ಹುದ್ದಲಿಯಲ್ಲಿ 7 ದಿನ ವಾಸವಿದ್ದ ಮಹಾತ್ಮ ಗಾಂಧೀಜಿ


Team Udayavani, Aug 10, 2018, 3:03 PM IST

bell-1.jpg

ಬಳ್ಳಾರಿ: ರಾಷ್ಟ್ರಪತಿ ಮಹಾತ್ಮಾಗಾಂಧಿಜಿಯವರು ಹುದ್ದಲಿ ಗ್ರಾಮಕ್ಕೆ ಆಗಮಿಸಿ 7 ದಿನಗಳ ಕಾಲ ನಮ್ಮೊಂದಿಗೆ ವಾಸವಿರುವುದು ಅವಿಸ್ಮರಣೀಯವಾದ ಸವಿನೆನಪು ಎಂದು ಹಿರಿಯ ಸ್ವಾತಂತ್ರ್ಯಾ ಹೋರಾಟಗಾರ ಗಂಗಪ್ಪ ಮುದ್ದಪ್ಪ ಮಾಳಗಿ ಸ್ಮರಿಸಿದರು.

ನಗರದ ಗಾಂಧಿ ಭವನದಲ್ಲಿ ಮಲ್ಲಸಜ್ಜನ ವ್ಯಾಯಾಮ ಶಾಲೆ, ಭಾರತ್‌ ಸೇವಾದಳದ ವತಿಯಿಂದ ಗುರುವಾರ ಹಮ್ಮಿಕೊಳ್ಳಲಾಗಿದ್ದ ಸ್ವಾತಂತ್ರ ಭಾರತ-70 ಸ್ಮಾರಕದ ಲೋಕಾರ್ಪಣೆ ಮತ್ತು ಕ್ವಿಟ್‌ ಇಂಡಿಯಾ ಅಮೃತ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 

ಬೆಳಗಾವಿ ಜಿಲ್ಲೆಯ ಹುದ್ದಲಿ ಗ್ರಾಮದಲ್ಲಿ ದೇಶದ ಸ್ವಾತಂತ್ರ್ಯಾಕ್ಕಾಗಿ ಬ್ರಿಟಿಷರ ವಿರುದ್ಧ ಬ್ರಿಟಿಷರ ಕೆಲಸ ಇಲ್ಲೇನಿದೆ ಎಂಬ ಘೋಷಣೆಗಳನ್ನು ಕೂಗಿ ಮನೆಗೊಬ್ಬರು ಹೋರಾಟಗಾರರು ಜೈಲು ಸೇರಿದ್ದರು ಎಂದು ಸ್ಮರಿಸಿದ ಅವರು, ದೇಶಕ್ಕೆ ಸ್ವತಂತ್ರ ಸಿಕ್ಕ ಬಳಿಕ ಇಂದಿನ ವಿದ್ಯಾರ್ಥಿಗಳು ಏನು ಮಾಡಬೇಕು ಎಂಬುದನ್ನು ತಿಳಿಯಬೇಕು. ದೊರೆತಿರುವ ಸ್ವತಂತ್ರ್ಯಾವನ್ನು ಉಳಿಸಿಕೊಳ್ಳುವ ಜವಾಬ್ದಾರಿ ದೇಶದ ಪ್ರತಿಯೊಬ್ಬ ವಿದ್ಯಾರ್ಥಿಗಳ ಮೇಲಿದೆ.

ಮೊಮ್ಮಗಳ ಮದುವೆ ನಿಮಿತ್ತ ಮನೆಗೆ ಬಂದಿದ್ದ ಗಾಂಧೀಜಿಯವರು, ಏಳು ದಿನಗಳ ಕಾಲ ಗ್ರಾಮದಲ್ಲಿ ನಮ್ಮೊಂದಿಗೆ ವಾಸವಾಗಿರುವುದು ಅವಿಸ್ಮರಣೀಯ ಎಂದು ಸ್ಮರಿಸಿದರು. ಜಿಲ್ಲಾಧಿಕಾರಿ ಡಾ| ರಾಮ್‌ ಪ್ರಸಾತ್‌ ಮನೋಹರ್‌ ಮಾತನಾಡಿ, ದೇಶವನ್ನು ಕಟ್ಟುವಲ್ಲಿ ಸಾಕಷ್ಟು ಹೋರಾಟಗಾರರು, ಹಿರಿಯರು ಶ್ರಮಿಸಿದ್ದಾರೆ. ಆದರೂ, ದೇಶವನ್ನು ಇನ್ನಷ್ಟು ಬಲಿಷ್ಠವಾಗಿ ಕಟ್ಟು ಜವಾಬ್ದಾರಿ ಇಂದಿನ ಯುವಪೀಳಿಗೆಯ ಮೇಲಿದೆ. ದೇಶಕ್ಕೆ ಸ್ವಾತಂತ್ರ್ಯಾ
ಸಿಕ್ಕಿದೆಯಾದರೂ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಸ್ವಾತಂತ್ರ್ಯಾ ಸಿಗಬೇಕಾಗಿದೆ. ಗಾಂಧಿಜಿಯವರು ಕಂಡ ಕನಸನ್ನು ನನಸಾಗಿಸುವ ನಿಟ್ಟಿನಲ್ಲಿ ಇಂದಿನ ಯುವಪೀಳಿಗೆ ಬಡತನ ನಿರ್ಮೂಲನೆಗೆ ಶ್ರಮಿಸಬೇಕು. ಅಹಿಂಸೆ, ಸತ್ಯ
ಮಾರ್ಗದಲ್ಲಿ ಮುನ್ನಡೆಯಬೇಕು ಎಂದರು. 

ಯುವಕರು ಯಾವುದೇ ಕಾರ್ಯ ಮಾಡುವ ಮುನ್ನ ಒಂದಷ್ಟು ಭಯ ಸಹಜ. ಆದರೆ, ಪ್ರಯತ್ನ ಮುಖ್ಯ. ಪ್ರಯತ್ನವಿಲ್ಲದೇ ಯಶಸ್ಸು ಅಸಾಧ್ಯ. ಯಶಸ್ಸು ದೊರೆಯುವುದೋ ಇಲ್ಲವೋ ಎಂಬುದರ ಬಗ್ಗೆ ಚಿಂತಿಸಿ ಪ್ರಯತ್ನವನ್ನೇ ಮಾಡದೆ, ಸೋತಿದ್ದೇನೆ ಎಂಬುದಕ್ಕೆ ಅರ್ಥವೇ ಇಲ್ಲ. ಅದ್ದರಿಂದ ಮೊದಲು ಪ್ರಯತ್ನಿಸಬೇಕು. 

ಆ ಪ್ರಯತ್ನ ತಮ್ಮನ್ನು ಗೆಲುವಿನತ್ತ ಕೊಂಡೊಯ್ಯುವಂತಿರಬೇಕು. ಗಾಂಧಿಜಿಯವರು ಸಹ ಪ್ರಯತ್ನದ ಮೂಲಕವೇ ಬ್ರಿಟಿಷರನ್ನು ದೇಶಬಿಟ್ಟು ಓಡಿಸಿ ಸ್ವತಂತ್ರ್ಯಾ ತಂದುಕೊಟ್ಟಿದ್ದಾರೆ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಜ್ಯೋತಿಗೆ ಅದ್ಧೂರಿ ಸ್ವಾಗತ; ಸ್ವತಂತ್ರ ಭಾರತ-70 ಸ್ಮಾರತಕದ ಉದ್ಘಾಟನೆ ನಿಮಿತ್ತ ಹಂಪಿಯ ಭುವನೇಶ್ವರಿ ದೇವಸ್ಥಾನದಿಂದ ಮಲ್ಲಸಜ್ಜನ ವ್ಯಾಯಾಮ ಶಾಲೆಯ ವಿದ್ಯಾರ್ಥಿಗಳು ತಂದ ಸ್ವತಂತ್ರ ಜ್ಯೋತಿಯನ್ನು ಹಿರಿಯ ಹೋರಾಟಗಾರ ಜಿ.ಎಂ.ಮಾಳಗಿ ಸ್ವಾಗತಿಸಿದರು. ಬಳಿಕ ಮಹರ್ಷಿ ಬುಲುಸು ಸಾಂಬಮೂರ್ತಿ ಮೈದಾನಲ್ಲಿ ನೂತನವಾಗಿ ನಿರ್ಮಿಸಲಾಗಿದ್ದ ಸ್ವಾತಂತ್ರ ಸ್ಮಾರಕವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಇದಕ್ಕೂ ಮುನ್ನ ವಿವಿಧ ಶಾಲಾ ವಿದ್ಯಾರ್ಥಿಗಳು, ಸೇವಾದಳ ವಿದ್ಯಾರ್ಥಿಗಳು ಪ್ರಭಾತ್‌ ಪೇರಿ ನಡೆಸಿದರು. ವ್ಯಾಯಾಮ ಶಾಲೆಯ ಅಧ್ಯಕ್ಷ ಡಾ| ಟೇಕೂರು ರಮಾನಾಥ್‌ ಅವರು ಅಧ್ಯಕ್ಷತೆ ವಹಿಸಿದ್ದರು. ವ್ಯಾಯಾಮ ಶಾಲೆಯ ಟಿ.ಜಿ.ವಿಠ್ಠಲ್‌ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಕೊನೆಯಲ್ಲಿ ಹೋರಾಟಗಾರ ಗಂಗಪ್ಪ ಮುದ್ದಪ್ಪ ಮಾಳಗಿ ಅವರನ್ನು
ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಭಾರತ ಸೇವಾದಳದ ರಾಜ್ಯಾಧ್ಯಕ್ಷ ಎಚ್‌. ಎಂ.ಗುರುಸಿದ್ದಸ್ವಾಮಿ, ಜಿಲ್ಲಾ ಗೃಹರಕ್ಷಕದಳದ ಕಮಾಂಡೆಂಟ್‌ ಎಂ.ಎ.ಷಕೀಬ್‌, ರವೀಂದ್ರ, ಬಾರಿಕೆರ್‌ ಗಣೇಶ್‌ ಸೇರಿದಂತೆ ವಿವಿಧ ಶಾಲೆಗಳ
ವಿದ್ಯಾರ್ಥಿಗಳು, ಶಿಕ್ಷಕರು ಇತರರಿದ್ದರು. 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.