ಜೋರಾಯ್ತು ಗ್ರಾಪಂ ಚುನಾವಣಾ ಕಾವು!

ಆಕಾಂಕ್ಷಿಗಳು ಮುಖಂಡರ ಮನವೊಲಿಕೆಗೆ ಪ್ರಯತ್ನ

Team Udayavani, Dec 14, 2020, 7:01 PM IST

ಜೋರಾಯ್ತು  ಗ್ರಾಪಂ ಚುನಾವಣಾ ಕಾವು!

ಹರಪನಹಳ್ಳಿ: ಚಳಿಗಾಲದ ಸಮಯದಲ್ಲಿ ಗ್ರಾಮ ಪಂಚಾಯ್ತಿಗಳಿಗೆ ಚುನಾವಣೆ ಘೋಷಣೆಯಾಗಿರುವುದರಿಂದ ಹಳ್ಳಿಗಳಲ್ಲಿ ರಾಜಕೀಯ ಚಟುವಟಿಕೆಗಳ ಮೂಲಕ ಪೈಪೋಟಿಕಾವನ್ನುಂಟು ಮಾಡಿದೆ. ಗ್ರಾಮೀಣ ಪ್ರದೇಶದಲ್ಲಿ ರಾಜಕೀಯ ಅಖಾಡ ದಿನದಿಂದ ದಿನಕ್ಕೆ ರಂಗೇರ ತೊಡಗಿದ್ದು, ಗ್ರಾಮಗಳ ಪ್ರತಿ ಓಣಿಗಳಲ್ಲಿಯೂ ಚುನಾವಣೆ ಗುಂಗು ಎದ್ದು ಕಾಣುತ್ತಿದೆ.

ಪ್ರತಿಷ್ಠೆ, ಜಾತಿ, ಸಮುದಾಯದಲ್ಲಿ ಏಳಿಗೆ, ರಾಜಕೀಯ ಬಲಾಬಲಗಳ ನಡುವೆ ಜರುಗುತ್ತಿರುವ ಗ್ರಾಪಂ ಚುನಾವಣೆ ಜೋರಾಗಿದೆ. ಗ್ರಾಮಗಳಲ್ಲಿರುವ ಕಟ್ಟೆ, ದೇವಸ್ಥಾನ, ಮಂದಿರಗಳ ಆವರಣ, ಶಾಲೆ-ಕಾಲೇಜು ಮೈದಾನಗಳು, ಹೋಟೆಲ್‌ಗ‌ಳಲ್ಲಿ ಯಾರು ಯಾರು ಚುನಾವಣೆಗೆ ನಿಲ್ಲುತ್ತಿದ್ದಾರೆ, ಯಾವ ಪಕ್ಷ ಅವರಿಗೆ ಬೆಂಬಲ ಕೊಡುತ್ತಿದೆ, ಅವರ ಹಿಂದೆ ಯಾರಿದ್ದಾರೆ,ಅವರು ಗೆದ್ದರೆ ಅಥವಾ ಸೋತರೆ ಮುಂದೇನು ಹೀಗೆ ಹತ್ತು ಹಲವು ರೀತಿಯಲ್ಲಿ ಚರ್ಚೆಗಳು ಪ್ರಾರಂಭವಾಗಿವೆ.

ತಾಲ್ಲೂಕಿನಲ್ಲಿ ಒಟ್ಟು 37 ಗ್ರಾಮ ಪಂಚಾಯ್ತಿಗಳ ಪೈಕಿ ಅಧಿಕಾರವದಿ ಪೂರ್ಣಗೊಳ್ಳದ ಕಂಚಿಕೇರಿ, ಹಾರಕನಾಳು ಗ್ರಾಪಂ ಹೊರತುಪಡಿಸಿ 35 ಗ್ರಾಪಂಗಳಿಗೆ ಚುನಾವಣೆ ನಡೆಯಲಿದೆ. ಇದರಲ್ಲಿ 7 ಗ್ರಾಪಂಗಳು ಜಗಳೂರು ವಿದಾನಸಭಾಕ್ಷೇತ್ರ ವ್ಯಾಪ್ತಿಗೆ ಒಳಪಟ್ಟಿವೆ. 1,00,062 ಪುರುಷ, 95,002ಮಹಿಳೆಯರು ಸೇರಿ ಒಟ್ಟು 1,95,064 ಮತದಾರರಿದ್ದಾರೆ.256 ಮೂಲ ಮತಗಟ್ಟೆಗಳು ಹಾಗೂ ಹೆಚ್ಚುವರಿ 45 ಸೇರಿಒಟ್ಟು 298 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಒಟ್ಟು 608 ಸದಸ್ಯ ಸ್ಥಾನಗಳಿಗೆ ಫೈಟ್‌ ನಡೆಯಲಿದ್ದು, ಹೀಗಾಗಿ ಚುನಾವಣೆಅಖಾಡಕ್ಕೆ ಪ್ರವೇಶಿಸಲು ಆಕಾಂಕ್ಷಿಗಳು ಮುಖಂಡರಮನವೊಲಿಕೆಗೆ ಪ್ರಯತ್ನ ನಡೆಸುತ್ತಿದ್ದಾರೆ.

ಎರಡನೇ ಹಂತದಲ್ಲಿ ತಾಲ್ಲೂಕಿನಲ್ಲಿ ಚುನಾವಣೆಜರುಗಲಿದ್ದು, ಡಿ.16 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಡಿ.27ರಂದುಮತದಾನ ನಡೆಯಲಿದೆ. ಸದ್ಯದ ಪರಿಸ್ಥಿತಿಯಲ್ಲಿ ಸ್ಪರ್ಧೆಗಳಿಯುವ ಆಕಾಂಕ್ಷಿಗಳು ಜಾತಿ ಪ್ರಮಾಣ ಪತ್ರ, ಕೋರ್ಟ್‌ ಅಫಿಡವಿಟ್‌ ಸೇರಿದಂತೆ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳುತ್ತಿದ್ದರೆ ಮತ್ತೂಂದೆಡೆ ತಾಲೂಕಿನ ವಿವಿಧ ಪಂಚಾಯ್ತಿಗಳಲ್ಲಿ ಇದುವರೆಗೆ ಒಟ್ಟು 78 ನಾಮಪತ್ರಗಳು ಸಲ್ಲಿಕೆಯಾಗಿವೆ.

ಪಂಚಾಯ್ತಿ ಚುನಾವಣೆ ಪ್ರಮುಖವಾಗಿ ಆಡಳಿತ ಪಕ್ಷ ಬಿಜೆಪಿ ಹಾಗೂ ವಿರೋಧ ಪಕ್ಷ ಕಾಂಗ್ರೆಸ್‌ಗೆ ಪ್ರತಿಷ್ಠೆ ಪ್ರಶ್ನೆಯಾಗಿದೆ. ಈಗಾಗಲೇ ಶಾಸಕ ಜಿ. ಕರುಣಾಕರರೆಡ್ಡಿ ಗ್ರಾಪಂ ಚುನಾವಣೆ ಸಂಬಂಧ ಕಾರ್ಯಕರ್ತರ ಸಭೆ ನಡೆಸಿ ಚುನಾವಣೆಗೆ ಸಿದ್ಧತೆ ನಡೆಸಿದ್ದಾರೆ. ಆದರೆ ಒಡೆದ ಮನೆಯಂತಾಗಿರುವ ಕಾಂಗ್ರೆಸ್‌ನಲ್ಲಿ ಬಣ ರಾಜಕಾರಣದಿಂದ ಸೊರಗಿದೆ. ಕೆಪಿಸಿಸಿ ಮಾಜಿ ಅಧ್ಯಕ್ಷ, ಬಳ್ಳಾರಿ ಜಿಲ್ಲೆ ಹಿರಿಯ ನಾಯಕ ಅಲ್ಲಂ ವೀರಭದ್ರಪ್ಪ ಅವರನ್ನು ಹರಪನಹಳ್ಳಿ ಕ್ಷೇತ್ರದ ಗ್ರಾಪಂ ಚುನಾವಣೆ ಉಸ್ತುವಾರಿಯಾನ್ನಾಗಿ ಕೆಪಿಸಿಸಿಯಿಂದ ನೇಮಿಸಲಾಗಿದೆ. ಆದರೆ ಇದುವರೆಗೂಚುನಾವಣೆಗೆ ಸಂಬಂ ಧಿಸಿದಂತೆ ಯಾವುದೇ ಚಟುವಟಿಕೆಗಳು ನಡೆದಿಲ್ಲ.

ಕ್ಷೇತ್ರದಲ್ಲಿ ಜೆಡಿಎಸ್‌ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬುವಂತಾಗಿದ್ದು, ತನ್ನ ಅಸಿತ್ವ ಕಂಡುಕೊಳ್ಳಲುಸಾಕಷ್ಟು ಪ್ರಯತ್ನ ಮಾಡುತ್ತಿದೆ. ಕಳೆದ ವಿಧಾನಸಭಾಚುನಾವಣೆಗೆ ಜೆಡಿಎಸ್‌ನಿಂದ ಸ್ಪರ್ಧೆಗಿಳಿದ್ದ ಅರಸೀಕೆರೆ ಎನ್‌. ಕೊಟ್ರೇಶ್‌ ಅವರು ಪಕ್ಷದ ಸಂಘಟನೆ ವಿಷಯದಲ್ಲಿ ತಟಸ್ಥರಾಗಿರುವುದರಿಂದ ಪಕ್ಷದ ಚೇತರಿಕೆ ಕಂಡು ಬರುತ್ತಿಲ್ಲ .

ಈಗಾಗಲೇ ಶಾಸಕರ ನೇತೃತ್ವದಲ್ಲಿ ಸಭೆ ನಡೆಸಿ ಪ್ರತಿಯೊಂದು ಗ್ರಾಪಂಗೆ ಪ್ರಮುಖರು ಮತ್ತು ಸಹ ಪ್ರಮುಖರು ಎಂದು ನೇಮಕ ಮಾಡಿ ಅವರ ಮೇಲೆ ಉಸ್ತುವಾರಿ ನೇಮಕ ಮಾಡಿ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನಿರ್ದೇಶನ ನೀಡಲಾಗಿದೆ. ಬಿಜೆಪಿಯ ಜನಪ್ರಿಯ ಕೆಲಸಗಳನ್ನು ಮೆಚ್ಚಿಕೊಂಡಿರುವ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಬೆಂಬಲಿಸಲಿದ್ದಾರೆ.  –ಸತ್ತೂರು ಹಾಲೇಶ್‌, ಬಿಜೆಪಿ ತಾಲ್ಲೂಕಾಧ್ಯಕ್ಷ

ಕಾಂಗ್ರೆಸ್‌ನಲ್ಲಿ ಎಷ್ಟೇ ಬಣಗಳಿದ್ದರೂ ಅವರೆಲ್ಲರೂ ಕಾಂಗ್ರೆಸ್‌ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲಿದ್ದಾರೆ. ನೇಮಕವಾಗಿರುವ ಉಸ್ತುವಾರಿ ನೇತೃತ್ವದಲ್ಲಿ ಶೀಘ್ರವೇ ಸಭೆ ನಡೆಸಿ ಗ್ರಾಪಂಗಳ ಆಯಾ ಮುಖಂಡರಿಗೆ ಜವಾಬ್ದಾರಿ ನೀಡುತ್ತೇವೆ. ಆಡಳಿತಪಕ್ಷದ ದುರಾಡಳಿತದಿಂದ ಬೇಸತ್ತಿರುವ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಮುನ್ನಡಿ ಬರೆಯಲಿದ್ದಾರೆ. ಬೇಲೂರು ಅಂಜಪ್ಪ, ಕಾಂಗ್ರೆಸ್‌ ಬ್ಲಾಕ್‌ ಅಧ್ಯಕ್ಷ

ಪಕ್ಷ ಸಂಘಟನೆ ವಿಷಯದಲ್ಲಿ ಕ್ಷೇತ್ರದಲ್ಲಿ ಜೆಡಿಎಸ್‌ ಹಿಂದೆ ಬಿದ್ದಿರುವುದು ನಿಜ. ಕೆಲವುಪಂಚಾಯ್ತಿಗಳಲ್ಲಿ ಮಾತ್ರ ನಮ್ಮವರು ನಾಮಪತ್ರ ಸಲ್ಲಿಕೆಮಾಡುತ್ತಿದ್ದಾರೆ. ಅವರಿಗೆ ಬೆಂಬಲ ನೀಡುತ್ತೇವೆ. ಈ ಸಂಬಂಧ ಯಾವುದೇ ಸಭೆ ಸಮಾರಂಭ ಮಾಡುವ ಬದಲಾಗಿ ದೂರವಾಣಿ ಮೂಲಕ ಅವರಿಗೆ ನೈತಿಕ ಬಲ ತುಂಬ ಕೆಲಸ ಮಾಡುತ್ತೇವೆ. – ಸಾಸ್ವಿಹಳ್ಳಿ ಚನ್ನಬಸವನಗೌಡ, ಜೆಡಿಎಸ್‌ ತಾಲ್ಲೂಧ್ಯಕ್ಷ

 

ಎಸ್‌.ಎನ್‌. ಕುಮಾರ್‌ ಪುಣಬಗಟ್ಟಿ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

bellary

Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು

ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.