ಏ.10ರವರೆಗೆ ಎಲ್‌ಎಲ್‌ಸಿ ಕಾಲುವೆಗೆ ನೀರು


Team Udayavani, Mar 27, 2021, 7:36 PM IST

jhgfghnjhg

ಬಳ್ಳಾರಿ: ತುಂಗಭದ್ರಾ ಜಲಾಶಯದಿಂದ ಎಲ್‌ಎಲ್‌ಸಿ ಕಾಲುವೆಗಳಿಗೆ ಏಪ್ರಿಲ್‌ 10ರವರೆಗೆ ನೀರು ಹರಿಸಲು ತುಂಗಭದ್ರಾ ಮಂಡಳಿ ಅಧಿ ಕಾರಿಗಳು ಮೌಖೀಕವಾಗಿ ಒಪ್ಪಿಗೆ ಸೂಚಿಸಿದ್ದಾರೆ ಎಂದು ತುಂಗಭದ್ರಾ ರೈತ ಸಂಘದ ಅಧ್ಯಕ್ಷ ದರೂರು ಪುರುಷೋತ್ತಮ ಗೌಡ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾ.31ರವರೆಗೆ ಬೇಸಿಗೆ ಬೆಳೆಗೆ ಕಾಲುವೆಗಳ ಮುಖಾಂತರ ನೀರು ಬಿಡುವುದಕ್ಕೆ ಈ ಹಿಂದೆ ಐಸಿಸಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ, ಬದಲಾದ ಕಾಲಘಟ್ಟದಲ್ಲಿ ಬೆಳೆಗಳಿಗೆ ಅನುಕೂಲವಾಗುವಂತೆ ಏ.10ರವರೆಗೆ ನೀರು ಬಿಡುವಂತೆ ಅಧಿ ಕಾರಿಗಳಿಗೆ ಮನವಿ ಮಾಡಿಕೊಳ್ಳಲಾಗಿತ್ತು. ರೈತರ ಸಮಸ್ಯೆ ಅರಿತ ಅಧಿಕಾರಿಗಳು ನಮ್ಮ ಮನವಿಗೆ ಸ್ಪಂದಿಸಿ, ಏಪ್ರಿಲ್‌ 10ರವರೆಗೆ ನೀರು ಬಿಡಲು ಮೌಖೀಕವಾಗಿ ಒಪ್ಪಿಗೆ ನೀಡಿದ್ದಾರೆ.

ಅಧಿಕೃ ಆದೇಶ ಪ್ರತಿಯನ್ನು ಸಹಿಗಾಗಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ಸಿಂಗ್‌ ಅವರಿಗೆ ಕಳುಹಿಸಿಕೊಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದರು. ಬಳ್ಳಾರಿ- ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಹಾಲಿ ಇರುವ ಬೆಳೆಗೆ ಇನ್ನೂ ನೀರು ಬೇಕಿದೆ. ಒಂದು ವೇಳೆ ನೀರು ನಿಲ್ಲಿಸಿದರೆ ಈ ಭಾಗದ ರೈತರಿಗೆ ತೀವ್ರ ತೊಂದರೆ ಆಗಲಿದೆ. ಬಿರುಬೇಸಿಗೆ ಬೆಳೆಗಳಿಗೆ ನೀರಿನ ಅಭಾವ ಎದುರಾಗಿ ಬೆಳೆಗಳೆಲ್ಲ ಸಂಪೂರ್ಣವಾಗಿ ಒಣಗಿ ಹೋಗಲಿವೆ. ಹೀಗಾಗಿ ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ಉಸ್ತುವಾರಿ ಸಚಿವ ಆನಂದ ಸಿಂಗ್‌ ಅಲ್ಲದೆ ತುಂಗಭದ್ರಾ ಮಂಡಳಿ ಮತ್ತು ಬೋರ್ಡ್‌ ಅಧಿಕಾರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿ, ಸಮಸ್ಯೆಯನ್ನು ತಿಳಿಸಲಾಗಿತ್ತು ಎಂದ ಅವರು, ಹಾಲಿ ಅಧಿಕಾರಿಗಳು ಏ. 10ರವರೆಗೆ ನೀರು ಬಿಡುವುದಕ್ಕೆ ಮೌಖೀಕ ಒಪ್ಪಿಗೆ ನೀಡಿದ್ದಾರೆ. ಲಿಖೀತ ಒಪ್ಪಿಗೆಯನ್ನು ಕೂಡ ಶೀಘ್ರದಲ್ಲೇ ನೀಡಲಿದ್ದಾರೆ ಎಂದರು.

ಹಾಲಿ ಜಲಾಶಯದಲ್ಲಿ 17 ಟಿಎಂಸಿ ನೀರಿದೆ. ಈ ಪೈಕಿ 2 ಟಿಎಂಸಿ ನೀರು ಡೆಡ್‌ಸ್ಟೋರೇಜ್‌, 1 ಟಿಎಂಸಿ ನೀರು ಆವಿಯಾಗಿ ವಾತಾವರಣ ಸೇರುತ್ತದೆ. ಅಲ್ಲಿಗೆ ಜಲಾಶಯದಲ್ಲಿ ಉಳಿಯುವುದು 13 ಟಿಎಂಸಿ ನೀರು ಮಾತ್ರ. ಇದರಲ್ಲಿ 5.657 ಟಿಎಂಸಿ ಆಂಧ್ರದ ಪಾಲಿದೆ. ಕರ್ನಾಟಕದ ಪಾಲಿಗೆ 7.934 ಟಿಎಂಸಿ ಮಾತ್ರ ಉಳಿಯುತ್ತದೆ ಎಂದು ಅವರು ವಿವರಿಸಿದರು. ಲಭ್ಯ ನೀರಿನಲ್ಲಿ ಬೇಸಿಗೆ ಬೆಳೆ ಸಂರಕ್ಷಿಸಲಾಗುವುದಿಲ್ಲ. ಆದರೆ, ಭದ್ರಾ ಜಲಾಶಯದಿಂದ 1.6 ಟಿಎಂಸಿ ನೀರು ಬರುತ್ತಿದೆ. ಆದರೆ, ಜೊತೆಗೆ ಕೈಗಾರಿಕೆಗಳಿಗೆ ನೀರು ಹರಿಸುವುದನ್ನು ಬಿಡಲು ನಿಲ್ಲಿಸಿದರೆ ಅನುಕೂಲವಾಗುತ್ತದೆ.

ಜಿಂದಾಲ್‌ ಸೇರಿ ನಾನಾ ಕಾರ್ಖಾನೆಗಳಿಗೆ ಪೂರೈಸುವ ನೀರಿನ ಪಾಲು ರೈತರಿಗೆ ನೀಡಿದರೆ ನೀರು ಸಿಗಲಿದೆ. ಜತೆಗೆ ನದಿ ಮೂಲಕ ಆಂಧ್ರಕ್ಕೆ ಕೊಡಲಿರುವ ನೀರಲ್ಲಿ ಅರ್ಧ ಟಿಎಂಸಿಯನ್ನು ಉಳಿಸಿಕೊಳ್ಳುವಂತೆ ತೆಲಂಗಾಣದ ಸರ್ಕಾರವನ್ನು ಮನವೊಲಿಸಿ ಈ ಭಾಗದ ರೈತರಿಗೆ ಅನುಕೂಲ ಆಗುವುದು ಎಂದು ಅವರು ಹೇಳಿದರು. ಸಂಘದ ಮುಖಂಡರಾದ ಗಂಗಾವತಿ ವೀರೇಶ, ಜಾಲಿಹಾಳ್‌ ಶ್ರೀಧರಗೌಡ, ಶ್ರೀಧರಗಡ್ಡೆ ವೀರನಗೌಡ, ಕಂಪ್ಲಿ ಸತ್ಯನಾರಾಯಣ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.