ಜಿಂದಾಲ್ ವಿರುದ್ಧ ಸಿಡಿದೆದ್ದ ಲಾಡ್-ಸಿಂಗ್!
Team Udayavani, Jun 18, 2019, 10:44 AM IST
ಬಳ್ಳಾರಿ: ಮಾಜಿ ಶಾಸಕ ಅನಿಲ್ ಲಾಡ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಶಾಸಕ ಆನಂದ್ಸಿಂಗ್ ಸೇರಿದಂತೆ ಇತರರು ಹಾಜರಿದ್ದರು.
ಬಳ್ಳಾರಿ: ಜಿಂದಾಲ್ ಸಂಸ್ಥೆ ಸಂಡೂರು ತಾಲೂಕಿನಲ್ಲಿ ಸಾಕಷ್ಟು ಜಮೀನು ವಶಪಡಿಸಿಕೊಂಡಿದೆ. ಇದಕ್ಕೆ ಅಲ್ಲಿನ ಶಾಸಕರು ಧ್ವನಿ ಎತ್ತಬೇಕು. ಜಿಂದಾಲ್ ಸಂಸ್ಥೆಯಲ್ಲಿ ಉದ್ಯೋಗ ನೀಡುವಂತೆ ಹಲವಾರು ಬಾರಿ ಶಿಫಾರಸು ಪತ್ರ ಕಳುಹಿಸಲಾಗಿದೆ. ಒಂದು ಪತ್ರಕ್ಕೂ ಪ್ರತಿಕ್ರಿಯೆ ನೀಡಿಲ್ಲ ಎಂದು ವಿಜಯನಗರ ಶಾಸಕ ಆನಂದ್ಸಿಂಗ್ ಆರೋಪಿಸಿದರು.
ಸೋಮವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಡೂರು ಶಾಸಕ, ಸಚಿವ ತುಕಾರಾಂ ಪತ್ರ ಕೊಟ್ಟರೂ ಆಗಲ್ಲ. ಖುದ್ದಾಗಿ ಹೋಗಿ ಭೇಟಿಯಾದರೆ ಮಾತ್ರ ಕೆಲಸಗಳು ಆಗುತ್ತವೆ ಎಂದು ಹೇಳಿದರು.
ಮಾಜಿ ಶಾಸಕ ಅನಿಲ್ ಲಾಡ್ ಮಾತನಾಡಿ, ಜಿಂದಾಲ್ ಸಂಸ್ಥೆಗೆ ಜಮೀನು ಪರಭಾರೆ ಮಾಡಲು ಹೊರಟಿರುವ ರಾಜ್ಯ ಸರ್ಕಾರ ಎಕರೆ ಜಮೀನಿಗೆ ಕೇವಲ 1.22 ಲಕ್ಷ ರೂ. ನಿಗದಿಪಡಿಸಿದೆ. ಒಟ್ಟು 3667 ಎಕರೆಗೆ ಕೇವಲ 43.99 ಕೋಟಿ ರೂ. ಆಗಲಿದೆ. ಆದರೆ, ಇದೇ ಜಮೀನನ್ನು ಜಿಂದಾಲ್ಗೆ ಪರಭಾರೆಯಾಗಿ ಜಿಂದಾಲ್ನವರು ಬ್ಯಾಂಕ್ನಲ್ಲಿ ಅಡವಿಟ್ಟು ಸಾಲ ಪಡೆದರೆ ಸಾವಿರಾರು ಕೋಟಿ ರೂ. ಸಾಲ ದೊರೆಯಲಿದೆ. 3667 ಎಕರೆ ಜಮೀನು ವಾಣಿಜ್ಯಕ್ಕೆಂದು ಪರಿವರ್ತಿಸಲಾಗಿರುವ ಹಿನ್ನೆಲೆಯಲ್ಲಿ ಜಿಂದಾಲ್ನವರು ಕೊಲೆಟ್ರಾಲ್ ಜಮೀನನ್ನಾಗಿ ಎಕರೆಗೆ 50 ಲಕ್ಷ ರೂ. ಬೆಲೆ ನಿಗದಿಪಡಿಸಿ ಬ್ಯಾಂಕ್ನಲ್ಲಿ ಅಡವಿಟ್ಟರೆ 1866 ಕೋಟಿ ರೂ. ಸಾಲ ದೊರೆಯಲಿದೆ. ಲೆಕ್ಕಪರಿಶೋಧಕರಿಂದ ಆಡಿಟಿಂಗ್ ಮಾಡಿಸಿ ಎಕರೆಗೆ 1 ಕೋಟಿ ರೂ. ಬೆಲೆ ನಿಗದಿಪಡಿಸಿ ಬ್ಯಾಂಕ್ನಲ್ಲಿ ಅಡವಿಟ್ಟರೂ 3667 ಕೋಟಿ ರೂ. ಸಾಲ ಲಭ್ಯವಾಗಲಿದೆ. ಜಿಂದಾಲ್ ಸಂಸ್ಥೆಗೆ ಲಾಭ ಒದಗಿಸಿಕೊಡಲು ರಾಜ್ಯ ಸರ್ಕಾರವೇ ಪರೋಕ್ಷವಾಗಿ ಬೆಂಬಲಿಸುತ್ತಿದೆ. ಆದ್ದರಿಂದ ಹಣಕಾಸು ಇಲಾಖೆ ಕಾರ್ಯದರ್ಶಿಗಳು ಜಮೀನು ಪರಭಾರೆ ಮಾಡದೆ ಲೀಜ್ ಮುಂದುವರಿಸಬೇಕು. ಯಾವುದೇ ಬ್ಯಾಂಕ್ನಲ್ಲಿ ಸಾಲಕ್ಕಾಗಿ ಅಡಮಾನವಿಡಬಾರದೆಂಬ ಷರತ್ತು ವಿಧಿಸಬೇಕೆಂದು ಒತ್ತಾಯಿಸಿದರು.
ಪಾಲಿಕೆ ಸದಸ್ಯೆ ಪರ್ವಿನ್ಬಾನು, ಲಾರಿ ಮಾಲೀಕರ ಸಂಘದ ಅಧ್ಯಕ್ಷ ವೆಂಕಟರಾವ್, ಹರ್ಷದ್, ವೆಂಕಟೇಶ್ ಹೆಗಡೆ, ರಾಮಕೃಷ್ಣ, ಸೋಮಶೇಖರ್ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು
ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು
Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು
Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು
Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ