ವರ್ಷದಲ್ಲಿ 29 ರೈತರು ಆತ್ಮಹತ್ಯೆಗೆ ಶರಣು

ಬಾದನಹಟ್ಟಿ ರೈತ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಗೆ ಪತ್ರ

Team Udayavani, Apr 8, 2022, 3:16 PM IST

sucide

ಬಳ್ಳಾರಿ: ಗಣಿನಾಡು ಬಳ್ಳಾರಿ-ವಿಜಯನಗರ ಅವಳಿ ಜಿಲ್ಲೆಗಳಲ್ಲಿ ಕಳೆದ ವರ್ಷ ಉತ್ತಮ ಮಳೆಯಾದರೂ, ಬೆಳೆನಷ್ಟ, ಸಾಲಬಾಧೆಯ ಸುಳಿಗೆ ಸಿಲುಕಿದ 29 ರೈತರು ಆತ್ಮಹತ್ಯೆ ಶರಣಾಗಿದ್ದು, ವರ್ಷವಿಡೀ ನೀರಾವರಿ ಸೌಲಭ್ಯವುಳ್ಳ ಕುರುಗೋಡು, ಸಿರುಗುಪ್ಪ ತಾಲೂಕುಗಳಲ್ಲೇ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ವಿಷಾದನೀಯ.

ರೈತರ ಆತ್ಮಹತ್ಯೆ ತಡೆಗಟ್ಟಲು ಕೇಂದ್ರ, ರಾಜ್ಯ ಸರ್ಕಾರಗಳು ಸಾಲಮನ್ನಾ, ಬೆಳೆವಿಮೆ, ಪ್ರೋತ್ಸಾಹಧನ ಯೋಜನೆಗಳನ್ನು ಜಾರಿಗೆ ತಂದರೂ, ರೈತರ ಸಮಸ್ಯೆಗಳು ಬಗೆಹರಿಸುತ್ತಿಲ್ಲ. ಅಕಾಲಿಕ ಮಳೆ, ಕೀಟಗಳು, ವಿವಿಧ ರೋಗಗಳ ಬಾಧೆ, ಸಮರ್ಪಕ ನೀರು, ಬೆಂಬಲ ಬೆಲೆಯ ಕೊರತೆ ಹೀಗೆ ಬೆಳೆ ಕೈಗೆಟುವುದರೊಳಗೆ ಹಲವು ಸಮಸ್ಯೆಗಳು ರೈತರನ್ನು ಕಾಡುತ್ತಿವೆ. ಕಳೆದ ವರ್ಷ ಉತ್ತಮ ಬೆಲೆ ನಿರೀಕ್ಷೆಯಿಂದ ಮೆಣಸಿನಕಾಯಿ, ಭತ್ತ ನಾಟಿ ಮಾಡಿದ್ದ ಬಳ್ಳಾರಿ, ವಿಜಯನಗರ ಅವಳಿ ಜಿಲ್ಲೆಗಳ ರೈತರು ಅಕಾಲಿಕ ಮಳೆಯಿಂದಾಗಿ ನಷ್ಟಕ್ಕೀಡಾಗಿದ್ದಾರೆ. ಇದರಿಂದ ಎದುರಾಗುವ ಸಾಲಬಾಧೆಯಿಂದ ಕಳೆದ ಒಂದು ವರ್ಷದಲ್ಲಿ ಬಳ್ಳಾರಿ ಜಿಲ್ಲೆ 19, ವಿಜಯನಗರ ಜಿಲ್ಲೆ 10 ಸೇರಿ ಒಟ್ಟು 29 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಎಲ್ಲರಿಗೂ ಪರಿಹಾರ

ಬಳ್ಳಾರಿ ತಾಲೂಕು 2, ಕುರುಗೋಡು 6, ಸಿರುಗುಪ್ಪ 10, ಸಂಡೂರು 1, ವಿಜಯನಗರ ಜಿಲ್ಲೆಯಲ್ಲಿ ಹೊಸಪೇಟೆ 1, ಕೊಟ್ಟೂರು 2, ಹ.ಬೊ.ಹಳ್ಳಿ 1, ಹಡಗಲಿ 1, ಹರಪನಹಳ್ಳಿ 5 ಸೇರಿ ಅವಳಿ ಜಿಲ್ಲೆಗಳಲ್ಲಿ ಒಟ್ಟು 19 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಎಸಿ ಸಮಿತಿ ಪರಿಶೀಲಿಸಿದ ಅನುಮೋದನೆ ನೀಡಿದ ಈ ಎಲ್ಲ ಕುಟುಂಬಗಳಿಗೂ ತಲಾ 5 ಲಕ್ಷ ರೂ.ಗಳ ಪರಿಹಾರ ವಿತರಿಸಲಾಗಿದೆ ಎಂದು ಕೃಷಿ ಇಲಾಖೆಯ ಅಂಕಿ-ಅಂಶಗಳು ಸ್ಪಷ್ಟಪಡಿಸಿವೆ.

ಮೆಣಸಿನಕಾಯಿ, ಭತ್ತದ ರೈತರೇ ಹೆಚ್ಚು

ಬಳ್ಳಾರಿ-ವಿಜಯನಗರ ಅವಳಿ ಜಿಲ್ಲೆಗಳಲ್ಲಿ ಮೆಣಸಿನಕಾಯಿ, ಭತ್ತ ನಾಟಿ ಮಾಡಿದ್ದ ರೈತರೇ ಹೆಚ್ಚಿನ ಸಂಖ್ಯೆಯಲ್ಲಿ ಆತ್ಮಹತ್ಯೆಗೆ ಶರಣರಾಗಿದ್ದಾರೆ. ಅದರಲ್ಲೂ ವರ್ಷವಿಡೀ ನೀರಾವರಿ ಸೌಲಭ್ಯವುಳ್ಳ ಕುರುಗೋಡು, ಸಿರುಗುಪ್ಪಗಳಲ್ಲೇ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ವಿಷಾದನೀಯ ಸಂಗತಿ. ಹಾಗೆ ನೋಡಿದರೆ ಕಳೆದ ವರ್ಷ ಕಂಪ್ಲಿ, ಮಳೆಯನ್ನೇ ಆಶ್ರಯಿಸಿರುವ ಕೂಡ್ಲಿಗಿ ತಾಲೂಕಗಳಲ್ಲಿ ಒಬ್ಬೇ ಒಬ್ಬ ರೈತರು ಆತ್ಮಹತ್ಯೆಗೆ ಶರಣಾಗಿಲ್ಲ ಎಂದು ಕೃಷಿ ಇಲಾಖೆಯ ಹೆಸರೇಳಲಿಚ್ಚಿಸದ ಅಧಿಕಾರಿಗಳು ತಿಳಿಸಿದ್ದಾರೆ. ಅವಳಿ ಜಿಲ್ಲೆಗಳಲ್ಲಿ ಆತ್ಮಹತ್ಯೆಗೆ ಶರಣರಾದ ರೈತರ ಪೈಕಿ 14 ರೈತರು ಮೆಣಸಿನಕಾಯಿ, ಭತ್ತ, 5 ಜನ ಮೆಕ್ಕೆಜೋಳ, 2 ಜನ ಮೆಣಸಿನಕಾಯಿ, ಒಬ್ಬರು ಟಮೋಟಾ ಸೇರಿದಂತೆ ಇನ್ನುಳಿದವರು ವಿವಿಧ ಬೆಳೆಗಳನ್ನು ನಾಟಿ ಮಾಡಿದ್ದು, ನಷ್ಟಕ್ಕೀಡಾಗಿ ಸಂಕಷ್ಟದ ಸುಳಿಗೆ ಸಿಲುಕಿದ್ದರು.

ಸಿಎಂ ಪರಿಹಾರ ನಿಧಿಗೆ ಶಿಫಾರಸ್ಸು

ಜಿಲ್ಲೆಯ ಕುರುಗೋಡು ತಾಲೂಕು ಬಾದನಹಟ್ಟಿಯಲ್ಲಿ ರೈತರೊಬ್ಬರು ಐದು ಎಕರೆ ಗುತ್ತಿಗೆ ಮಾಡಿ ಮೆಣಸಿನಕಾಯಿ ಬೆಳೆ ನಾಟಿ ಮಾಡಿ ನಷ್ಟಕ್ಕೀಡಾಗಿ ಆತ್ಮಹತ್ಯೆಗೆ ಶರಣಾಗಿದ್ದರು. ಆದರೆ, ಅವರು ಬೆಳೆ ನಾಟಿ ಮಾಡಿದ್ದ ಹೊಲಗಳು ಅವರ ಅಥವಾ ಸಂಬಂಧಿಕರ ಹೆಸರಲ್ಲಿ ಇಲ್ಲದ ಕಾರಣ, ಮಾನವೀಯ ದೃಷ್ಟಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ಕೊಡಿಸಲು ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಮೃತರಿಗೆ ಇಬ್ಬರು ಮಕ್ಕಳು ಇರುವುದರಿಂದ ಪತ್ನಿಗೆ ಅಂಗನವಾಡಿಗಳಲ್ಲಿ ಉದ್ಯೋಗ ಕಲ್ಪಿಸುವುದಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ. ಪರಿಹಾರ ಇನ್ನು ಬಂದಿಲ್ಲ. ಬಂದಾಕ್ಷಣ ವಿತರಿಸಲಾಗುವುದು ಎಂದು ಕೃಷಿ ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಬಳ್ಳಾರಿ ಜಿಲ್ಲೆಯಲ್ಲಿ ಈವರೆಗೆ ಆಗಿರುವ ರೈತರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಎಲ್ಲ ಕುಟುಂಬಗಳಿಗೂ ಪರಿಹಾರ ವಿತರಿಸಲಾಗಿದೆ. ಒಂದೆರಡು ಕುಟುಂಬಗಳಿಗೆ ನೀಡಬೇಕಾಗಿದೆ. ಗುತ್ತಿಗೆ ಮಾಡಿದ ಹೊಲಗಳು ಕನಿಷ್ಟ ರೈತರ ಸಂಬಂಧಿಕರ ಹೆಸರಲ್ಲಾದರೂ ಇರಬೇಕು. ಸರ್ಕಾರದ ಮಾರ್ಗಸೂಚಿಯಂತೆ ಪರಿಹಾರ ವಿತರಿಸಲಾಗುತ್ತಿದೆ. ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಮುಖ್ಯಮಂತ್ರಿ ಪರಿಹಾರ ನಿಧಿಗೆ ಪತ್ರ ಬರೆದಿದ್ದಾರೆ. ಮಲ್ಲಿಕಾರ್ಜುನ, ಜಂಟಿ ಕೃಷಿ ನಿರ್ದೇಶಕರು, ಬಳ್ಳಾರಿ.

-ವೆಂಕೋಬಿ ಸಂಗನಕಲ್ಲು

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.