ಬಲಿಜ ಸಮುದಾಯಕ್ಕೆ 2ಎ ಮೀಸಲಾತಿ ನೀಡಿ


Team Udayavani, Sep 10, 2019, 1:22 PM IST

ballary-tdy-2

ಬಳ್ಳಾರಿ: ಡಿಸಿ ಕಚೇರಿ ಆವರಣದಲ್ಲಿ ಬಲಿಜ ಸೇವಾ ಸಂಘದ ಸದಸ್ಯರು ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ನಗರ ಶಾಸಕ ಜಿ. ಸೋಮಶೇಖರರೆಡ್ಡಿ ಹಾಗೂ ಜಿಲ್ಲಾಡಳಿತಕ್ಕೆ ಸೋಮವಾರ ಮನವಿ ಸಲ್ಲಿಸಿದರು.

ಬಳ್ಳಾರಿ: ಬಲಿಜ ಸಮುದಾಯಕ್ಕೆ 2ಎ ಮೀಸಲಾತಿ ಸೌಲಭ್ಯ ಕಲ್ಪಿಸಬೇಕು. ಪ್ರತ್ಯೇಕ ಅಭಿವೃದ್ಧಿ ಮಂಡಳಿ ಸ್ಥಾಪಿಸಬೇಕು ಎಂದು ಆಗ್ರಹಿಸಿ ಬಲಿಜ ಸೇವಾ ಸಂಘದ ಸದಸ್ಯರು ಜಿಲ್ಲಾಡಳಿತ ಮತ್ತು ನಗರ ಶಾಸಕ ಜಿ. ಸೋಮಶೇಖರರೆಡ್ಡಿ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ಬಲಿಜ ಸಮುದಾಯ ಕಳೆದ ಮೂರು ದಶಕಗಳಿಂದ ನಿರ್ಲಕ್ಷ್ಯಕ್ಕೊಳಗಾಗಿದೆ. ಸಾಕಷ್ಟು ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿದೆ. ಸಮುದಾಯದ ಬಹುತೇಕ ಕುಟುಂಬಗಳು ಕಡುಬಡತನದಿಂದ ಜೀವನ ಸಾಗಿಸುತ್ತಿದ್ದಾರೆ. 1984ರಿಂದ 1994 ಏಪ್ರಿಲ್ವರೆಗೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಪ್ರವರ್ಗ 2(ಎ) ಅಡಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಸೌಲಭ್ಯ ಕಲ್ಪಿಸಿತ್ತು. ಆದರೆ, 1994ರಲ್ಲಿ ಅಂದಿನ ರಾಜ್ಯ ಸರ್ಕಾರ, ಎಚ್.ವಿಶ್ವನಾಥ್‌ ಅಧ್ಯಕ್ಷತೆಯಲ್ಲಿ ನೇಮಿಸಿದ ಉಪಸಮಿತಿಯು 2(ಎ) ಪಟ್ಟಿಯಲ್ಲಿರುವ ಮೀಸಲಾತಿಯನ್ನು ಪುನರ್‌ಪರಿಶೀಲಿಸುವಂತೆ ಸರ್ಕಾರಕ್ಕೆ ಸೂಚಿಸಿತ್ತು. ಅದರಂತೆ 2(ಎ) ಪಟ್ಟಿಯಲ್ಲಿದ್ದ 103 ಜಾತಿಗಳ ಪೈಕಿ ಕೇವಲ ಬಲಿಜ ಸಮುದಾಯವನ್ನು ಮಾತ್ರ ಪಟ್ಟಿಯಿಂದ ಕೈಬಿಟ್ಟು, 3(ಎ)ಗೆ ಸೇರಿಸಲಾಯಿತು.

ಸರ್ಕಾರದ ಈ ಕ್ರಮಕ್ಕೆ ಆಗ ಹಿಂದುಳಿದ ವರ್ಗಗಳ ಆಯೋಗ ಯಾವುದೇ ಶಿಫಾರಸ್ಸನ್ನು ಮಾಡಿರಲಿಲ್ಲ. ದುರಂತವೆಂದರೆ ಈ ಕುರಿತ ಸೂಚನೆಯಲ್ಲಿ ಪ್ರಿಯಂಬಲ್ (ಪೂರ್ವ ಪೀಠಿಕೆ) ಸಹ ಇರಲಿಲ್ಲ. ಸಮುದಾಯವೂ ಇದನ್ನು ಪ್ರಶ್ನಿಸದೆ, ಪ್ರತಿಭಟನೆಯನ್ನು ನಡೆಸದ ಹಿನ್ನೆಲೆಯಲ್ಲಿ ದಶಕಗಳಿಂದ ಅನ್ಯಾಯವಾಗಿದೆ ಎಂದು ಸಂಘದ ಅಧ್ಯಕ್ಷ ವಕೀಲ ಎಚ್.ರವಿಕುಮಾರ್‌ ತಿಳಿಸಿದ್ದಾರೆ.

1994 ರಿಂದ 2011 ರವರೆಗೆ ನಮ್ಮ ಸಮುದಾಯದ ಮಕ್ಕಳಿಗೆ ಶೈಕ್ಷಣಿಕವಾಗಿ ಯಾವುದೇ ಸೌಲಭ್ಯ ಸಿಕ್ಕಿರಲಿಲ್ಲ. ಸಮುದಾಯದ ಸತತ ಹೋರಾಟ, ಅಂದಿನ ಹಾಗೂ ಇಂದಿನ ಹಾಲಿ ಸಂಸದ ಪಿ.ಸಿ.ಮೋಹನ್‌ ಅವರ ಒತ್ತಾಯಕ್ಕೆ ಅಂದಿನ ಸರ್ಕಾರ ಸಮುದಾಯಕ್ಕೆ ಶಿಕ್ಷಣಕ್ಕೆ 2(ಎ) ಮೀಸಲಾತಿ ಸೌಲಭ್ಯವನ್ನು ಕಲ್ಪಿಸಿದ್ದು, ಅದನ್ನು ಕೂಡಲೇ ಉದ್ಯೋಗಕ್ಕೂ ವಿಸ್ತರಿಸಬೇಕು. ಜತೆಗೆ ಸಮುದಾಯದ ಅಭಿವೃದ್ಧಿಗಾಗಿ ಪ್ರತ್ಯೇಕ ಅಭಿವೃದ್ಧಿ ಮಂಡಳಿ ಸ್ಥಾಪಿಸಬೇಕು ಎಂದವರು ಮನವಿಯಲ್ಲಿ ಕೋರಿದ್ದಾರೆ.

ಈ ವೇಳೆ ಕಾರ್ಯದರ್ಶಿ ಬಿ. ಎರ್ರಿಸ್ವಾಮಿ, ಸಮನ್ವಯ ಸಮಿತಿ ಸದಸ್ಯ ಜಿ. ರಂಗಸ್ವಾಮಿ, ಜಿ. ಶ್ರೀನಿವಾಸುಲು, ಆನಂದ ಕುಮಾರ್‌, ಜೆ.ಎನ್‌.ರಾಜೇಶ್‌, ರಾಜಶೇಖರ್‌, ಗೌರವಾಧ್ಯಕ್ಷ ರಾಮಪ್ಪ, ಉಪಾಧ್ಯಕ್ಷ ಜೆ.ನಾರಾಯಣಿ, ಜಿ. ಲೋಕೇಶ್‌, ಖಚಾಂಚಿ ಜಿ. ತಾರಕರಾಮ, ಬಲಿಜ ಸಂಘದ ಮುಂಖಡರುಗಳಾದ ಸಪ್ತಗಿರಿ ಸತ್ಯನಾರಾಯಣ, ಅನಿಲ್ನಾಯ್ಡು, ಎಂ. ಈಶ್ವರರೆಡ್ಡಿ ಇತರರಿದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.