ಶುದ್ಧ ನೀರಿಗಾಗಿ ಗ್ರಾಪಂ ಕಚೇರಿಗೆ ಬೀಗ
Team Udayavani, Nov 19, 2019, 2:59 PM IST
ಹರಪನಹಳ್ಳಿ: ತಾಲೂಕಿನ ಅರಸೀಕೆರೆ ಗ್ರಾಮದ 1ನೇ ವಾರ್ಡಿನಲ್ಲಿ ಕುಡಿಯುವ ನೀರು ಹಾಗೂ ಬಳಕೆ ಮಾಡುವ ನೀರು ಯೋಗ್ಯವಾಗಿಲ್ಲ. ಈ ನೀರನ್ನು ಕುಡಿದರೆ ಚರ್ಮ ರೋಗ, ಮೈತುರಿಕೆ, ಮಕ್ಕಳಿಗೂ ಸಹ ಕಾಯಿಲೆಗಳು ಬಂದಿವೆ ಎಂದು ಆರೋಪಿಸಿ ಗ್ರಾಮ ಪಂಚಾಯತಿ ಕಚೇರಿಗೆ ಬೀಗ ಜಡಿದು ಸೋಮವಾರ ಪ್ರತಿಭಟನೆ ನಡೆಸಿದರು.
ವೈದ್ಯರ ಬಳಿ ಹೋದರೆ ಈ ಸಮಸ್ಸೆಗಳು ನೀವು ಬಳಸುವ ನೀರಿನಿಂದ ಬಂದಿದೆ. ಅಂಥ ನೀರನ್ನು ಬಳಸಿದರೆ ಆರೋಗ್ಯಕ್ಕೆ ಗಂಭೀರ ಕಾಯಿಲೆಗಳು ಬರುತ್ತವೆ ಎಂದು ಹೇಳುತ್ತಿದ್ದಾರೆಂದು ಆಕ್ರೋಶವ್ಯಕ್ತಪಡಿಸಿದ 1ನೇ ವಾರ್ಡಿನ ಮಹಿಳೆಯರು, ಪುರುಷರುಮಾತ್ರವಲ್ಲದೇ ವಯಸ್ಸಾದ ಅಜ್ಜಿಂದಿರು ಗ್ರಾಮ ಪಂಚಾಯಿತಿಗೆ ಖಾಲಿ ಕೊಡಗಳೊಂದಿಗೆ ಬಂದು ಪ್ರತಿಭಟಿಸಿ ಗ್ರಾಮ ಪಂಚಾಯಿತಿ ವಿರುದ್ಧ ಧಿಕ್ಕಾರ ಕೂಗಿದರು. ನಮ್ಮ ವಾರ್ಡಿನಲ್ಲಿ ಬಹಳ ದಿನಗಳಿಂದ ಕಲುಷಿತ ನೀರು ಬಳಸಿದ್ದರಿಂದ ಅನೇಕ ಕಾಯಿಲೆಗಳು ಬಂದಿವೆ.
ಎಷ್ಟು ಬಾರಿ ಪಂಚಾಯತಿಗೆ, ಮೇಲಧಿಕಾರಿಗಳ ಗಮನಕ್ಕೆ ತಂದರೂ ಸಹ ನೀರಿನ ಸಮಸ್ಯೆ ಬಗೆಹರಿದಿಲ್ಲ. ಕಾರಣ ಗ್ರಾಮ ಪಂಚಾಯಿತಿಗೆ ನಮ್ಮ ವಾರ್ಡಿನ ಸದಸ್ಯರು ಬಂದು ಪ್ರತಿಭಟನೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಮಾಡಲಾಗುವುದು. ಎಂದು ವಾರ್ಡಿನ ಮುಖಂಡ ಐನಳ್ಳಿ ಸಲಾಂಸಾಬ್ ಎಚ್ಚರಿಕೆ ನೀಡಿದರು.
ಶುದ್ಧ ನೀರು ಸರಬರಾಜು ಮಾಡುವವವರೆಗೂ ಪ್ರತಿಭಟನೆ ಕೂರುತ್ತೇವೆ, ಜಾಗ ಬಿಟ್ಟು ಏಳುವುದಿಲ್ಲ ಪಣತೊಟ್ಟರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹಮ್ಮದ್ ಹುಸೇನ್ ಅವರು ಪ್ರತಿಭಟನಾಕಾರರ ಮನವಿ ಸ್ವೀಕರಿಸಿ ಕೂಡಲೇ 2-3 ದಿನಗಳಲ್ಲಿ ನೀರಿನ ಸಮಸ್ಯೆಯನ್ನು ಬಗೆಹರಿಸಿಕೊಡುತ್ತೇವೆಂದು ಭರವಸೆ ನೀಡಿದ ನಂತರ ಪ್ರತಿಭಟನೆ ಅಂತ್ಯಗೊಂಡಿತು. ವಾರ್ಡಿನ ಅಜೀಮ್ ಸಾಹೇಬ್, ರಹಮತ್ವುಲ್ಲ, ಸುಭಾನ್ ಸಾಬ್, ಶಿವಾಜಿ, ಅಬ್ದುಲ್, ಮುನಾಫ್ ಸಾಬ್, ಹಿಮಾಮ್ ಹುಸೇನ್, ಕೆಂಚಮ್ಮ, ಪರ್ವಿನ್ ಬಾನ್, ರೇಣುಕಮ್ಮ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
MUST WATCH
ಹೊಸ ಸೇರ್ಪಡೆ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ