ಹಂಪಿ: ಹಗಲಲ್ಲೇ ಚಿರತೆಗಳು ಪ್ರತ್ಯಕ್ಷ; ಪ್ರವಾಸಿಗರಲ್ಲಿ ಆತಂಕ
Team Udayavani, Feb 16, 2017, 12:28 PM IST
ಬಳ್ಳಾರಿ: ವಿಶ್ವಪರಂಪರೆಯ ತಾಣ, ಸದಾ ಪ್ರವಾಸಿಗರಿಂದ ತುಂಬಿರುವ ಹಂಪಿಯಲ್ಲಿ ಚಿರತೆಗಳು ಹಗಲಲ್ಲೇ ರಾಜಾರೋಷವಾಗಿ ತಿರುಗುತ್ತಿದ್ದು ಪ್ರವಾಸಿಗರಲ್ಲಿ ಆತಂಕ ಮೂಡಿಸಿದೆ.
ಕಳೆದ ಕೆಲ ದಿನಗಳಿಂದ ಪದೇ ಪದೇ ಚಿರತೆಗಳು ಹಗಲಲ್ಲೇ ಪ್ರತ್ಯಕ್ಷವಾಗಿದ್ದು ಪ್ರವಾಸಿಗರು ಬೆಚ್ಚಿ ಬಿದ್ದಿದ್ದಾರೆ. ಕೆಲ ಪ್ರವಾಸಿಗರು ಆತಂಕದಿಂದ ಕಾಲ್ಕಿತ್ತ ಘಟನೆಯೂ ನಡೆದಿದೆ.
ಕಡ್ಡಿರಾಂಪುರ ಮಾರ್ಗದ ಬಳಿಯ ಕುಸ್ತಿ ಅಖಾಡದ ಬಳಿ ಕೃಷ್ಣ ಬಜಾರ್, ಅಕ್ಕ ತಂಗಿಯರ ಗುಡ್ಡ, ಮಾತಂಗ ಪರ್ವತ, ಯಂತ್ರೋದ್ಧಾರಕ ಆಂಜನೇಯ ಗುಡ್ಡಗಳಲ್ಲಿ ಪ್ರವಾಸಿಗರಿಗೆ ಚಿರತೆಗಳು ಪ್ರತ್ಯಕ್ಷ ವಾಗುವ ಮೂಲ ಕ ಭೀತಿ ಮೂಡಿಸಿವೆ.
ಈ ಹಿಂದೆ ಅರಣ್ಯ ಇಲಾಖೆ ಕೆಲ ಚಿರತೆಗಳನ್ನು ಹಿಡಿರು ಅರಣ್ಯಕ್ಕೆ ಬಿಟಿದ್ದರಾದರೂ ಈಗ 7 ರಿಂದ 8 ಚಿರತೆಗಳು ಸ್ಥಳದಲ್ಲೇ ನೆಲೆಸಿರುವ ಬಗ್ಗೆ ಸ್ಥಳೀಯರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಇದೀಗ ಹಾಡಹಗಲೇ ಚಿರತೆಗಳು ಕಣ್ಣಿಗೆ ಕಾಣ ಸಿಗುವ ಕಾರಣ ಕೆಲ ಆಸಕ್ತ ವನ್ಯ ಜೀವಿ ಛಾಯಾಗ್ರಾಹಕರು ಹಂಪಿಗೆ ಆಗಮಿಸಿ ಫೋಟೋ ತೆಗೆಯಲು ಮುಂದಾಗಿದ್ದಾರೆ.
ಹಂಪಿಯ ಸುತ್ತಲಿನ ಪ್ರದೇಶದಲ್ಲಿ ದಟ್ಟ ಪೊದೆಗಳು ಮತ್ತು ಅರಣ್ಯವಿರುವುದರಿಂದ ಚಿರತೆ ಮತ್ತು ಕರಡಿಗಳು ವಾಸವಾಗಿವೆ. ಈ ಬಗ್ಗೆ ಅರಣ್ಯ ಇಲಾಖೆ ಯೂ ತಲೆ ಕೆಡಿಸಿಕೊಂಡಿದ್ದು ಪ್ರವಾಸಿಗರಿಗೆ ಮುಂದಾಗುವ ಸಂಭಾವ್ಯ ಅಪಾಯವನ್ನು ತಪ್ಪಿಸುವ ಸಲುವಾಗಿ ಚಿರತೆಗಳನ್ನು ಸೆರೆ ಹಿಡಿದು ಸುರಕ್ಷಿತ ಸ್ಥಳದಲ್ಲಿ ಬಿಡುವ ಬಗ್ಗೆ ಚಿಂತನೆ ನಡೆಸಿರುವ ಬಗ್ಗೆ ವರದಿಯಾಗಿದೆ.
1985ರಲ್ಲಿ ಹಂಪಿ ವಿಶ್ವ ಪಾರಂಪರಿಕ ತಾಣ ಎಂದು ಯುನೆಸ್ಕೋ ಘೋಷಿಸಿದ ಬಳಿಕ ವಿದೇಶಿ ಪ್ರವಾಸಿಗರು ಹರಿದು ಬರುತ್ತಿದ್ದು ವಾರ್ಷಿಕ ಸುಮಾರು 1 ಲಕ್ಷಕ್ಕೂ ಹೆಚ್ಚು ಮಂದಿ ವಿದೇಶಿ ಪ್ರವಾಸಿಗರು ಆಗಮಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ