ವಿವಿಧೆಡೆ ಮಂಗಳ ಮೂರ್ತಿ ಪ್ರತಿಷ್ಠಾಪನೆ


Team Udayavani, Sep 15, 2018, 4:16 PM IST

bell-1.jpg

ಬಳ್ಳಾರಿ: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಗೌರಿ ಗಣೇಶ ಹಬ್ಬವನ್ನು ಗುರುವಾರ ವಿಜೃಂಭಣೆಯಿಂದ ಆಚರಿಸಲಾಯಿತು. ಹಬ್ಬದ ನಿಮಿತ್ತ ಹೊಸಬಟ್ಟೆಗಳನ್ನು ಧರಿಸಿ, ಮನೆಯಲ್ಲಿ ಗಣೇಶನಿಗೆ ವಿಶೇಷ ಪೂಜೆ, ಅರ್ಚನೆ, ನೈವೇದ್ಯ ಸಮರ್ಪಿಸಿ ಸಕಲ ವಿಘ್ನಗಳ ನಿವಾರಕನಿಗೆ ನಾಗರಿಕರು ಭಕ್ತಿ ಸಮರ್ಪಿಸಿದರು.

ಮಿತ್ರ ಮಂಡಳಿ, ಗಣೇಶ ಸೇವಾ ಸಮಿತಿ ಸೇರಿದಂತೆ ವಿವಿಧ ಸಮಿತಿ ಸದಸ್ಯರು ಪ್ರತಿಷ್ಠಾಪಿಸಿದ ಗಣೇಶನ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ, ಭಕ್ತಿ ಸಮರ್ಪಿಸಿದರು. ದರ್ಶನಕ್ಕೆ ಆಗಮಿಸಿದ ಭಕ್ತರಿಗೆ ಸಮಿತಿ ಸದಸ್ಯರು ತೀರ್ಥ, ಪ್ರಸಾದಗಳನ್ನು ವಿತರಿಸಿದರು.

ಗಮನ ಸೆಳೆದ ಗಣೇಶ: ನಗರದ ಸತ್ಯನಾರಾಯಣ ಪೇಟೆ ಬಡಾವಣೆಯ ಎಂಎಂಟಿಸಿ ಉದ್ಯಾನವನದಲ್ಲಿ ಯುವ
ಮಿತ್ರ ಮಂಡಳಿ ಅವರು ಪ್ರತಿಷ್ಠಾಪಿಸಿದ ಗಣೇಶ ಮೂರ್ತಿ ಗಮನಸೆಳೆಯಿತು. ಗುರುವಾರ ಬೆಳಿಗ್ಗೆ ಸಮಿತಿ ಸದಸ್ಯರು
ಶಾಸ್ತ್ರೋತ್ತವಾಗಿ ವಿಧಿವಿಧಾನಗಳಿಂದ ವಿಶೇಷ ಪೂಜೆ ಸಲ್ಲಿಸಿ ಗಣೇಶನನ್ನು ಪ್ರತಿಷ್ಠಾಪಿಸಿದರು. ಸಂಜೆ ಖ್ಯಾತ ಹಾಸ್ಯ
ಕಲಾವಿದ ಗಂಗಾವತಿ ಪ್ರಾಣೇಶ ಅವರ ತಂಡದ ಸದಸ್ಯರಿಂದ ಹಾಸ್ಯ ಸಂಜೆ ಕಾರ್ಯಕ್ರಮ ಗಮನಸೆಳೆಯಿತು.

ಈ ವೇಳೆ ಹಸಿರೇ ಉಸಿರು, ಉಸಿರೇ ಹಸಿರು, ಸ್ವತ್ಛ ಮನ, ಸ್ವತ್ಛ ಮನೆ, ನಮ್ಮನ್ನು ರಕ್ಷಿಸುತ್ತಿರುವ ಸೈನಿಕರಿಗೆ,
ನಮಗೆಲ್ಲರಿಗೂ ಆಹಾರ ಧಾನ್ಯಗಳನ್ನು ಒದಗಿಸುತ್ತಿರುವ ರೈತರಿಗೆ ಕೃತಜ್ಞತೆ, ಪ್ಲಾಸ್ಟಿಕ್‌ ಮುಕ್ತ ಭಾರತ್‌, ಆರೋಗ್ಯ
ಹಾಗೂ ವ್ಯಾಯಾಮದ ಕುರಿತು ಹಾಸ್ಯ ಕಲಾವಿದರಿಂದ ಜನರಲ್ಲಿ ಜಾಗೃತಿ ಮೂಡಿಸಲಾಯಿತು.

53 ಅಡಿ ಎತ್ತರದ ತೆಂಗಿನಕಾಯಿ ಗಣೇಶ: ನಗರದ ನೆಹರೂ ಕಾಲೋನಿಯಲ್ಲಿ ಸುಮುಖ ಮಿತ್ರಮಂಡಳಿ ವತಿಯಿಂದ
ತೆಂಗಿನಕಾಯಿಯಿಂದ ನಿರ್ಮಿಸಲಾದ 53 ಅಡಿ ಎತ್ತರದ ಪರಿಸರ ಸ್ನೇಹಿ ಗಣಪತಿ ಪ್ರತಿಷ್ಠಾಪಿಸಲಾಗಿದೆ.  ಇದಕ್ಕೆ 8500 ತೆಂಗಿನಕಾಯಿಗಳನ್ನು ಬಳಸಲಾಗಿದ್ದು, 53 ಅಡಿ ಎತ್ತರದ ಗಣೇಶ ರಾಜ್ಯದಲ್ಲೇ ಪ್ರಥಮ ಎಂದು ಹೇಳಲಾಗುತ್ತಿದೆ. ಮಂಡಳಿಯ ಸದಸ್ಯರು ಇದಕ್ಕಾಗಿ ಸಾವಿರಾರು ರೂ. ವೆಚ್ಚ ಮಾಡಿದ್ದಾರೆ. ಸುಮುಖ ಮಿತ್ರ ಮಂಡಳಿಯು ಕಳೆದ ನಾಲ್ಕೈದು ವರ್ಷಗಳಿಂದ ರಾಜ್ಯದಲ್ಲೇ ಅತಿ ಎತ್ತರದ ಗಣೇಶನನ್ನು ಪ್ರತಿಷ್ಠಾಪಿಸುವ ಮೂಲಕ ಗಮನ ಸೆಳೆಯುತ್ತಿದೆ. 

 ಈ ಹಿಂದೆಯೂ 53 ಅಡಿ ಮಣ್ಣಿನ ಗಣಪತಿಯನ್ನು ಪ್ರತಿಷ್ಠಾಪಿಸುವುದರ ಜತೆಗೆ ಅದನ್ನು ಸ್ಥಳದಲ್ಲೇ ವಿಸರ್ಜನೆ
ಮಾಡುವ ಮೂಲಕ ಹಾಗೂ ಹಾಲು, ನೀರು ಎರೆಯಲು ಭಕ್ತರಿಗೆ ಅವಕಾಶ ಕಲ್ಪಿಸಲಾಗಿತ್ತು. ತೆಂಗಿನಕಾಯಿ ಗಣೇಶನನ್ನು ನೋಡಲು ಸಾವಿರಾರು ಜನರು ಆಗಮಿಸುತ್ತಿದ್ದಾರೆ. 11 ದಿನಗಳ ಪ್ರತಿಷ್ಠಾಪಿಸುವ ಈ ಗಣೇಶ ಮೂರ್ತಿಯನ್ನು 11ನೇ ದಿನವಾದ ಸೆ. 23ರಂದು ವಿಸರ್ಜಿಸಲಾಗುತ್ತಿದ್ದು, ಅಂದು ಗಣೇಶನ ನಿರ್ಮಾಣಕ್ಕೆ ಬಳಸಲಾಗಿದ್ದ ತೆಂಗಿನ ಕಾಯಿಗಳನ್ನು 50 ರೂ.ಗಳಿಗೆ ಒಂದರಂತೆ ಭಕ್ತರಿಗೆ ವಿತರಿಸಲಾಗುತ್ತದೆ ಎಂದು ಮಂಡಳಿಯ ಸದಸ್ಯರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.