ಲೋಕ ಅದಾಲತ್: 48 ಪ್ರಕರಣ ಇತ್ಯರ್ಥ
Team Udayavani, Sep 20, 2020, 6:37 PM IST
ಹರಪನಹಳ್ಳಿ: ಪಟ್ಟಣದ ಜೆಎಂಎಫ್ಸಿ ನ್ಯಾಯಾಲಯದ ಹಿರಿಯ ಮತ್ತು ಕಿರಿಯ ನ್ಯಾಯಾಧೀಶರ ನೇತೃತ್ವದಲ್ಲಿ ಶನಿವಾರ ಜರುಗಿದ ಬೃಹತ್ ಲೋಕ ಅದಾಲತ್ನಲ್ಲಿ ರಾಜಿ ಸಂಧಾನ ಮೂಲಕ ಒಟ್ಟು 48 ಪ್ರಕರಣಗಳು ಇತ್ಯರ್ಥಗೊಳಿಸಿ, ರಾಜಿ ಪ್ರಕರಣದಲ್ಲಿ ಒಟ್ಟು ಮೊತ್ತ 42.8 ಲಕ್ಷರೂ ವಸೂಲಿ ಮಾಡಿ ಪಾವತಿಸಲಾಗಿದೆ ಎಂದು ಹಿರಿಯ ನ್ಯಾಯಾಧಿಧೀಶರಾದ ಉಂಡಿ ಮಂಜುಳಾ ಶಿವಪ್ಪ ಮತ್ತು ಬಿ.ಜಿ. ಶೋಭಾ ತಿಳಿಸಿದರು.
ಜೆಎಂಎಫ್ಸಿ ನ್ಯಾಯಾಲಯದ ಹಿರಿಯ ಶ್ರೇಣಿ ನ್ಯಾಯಾಲಯದಲ್ಲಿ ಒಟ್ಟು 20 ಪ್ರಕರಣಗಳು ಇತ್ಯರ್ಥಗೊಂಡಿದ್ದು, ರಾಜಿ ಸಂಧಾನದ ಮೂಲಕ 19.4 ಲಕ್ಷರೂ ಸಂದಾಯ ಮಾಡಲಾಗಿದೆ. ಹರಪನಹಳ್ಳಿ ಪಟ್ಟಣದ ಎಸ್ಬಿಐ ಬ್ಯಾಂಕ್ 7 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ 7.73 ಲಕ್ಷರೂಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ ಎಂದರು.
ಕಿರಿಯ ಶ್ರೇಣಿ ನ್ಯಾಯಾಲಯದಲ್ಲಿ ಒಟ್ಟು 28 ಪ್ರಕರಣಗಳು ಇತ್ಯರ್ಥವಾಗಿದ್ದು, ಸಿವಿಲ್ ಪ್ರಕರಣದಲ್ಲಿ 8 ಪ್ರಕರಣಗಳಲ್ಲಿ 9.13 ಲಕ್ಷ ರೂ. ರಾಜಿ ಸಂಧಾನದ ಮೂಲಕ ವಸೂಲಿ ಮಾಡಲಾಗಿದೆ. ಚೆಕ್ ಬೋನಸ್ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಪ್ರಕರಣಗಳ ಪೈಕಿ 6.82 ಲಕ್ಷ ರೂಗಳನ್ನು ಇತ್ಯರ್ಥ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ಚೆಂದ್ರೇಗೌಡ, ಹಿರಿಯ ವಕೀಲರಾದ ಕೆ. ಜಗದೀಶ್, ಕೃಷ್ಣಮೂರ್ತಿ, ರಾಮನಗೌಡ, ಕೆ.ಗೋಣಿಬಸಪ್ಪ, ರವಿಶಂಕರ್, ಜಿ.ಎಸ್ .ತಿಪ್ಪೇಶ್, ಆನಂದ, ಬಿ.ಆರ್.ಜಿ. ಮಂಜ್ಯಾನಾಯ್ಕ, ಸಿ.ಹನುಮಂತಪ್ಪ, ನಂದೀಶ್, ಹಾಲೇಶ್, ಕೋಟ್ರೇಶ್, ಉಮೇಶ್, ರವಿಕುಮಾರ್, ಪ್ರಕಾಶ್, ಸಣ್ಣನಿಂಗನಗೌಡ ಬಸವರಾಜ್ ಮಂಜುನಾಥ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ