ಮತಕ್ಕಾಗಿ ಮಾಂಸ, ಸಿಹಿ ತಿನಿಸು ವಿತರಣೆ!

ರಂಗೇರಿದ ಗ್ರಾಮ ಪಂಚಾಯತ್‌ ಚುನಾವಣೆ,ಮತದಾರರ ಮನವೊಲಿಕೆಗೆ ಅಭ್ಯರ್ಥಿಗಳ ಕಸರತು

Team Udayavani, Dec 20, 2020, 4:51 PM IST

ಮತಕ್ಕಾಗಿ ಮಾಂಸ, ಸಿಹಿ ತಿನಿಸು ವಿತರಣೆ!

ಬಳ್ಳಾರಿ: ಜಿಲ್ಲೆಯ ಗ್ರಾಪಂ ಸ್ಥಾನವೊಂದಕ್ಕೆ ಸ್ಪರ್ಧಿಸಿರುವ ಅಭ್ಯರ್ಥಿ ತಮ್ಮ ಚಿಹ್ನೆಯಾದ ಸರ ನೀಡಿ ಮತಯಾಚನೆಗಿಳಿದಿರುವುದು

ಬಳ್ಳಾರಿ: ಮೊದಲನೇ ಹಂತದ ಗ್ರಾಮ ಪಂಚಾಯಿತಿ ಚುನಾವಣಾ ಕಣ ದಿನೇದಿನೆ ರಂಗೇರಿದ್ದು, ಮತದಾರರ ಮನವೊಲಿಸುವಲ್ಲಿ ನಿರತರಾಗಿರುವ ಅಭ್ಯರ್ಥಿಗಳು,ಮಾಂಸಾಹಾರಿಗಳಿಗೆ ಕೋಳಿ ಮಾಂಸ, ಸಸ್ಯಹಾರಿಗಳಿಗೆ ಸಿಹಿ ತಿನಿಸಿನ ಬಾಕ್ಸ್‌ಗಳನ್ನು ನೀಡುವಲ್ಲಿ ನಿರತರಾಗಿದ್ದಾರೆ. ಕೆಲ ಗ್ರಾಮಗಳಲ್ಲಿ ಮತದಾರರನ್ನು ಆಧರಿಸಿ ಸಾವಿರಾರುರೂ.ಗಳನ್ನು ಮುಂಗಡವಾಗಿ ನೀಡುವ ಮತದಾರರನ್ನುಕಾಯ್ದಿರಿಸಿಕೊಳ್ಳುವ ಪ್ರಯತ್ನಗಳು ತೆರೆಮರೆಯಲ್ಲಿ ನಡೆಯುತ್ತಿವೆ.

ಜಿಲ್ಲೆಯಲ್ಲಿ ಮೊದಲನೇ ಹಂತದಲ್ಲಿ ಬಳ್ಳಾರಿ, ಕುರುಗೋಡು, ಕಂಪ್ಲಿ, ಸಿರುಗುಪ್ಪ, ಹೊಸಪೇಟೆತಾಲೂಕುಗಳ 86 ಗ್ರಾಪಂಗಳಿಗೆ ಡಿ. 22ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು, ದಿನೇದಿನೆ ಬಿರುಸುಗೊಳ್ಳುತ್ತಿರುವ ಚುನಾವನಾ ಕಾವು ರಂಗೇರಿದೆ. ಮತದಾನಕ್ಕೆ ಇನ್ನೆರಡು ದಿನಗಳು ಮಾತ್ರ ಬಾಕಿಉಳಿದಿದ್ದು, ಈ ನಡುವೆ ಮತದಾರರನ್ನು ಸೆಳೆಯುವ, ಆಮಿಷವೊಡ್ಡಿ ಮನವೊಲಿಸುವ, ಮನೆಗಳಿಗೆ ಸಸ್ಯ ಮತ್ತಮಾಂಸಾಹಾರವನ್ನು ಪೂರೈಸುವ, ಮದ್ಯ ವಿತರಿಸುವ,  ಹಣ ನೀಡುವ ಎಲ್ಲ ರೀತಿಯ ತಂತ್ರಗಳು ತೆರೆಮರೆಯಲ್ಲಿ ಸದ್ದಿಲ್ಲದೇ ನಡೆಯುತ್ತಿವೆ. ಸುಗ್ಗಿಯ ಕಾಲವಾದ ಈಗ್ರಾಮೀಣ ಭಾಗದಲ್ಲಿ ಜನ ಹೆಚ್ಚಿರುವುದೇ ಹೊಲಗಳಲ್ಲಿ.

ಒಂದೇ ಕಡೆ ಮನೆಯಲ್ಲಿಸಿಗಬೇಕಾದರೆ ಬೆಳಗ್ಗೆ 8 ಗಂಟೆಯ ಒಳಗೆ ಇಲ್ಲವೇ ಸಂಜೆ 6 ಗಂಟೆಯ ನಂತರ ಅವರವರ ಮನೆಯಲ್ಲಿ ಭೇಟಿ ಮಾಡಬೇಕು. ಇದೇಕಾರಣಕ್ಕೆ ಅಭ್ಯರ್ಥಿಗಳು ಮತ್ತವರ ಬೆಂಬಲಿಗರು ಬೆಳಗ್ಗೆ5 ಗಂಟೆಯಿಂದಲೇ ಮತಬೇಟೆ ಆರಂಭಿಸುತ್ತಿದ್ದಾರೆ. ಇನ್ನು ಸಂಜೆ 6 ಗಂಟೆ ನಂತರ ಹೋಟೆಲ್‌, ಗುಡಿ, ಪಂಚಾಯತ್‌ ಕಟ್ಟೆ, ಅರಳಿಮರದ ಕಟ್ಟೆ, ಮಸೀದಿ ಗುಡಿ ಹೀಗೆ ಎಲ್ಲೆಲ್ಲಿ ಜನರು ಕುಳಿತು ಮಾತನಾಡುತ್ತಾರೋಅಲ್ಲಿಗೇ ಹಾಜರಾಗುವ ಅಭ್ಯರ್ಥಿಗಳು, ಮಾವಅಣ್ಣ, ಅಳಿಯ, ಚಿಕ್ಕಪ್ಪ, ದೊಡ್ಡಪ್ಪ ಎಂದು ಅತ್ಯಂತ ಚಿರಪರಿಚಿತರಂತೆ ಮಾತನಾಡಿ ಇದೊಂದು ಬಾರಿ ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡುತ್ತಿದ್ದಾರೆ. ಈ ಎಲ್ಲ ತಂತ್ರಗಾರಿಕೆಗಳು ಅಭ್ಯರ್ಥಿಗಳಿಗೆ ಎಷ್ಟರ ಮಟ್ಟಿಗೆ ಸಹಕಾರಿಯಾಗಿವೆ ಎಂಬುದು ಮತ ಎಣಿಕೆ ಬಳಿಕವೇ ಸ್ಪಷ್ಟವಾಗಲಿದೆ.

ಮಾಂಸಾಹಾರ ವಿತರಣೆ: ಮತದಾರರ ಮನವೊಲಿಸುವಲ್ಲಿ ನಿರತರಾಗಿರುವ ಅಭ್ಯರ್ಥಿಗಳು, ಮಾಂಸಾಹಾರ ಸೇವಿಸುವವವರಿಗೆ ಕೋಳಿ ಮಾಂಸವನ್ನು ನೀಡುತ್ತಿದ್ದಾರೆ. ಸಂಜೆಯಾಗುತ್ತಿದ್ದಂತೆ ಇಡೀ ಊರಲ್ಲಿ ಮಸಾಲೆ ವಾಸನೆ ಘಮಘಮಿಸುತ್ತದೆ. ಈ ಹಿನ್ನೆಲೆಯಲ್ಲಿಮಾಂಸದ ಅಂಗಡಿ, ಮದ್ಯದ ಅಂಗಡಿಗಳು ಸದ್ಯ ಅತೀಜನಸಂದಣಿ ಇರುವ ಜಾಗಗಳಾಗಿ ಮಾರ್ಪಟ್ಟಿವೆ. ಮಾಂಸದ ವ್ಯಾಪಾರಿ ಇದುವರಗೆ ಮಾಡದಷ್ಟು ಕೆಲಸವನ್ನು ಈಗ ಪ್ರತಿನಿತ್ಯ ಮಾಡುವಂತಾಗಿದೆ. ಎಲ್ಲರೂ ಒಂದೇ ದಿನ ಚಿಕನ್‌ ನೀಡಿದರೆ ಮತದಾರರು ಬೇಡ ಎನ್ನಬಹುದೆಂಬ ಕಾರಣಕ್ಕೆ ಒಂದೊಂದು ದಿನ ಒಬ್ಬೊಬ್ಬ ಅಭ್ಯರ್ಥಿ ಚಿಕನ್‌ ಹಂಚುತ್ತಿದ್ದಾರೆ ಎನ್ನಲಾಗುತ್ತಿದೆ. ಇದೇ ಕಾರಣಕ್ಕೆ ಚಿಕನ್‌ ಸ್ಟಾಲ್‌ ದಿನವಿಡೀ ಕಾರ್ಯ ನಿರ್ವಹಿಸುವಂತೆ ಆಗಿದೆ.

ಮನೆಯಲ್ಲಿ ತಿನ್ನದವರಿಗೆ ಹೊರಗೆ: ಮನೆಯಲ್ಲಿ ಮಾಂಸ ಸೇವನೆ ಮಾಡದವರಿಗೆ ಹೊರಗಡೆ ವ್ಯವಸ್ಥೆ ಮಾಡುವ ಕಾರ್ಯವೂ ಸಹ ಕಂಡುಬರುತ್ತಿದೆ. ಶುದ್ಧ ಸಸ್ಯಹಾರಿಗಳ ಮನೆಗಳಲ್ಲಿನ ಮತದಾರರಿಗೆ ಹೋಟೆಲ್‌, ಊರಹೊರಗಿನ ಹೊಲ, ತೋಟದ ಮನೆ, ಡಾಬಾಗಳಲ್ಲಿ ಮಾಂಸದೂಟದ ಔತಣಗಳನ್ನು ಏರ್ಪಡಿಸಲಾಗುತ್ತಿದೆ. ಅಭ್ಯರ್ಥಿಗಳ ಪರ ಇರುವ ಗುಂಪುಗಳು ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಿವೆ ಎಂದು ತಿಳಿದು ಬಂದಿದೆ. ಮನೆಗೆ ಇಂತಿಷ್ಟು ಹಣ: ಇನ್ನು ಕೆಲವೊಂದು ಗ್ರಾಮಗಳಲ್ಲಿ ಚುನಾವಣೆಯನ್ನು ತೀರಾ ಪ್ರತಿಷ್ಠೆಯಾಗಿ ಸ್ವೀಕರಿಸಿರುವವರು ಗೆಲ್ಲಲೇಬೇಕೆಂದು ಪಣತೊಟ್ಟಿರುವ ಅಭ್ಯರ್ಥಿಗಳು, ಯಾವುದೇ ವಸ್ತುಗಳನ್ನು ನೀಡದೇ ನೇರವಾಗಿ ಹಣ ನೀಡುವ ಮೂಲಕ ಮತದಾರರ ಮನವೊಲಿಕೆಯಲ್ಲಿ ತೊಡಗಿದ್ದಾರೆ. ಮನೆಗಳಲ್ಲಿನ ಮತದಾರರನ್ನು ಆಧರಿಸಿ, ಸಾವಿರಾರು ರೂ.ಗಳನ್ನು ಈಗಿನಿಂದಲೇ ಹಂಚಿಕೆ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ.

ಈ ಮೂಲಕ ಮತದಾರರನ್ನು ಈಗಿನಿಂದಲೇ ಮನವೊಲಿಸುವ ಪ್ರಕ್ರಿಯೆಗಳು ನಿರಂತರವಾಗಿ ನಡೆಯುತ್ತಿವೆ.

 

ವೆಂಕೋಬಿ ಸಂಗನಕಲ್ಲು

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.