಯಾನದ ಒಳಗಡೆಯಿಂದಲೇ ವಾಮಮಾರ್ಗವಿದೆ. ಆ ಮಾರ್ಗವಾಗಿ ಕೊಳಚೆ ಪ್ರದೇಶದ ಯುವಜನರ ತಂಡೋಪ ತಂಡವಾಗಿ ತಡರಾತ್ರಿ ಒಳಪ್ರವೇಶಿಸಿ, ಮದ್ಯ ಸೇವನೆ ಮಾಡುತ್ತಾರೆ. ಮದ್ಯದ ಬಾಟಲ್‌ ಭುವನೇಶ್ವರಿ ಮೂರ್ತಿಯ ಬಳಿಯಿರುವ ನೀರಿನ ಕಾರಂಜಿಯಲ್ಲೇ ಬಿಸಾಡಿ ಹೋಗುತ್ತಾರೆ. ಅದರಿಂದ ಕಾರಂಜಿಯಲ್ಲಿ ನೀರು ಪಾಚಿಗಟ್ಟಿದೆ. ಉದ್ಯಾನದಲ್ಲಿ ವಾಯುವಿಹಾರ ಮಾಡುತ್ತಿರುವವರಿಗಂತೂ ಸೊಳ್ಳೆಗಳ ಕಾಟ ವಿಪರೀತವಾಗಿರುವ ಅನುಭವ ಆಗಿದೆ ಎನ್ನುತ್ತಾರೆ ವಾಯುವಿಹಾರಿಯೊಬ್ಬರು.

ತಾಯಿ ಭುವನೇಶ್ವರಿ ಮೂರ್ತಿ ಬಳಿಯೇ ಮದ್ಯದ ಬಾಟಲ್‌ಗ‌ಳು ಪ್ರತ್ಯಕ್ಷವಾಗಿರುವುದು ದುರ್ದೈವದ ಸಂಗತಿ. ಆ ಕಾರಂಜಿಯ ತುಂಬೆಲ್ಲಾ ಮದ್ಯದ ಬಾಟಲ್‌ ಬಿಸಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಕುಡಿದ ಅಮಲಿನಲ್ಲಿ ಮೂರ್ತಿ ಭಗ್ನಗೊಳಿಸಿದೂ ಅಚ್ಚರಿಪಡಬೇಕಿಲ್ಲ. ಹೀಗಾಗಿ, ಪಾಲಿಕೆಯು ಕೂಡಲೇ ಎಚ್ಚೆತ್ತುಕೊಂಡು ಮೂರ್ತಿ ರಕ್ಷಣೆಗೆ ಮುಂದಾಗಬೇಕು. ಅಲ್ಲದೇ, ಉದ್ಯಾನ ಪ್ರವೇಶಿಸಲು ಇರುವ ಹಲವು ವಾಮ ಮಾರ್ಗಗಳನ್ನು ಬಂದ್‌ ಮಾಡಬೇಕು. ಅದಕ್ಕಾಗಿ ಸಿಸಿ ಕ್ಯಾಮೆರಾ ಅಳವಡಿಸಿ, ಉದ್ಯಾನವನಕ್ಕೆ ಸೂಕ್ತ ಭದ್ರತೆ ಒದಗಿಸಬೇಕೆಂಬುದು ನವಕರ್ನಾಟಕ ಯುವಶಕ್ತಿ ಸಂಘಟನೆಯ ಯುವ ಮುಖಂಡ ಮಹೇಶ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

bellary

Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.