ಹಳೇ ಗ್ರಾಪಂ ಕಟ್ಟಡದಲ್ಲಿಯೇ ಗ್ರಂಥಾಲಯ
Team Udayavani, Jan 21, 2020, 2:53 PM IST
ಸಿರುಗುಪ್ಪ: ತಾಲೂಕಿನ ಉಪ್ಪಾರಹೊಸಳ್ಳಿ ಗ್ರಾಮದಲ್ಲಿ 5 ವರ್ಷದ ಹಿಂದೆ ಅಗಸಿ ಹತ್ತಿರ ಗ್ರಂಥಾಲಯ ಕಟ್ಟಡದ ಕಾಮಗಾರಿಗೆ ಚಾಲನೆ ನೀಡಿ ಒಂದೂವರೆ ವರ್ಷದಲ್ಲಿ ಕಟ್ಟಡ ಕಾಮಗಾರಿಯನ್ನು ಅರ್ಧಂಬರ್ಧ ನಿರ್ಮಾಣ ಮಾಡಲಾಗಿದ್ದು ಇಲ್ಲಿಯವರೆಗೆ ಗ್ರಂಥಾಲಯ ಕಟ್ಟಡದ ಕಾಮಗಾರಿ ಮುಗಿಯದ ಕಾರಣ ಹಳೇ ಗ್ರಾಮ ಪಂಚಾಯಿತಿ ಕಟ್ಟಡದಲ್ಲಿಯೇ ಗ್ರಂಥಾಲಯ ನಡೆಯುತ್ತಿದೆ!
ಹಳೇ ಗ್ರಾಪಂ ಕಟ್ಟಡವು ಹಳೆಯದಾಗಿದ್ದು, ಮಳೆ ಬಂದರೆ ಮೇಲ್ಛಾವಣಿಯಿಂದ ನೀರು ತೊಟ್ಟಿಕ್ಕುತ್ತದೆ. ಇದರಿಂದ ಗ್ರಂಥಾಲಯಕ್ಕೆ ಬರುವ ಓದುಗರಿಗೆ ಅನಾನುಕೂಲವಾಗುತ್ತದೆ ಎನ್ನುವ ಉದ್ದೇಶದಿಂದ ಸುವರ್ಣಗ್ರಾಮ ಯೋಜನೆಯಡಿ ರೂ.2.75ಲಕ್ಷ ವೆಚ್ಚದಲ್ಲಿ ಹೊಸ ಗ್ರಂಥಾಲಯ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಸರ್ಕಾರ ಮುಂದಾಗಿತ್ತು. ಈ ಕಟ್ಟಡದ ನಿರ್ಮಾಣ ಕಾರ್ಯವನ್ನು ಲ್ಯಾಂಡ್ ಆರ್ಮಿಇಲಾಖೆಗೆ ವಹಿಸಲಾಗಿತ್ತು. ಈ ಇಲಾಖೆಯು ಕಟ್ಟಡವನ್ನು ನಿರ್ಮಾಣ ಮಾಡಿದ್ದು ನೆಲಕ್ಕೆ ಬಂಡೆ ಹಾಸುವ ಮತ್ತು ವಿದ್ಯುತ್ ಸಂಪರ್ಕ ಕಲ್ಪಿಸದೇ ಇರುವುದರಿಂದ ಗ್ರಾಮಪಂಚಾಯಿತಿಯು ಈ ಕಟ್ಟಡವನ್ನು ತಮ್ಮ ವಶಕ್ಕೆ ಪಡೆಯಲು ಹಿಂದೇಟು ಹಾಕಿದ್ದು, ಅಪೂರ್ಣಗೊಂಡಿರುವ ಕಾಮಗಾರಿಯನ್ನು ಮುಗಿಸಿಕೊಡುವಂತೆ ಗ್ರಾಪಂ ಅಧಿಕಾರಿಗಳು ಲ್ಯಾಂಡ್ ಆರ್ಮಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಲ್ಯಾಂಡ್ ಆರ್ಮಿ ಇಲಾಖೆ ಅಧಿಕಾರಿಗಳು ಈ ಕಟ್ಟಡದ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸದೇ ಗ್ರಾಪಂಗೆ ವಹಿಸಲು ಮುಂದಾಗಿದ್ದು ಈ ಬಗ್ಗೆ ಗ್ರಾಪಂ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದರೂ ಲ್ಯಾಂಡ್ ಆರ್ಮಿ ಇಲಾಖೆ ತಲೆಕೆಡಿಸಿಕೊಂಡಿಲ್ಲ. ಇದರಿಂದಾಗಿ ಹಳೇ ಕಟ್ಟಡದಲ್ಲಿಯೇ ಗ್ರಂಥಾಲಯ ನಡೆಯುತ್ತಿದೆ.
ರೂ. 2.75ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಿರುವ ಕಟ್ಟಡ ಕಾಮಗಾರಿಯನ್ನು ಮುಗಿಸಬೇಕು. ಕಟ್ಟಡವನ್ನು ಗ್ರಂಥಾಲಯಕ್ಕೆ ಅನುವು ಮಾಡಿಕೊಡಬೇಕೆಂದು ಗ್ರಾಪಂ ಅಧಿಕಾರಿಗಳನ್ನು ಅನೇಕ ಬಾರಿ ಒತ್ತಾಯಿಸಲಾಗಿದೆ. ಆದರೆ ಲ್ಯಾಂಡ್ ಆರ್ಮಿಯವರು ಕಟ್ಟಡದ ಕಾಮಗಾರಿಯನ್ನು ಮಾಡಿದ್ದಾರೆ. ಅವರೇ ಕಾಮಗಾರಿ ಪೂರ್ಣಗೊಳಿಸಬೇಕೆಂದು ಗ್ರಾಪಂ ಅಧಿಕಾರಿಗಳು ಹೇಳುತ್ತಿದ್ದಾರೆ. ಅಧಿಕಾರಿಗಳು ಒಬ್ಬರ ಮೇಲೊಬ್ಬರು ನೆಪ ಹೇಳುತ್ತ ಕಾಲಕಳೆಯುತ್ತಿದ್ದಾರೆ. – ಕೋರಿ ಪಿಡ್ಡಯ್ಯ, ತಾ.ಪಂ. ಸದಸ್ಯ
-ಆರ್.ಬಸವರೆಡ್ಡಿ ಕರೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು
ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು
Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು
Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು
Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು
MUST WATCH
ಹೊಸ ಸೇರ್ಪಡೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ