ಹಣತೆ ಮಾರಾಟ ಜೋರು
Team Udayavani, Nov 11, 2020, 9:14 PM IST
ಸಿರುಗುಪ್ಪ: ದೀಪಾವಳಿ ಹಬ್ಬದ ಅಂಗವಾಗಿ ನಗರದ ವಿವಿಧ ಕಡೆಗಳಲ್ಲಿ ದೀಪ ಹಚ್ಚುವ ವಿವಿಧ ಬಗೆಯ ಆಕಾರದ ಹಣತೆಗಳ ಮಾರಾಟ ಆರಂಭವಾಗಿದೆ. ನಗರದ ಬಳ್ಳಾರಿ ರಸ್ತೆ, ಗಾಂಧಿ ವೃತ್ತ, ಅಂಬೇಡ್ಕರ್ ವೃತ್ತದಲ್ಲಿ ತಳ್ಳುಗಾಡಿಗಳ ಮೇಲೆ ಮಾರಾಟಗಾರರು ವಿವಿಧ ಬಗೆಯ ಹಣತೆಗಳನ್ನಿಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದಾರೆ.
5 ದೀಪ ಹಚ್ಚುವ ಹಣತೆ, ಚಿಕ್ಕ ಚಿಕ್ಕ ಹಣತೆ, ಗಾಜಿನ ಗ್ಲಾಸ್ ಅಳವಡಿಸಿದ ಹಣತೆ, ಶಂಕುವಿನ ಆಕಾರದ ಹಣತೆ ಸೇರಿದಂತೆ ವಿವಿಧ ಆಕಾರದಹಣತೆಗಳನ್ನು ಮಾರಾಟಕ್ಕಿಟ್ಟಿದ್ದು, ರೂ. 35ರಿಂದ ರೂ. 300ರ ಮೌಲ್ಯದಹಣತೆಗಳು ಮಾರಾಟಕ್ಕಿವೆ. ಹೆಚ್ಚಿನಬೆಲೆಯ ಹಣತೆಗಳನ್ನು ಕೆಲವು ಜನರು ಮಾತ್ರ ಖರೀದಿ ಮಾಡುತ್ತಿದ್ದು, ರೂ. 100 ಬೆಲೆ ಒಳಗಿನ ಹಣತೆಗಳನ್ನು ಹೆಚ್ಚಾಗಿ ಮಾರಾಟವಾಗುತ್ತಿರುವುದು ಕಂಡು ಬರುತ್ತಿದೆ.
ಈ ವರ್ಷ ಕೋವಿಡ್ ಕಾಟದಿಂದ ವ್ಯಾಪಾರ ಉತ್ತಮವಾಗಿ ನಡೆಯುತ್ತಿಲ್ಲ. ಕಳೆದ ವರ್ಷ ಹಣತೆಗಳನ್ನು ಹೆಚ್ಚಾಗಿ ಮಾರಾಟ ಮಾಡಲಾಗಿತ್ತು. ಈ ವರ್ಷ ಹಬ್ಬ 2-3ದಿನ ಮುಂದೆ ಇದ್ದರೂ ವ್ಯಾಪಾರ ಅಷ್ಟಕ್ಕಷ್ಟೆ ಎನ್ನುವಂತೆ ನಡೆಯುತ್ತಿದೆ ಎಂದು ಹಣತೆಗಳ ವ್ಯಾಪಾರಿ ಸುಂಕಮ್ಮ ತಿಳಿಸಿದ್ದಾರೆ.ದೀಪಾವಳಿ ಹಬ್ಬವು ಬೆಳಕಿನ ಹಬ್ಬವಾಗಿದ್ದು, ದೀಪಾವಳಿಯಂದು ಮನೆ ಸುತ್ತಮುತ್ತಲು ಬೆಳಗಲು ಬೇಕಾದ ಮಣ್ಣಿನ ಹಣತೆಗಳನ್ನು ಕೊಂಡುಕೊಳ್ಳುತ್ತಿದ್ದೇವೆ.ಕಳೆದ ವರ್ಷಕ್ಕಿಂತ ಈ ವರ್ಷ ಹಣತೆಗಳ ಬೆಲೆ ಹೆಚ್ಚಾಗಿದೆ ಎಂದು ನಗರದ ಗೃಹಿಣಿ ಪಾರ್ವತಿ ತಿಳಿಸಿದ್ದಾರೆ.
ಮಾಸ್ಕ್ ಧರಿಸಿ ಕೋವಿಡ್ ಓಡಿಸಿ :
ಸಂಡೂರು: ಕೋವಿಡ್ ನಮ್ಮಿಂದ ಇನ್ನೂ ದೂರವಾಗಿಲ್ಲ. ಆದ್ದರಿಂದ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಿ, ಸ್ಯಾನಿಟೈಸರ್ ಬಳಸಿ ರೋಗ ಓಡಿಸಿ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಕೆ.ಶಿವಪ್ಪ ತಿಳಿಸಿದರು.
ಅವರು ತಾಲೂಕಿನ ತೋರಣಗಲ್ಲು ಸರ್ಕಾರಿ ಅಸ್ಪತ್ರೆ ಮುಂಭಾಗದಲ್ಲಿ ಕೋವಿಡ್ ಜಾಗೃತಿ ಮತ್ತು ಎಚ್ಚರಿಕೆಯ ಕಾರ್ಯಕ್ರಮದಲ್ಲಿ ಪ್ರತಿಜ್ಞೆಯನ್ನು ಮಾಡಿಸಿ ಮಾತನಾಡಿ, ಪ್ರತಿಯೊಬ್ಬರೂ ಕಡ್ಡಾಯವಾಗಿ ಪ್ರತಿಜ್ಞೆ ಮಾಡಿ ರೋಗ ಹರಡದಂತೆ ಮುನ್ನೆಚ್ಚರಿಕೆಯಾಗಿ ಮಾಸ್ಕ್ ಧರಿಸುತ್ತೇನೆ. ಸಾಮಾಜಿಕ ಅಂತರ ಕಾಪಾಡುತ್ತೇನೆ, ಸ್ಯಾನಿಟೈಸರ್ ಬಳಸುತ್ತೇನೆ, ಜಾಗೃತಿ ಮೂಡಿಸುವ ಕಾರ್ಯದಲ್ಲಿ ಭಾಗಿಯಾಗಿ ಎಚ್ಚರಿಸುತ್ತೇನೆ, ಪ್ರತಿಯೊಬ್ಬರಿಗೂ ಸಹ ಈ ಬಗ್ಗೆ ಮಾಹಿತಿ ನೀಡುವಲ್ಲಿ ಸಹಕರಿಸುತ್ತೇನೆ, ಸಮೀಕ್ಷೆ ಮತ್ತು ಮಾಹಿತಿ ಪಡೆಯಲು ಬಂದವರಿಗೆ ಸಹಕರಿಸುತ್ತೇನೆ ಎನ್ನುವ ಪ್ರತಿಜ್ಞೆಯನ್ನು ಬೋಧಿಸಿ ಎಚ್ಚರಿಕೆ ಕ್ರಮಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಸರ್ಕಾರಿ ಅಸ್ಪತ್ರೆ ಮುಂಭಾಗದಲ್ಲಿ ಅಸ್ಪತ್ರೆ ಸಿಬ್ಬಂದಿ, ರೋಗಿಗಳು ಪ್ರತಿಜ್ಞೆ ಮಾಡಿದರು. ಡಾ| ಅರ್ಚನಾ, ಡಾ| ದೀಪಾ ಪಾಟೀಲ್, ಡಾ| ಬಸವೇಶ್, ಮಂಜುನಾಥ ವೆಂಕಟೇಶ್, ಕಿರಣ್, ಇಸ್ಮಾಯಿಲ್, ನರ್ಸ ಲಕ್ಷ್ಮೀ ಗೀತಾ, ಸಿಪಿಐ ಸ್ವಾಮಿ, ಶ್ರೀನಿವಾಸ, ನಿಜಾಮುದ್ದಿನ್ ಪ್ರತಿಜ್ಞೆ ಸ್ವೀಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ