ಮಾರುಕಟ್ಟೆಗೆ ಲಗ್ಗೆಯಿಟ್ಟ ಮಾವು ; ಒಟ್ಟು 500 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆದ ಬೆಳೆ

ಪ್ರತಿ ಕೆಜಿ ಹಣ್ಣಿಗೆ 80ರಿಂದ 100ರೂ ದರ ನಿಗದಿ

Team Udayavani, May 26, 2020, 6:31 AM IST

ಮಾರುಕಟ್ಟೆಗೆ ಲಗ್ಗೆಯಿಟ್ಟ ಮಾವು

ಸಾಂದರ್ಭಿಕ ಚಿತ್ರ

ಹರಪನಹಳ್ಳಿ: ಕೋವಿಡ್ ಲಾಕ್‌ಡೌನ್‌ ಸಡಿಲಗೊಂಡ ಹಿನ್ನೆಲೆಯಲ್ಲಿ ಹಣ್ಣುಗಳ ರಾಜ ಎಂದೇ ಹೆಸರಾದ ಮಾವಿನ ಹಣ್ಣಿನ ಸುಗ್ಗಿ ಎಲ್ಲೆಡೆ ಆರಂಭವಾಗಿದ್ದು ಹರಪನಹಳ್ಳಿ ಮಾರುಕಟ್ಟೆಗೆ ಇದೀಗ ಮಾವಿನ ಹಣ್ಣು ಮಾರಾಟಕ್ಕೆ ಆಗಮಿಸುತ್ತಿವೆ. ತಾಲೂಕಿನ ವಿವಿಧೆಡೆ ಬೆಳೆದಿರುವ ಬೇಲಿಸಾ, ಮಲಗಾವ್‌, ಮಲ್ಲಿಕಾ, ತೋತಾಪುರಿ, ರಸಪೂರಿ ಮಾವು ಜೊತೆಗೆ ಇತರೆ ವಿವಿಧ ಮಾವಿನ ಹಣ್ಣುಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ.

ಈಗ ಮಾರುಕಟ್ಟೆಯಲ್ಲಿರುವ ಮಲಗಾವ್‌-60, ಮಲ್ಲಿಕಾ-60, ತೋತಾಪುರಿ-50, ರಸಪೂರಿ 60 ರಿಂದ 70ರೂ ಬೆಲೆಗೆ ಮಾರಾಟ ಆಗುತ್ತಿವೆ. ಹಣ್ಣಿನ ಮಾರುಕಟ್ಟೆ, ಮಾರಾಟ ಸ್ಥಳವಾದ ಚಿತ್ರಮಂದಿರದ ಆಸುಪಾಸು, ಹೊಸ ಬಸ್‌ ನಿಲ್ದಾಣ ಬಳಿ ಹೋದರೆ ಮಾವಿನ ವಾಸನೆ ಒಮ್ಮೆ ಕತ್ತು ತಿರುಗಿಸುವಂತೆ ಮಾಡುತ್ತಿವೆ. ಬಿಸಿಲಿನ ಝಳವಿದ್ದರೂ ಆತಂಕದಲ್ಲಿಯೇ ಒಮ್ಮೆ ರುಚಿ ನೋಡುವ ಆಸೆಯಿಂದ ಖರೀದಿಯೂ ನಡೆಯುತ್ತಿದೆ.

ಮಾವು ಬೆಳೆದ ರೈತರು ಬಹುತೇಕ ಸ್ಥಳೀಯ ಹಣ್ಣಿನ ವ್ಯಾಪಾರಿಗಳನ್ನು ನಂಬಿಕೊಂಡಿರುವುದರಿಂದ ಕೆಲವು ಸಲ ಮಾರುಕಟ್ಟೆ ದರದಲ್ಲಿ ವ್ಯತ್ಯಾಸವಾಗಿ ಮಾವು ಬೆಳೆಗಾರರು ನಷ್ಟ ಅನುಭವಿಸುವ ಸಾಧ್ಯತೆಗಳಿರುತ್ತವೆ. ಹೀಗಾಗಿ ರೈತರು ಬೆಳೆದ ಮಾವಿನ ಹಣ್ಣುಗಳಿಗೆ ಉತ್ತಮ ಬೆಲೆ ಪಡೆಯಲು ತಾವೇ ಹೊಲ ಮತ್ತು ರಸ್ತೆ ಬಳಿ ಮಾರಾಟಕ್ಕಿಳಿದಿರುವುದು ಕಂಡುಬರುತ್ತಿದೆ. ಕಳೆದ ಬಾರಿ ಈ ಹೊತ್ತಿನಲ್ಲಿ ಮಾವಿನ ಬೆಲೆ ಇನ್ನೂ ಹೆಚ್ಚಿತ್ತು. ಈ ಬಾರಿ ಕೋವಿಡ್ ಇರುವುದರಿಂದ ಸ್ವಲ್ಪ ಕಡಿಮೆಯಿದೆ. ಇನ್ನೂ ಮಾವಿನ ವ್ಯಾಪಾರ ಕುದುರಿಲ್ಲ. ಜತೆಗೆ ಈ ಬಾರಿ ಹಣ್ಣು ಕೂಡ ಕಡಿಮೆಯಿದೆ. ಕಳೆದ ವರ್ಷ ಈ ಹೊತ್ತಿಗೆ ಸಾಕಷ್ಟು ವ್ಯಾಪಾರ ಮಾಡಿದ್ದೇವು ಎನ್ನುತ್ತಾರೆ ಮಾವು ವ್ಯಾಪಾರಿ ದುರುಗಮ್ಮ ಮತ್ತು ಊರಮ್ಮ. ಪಟ್ಟಣದ ಕೊಟ್ಟೂರು ರಸ್ತೆಯ ತೋಟದ ಬಳಿ ಮಾರಾಟಕ್ಕಿಟ್ಟಿರುವ ಬದಾಮಿ-80, ರಸಪೂರ-70,
ಮಲಗೋವಾ-80, ಸಿಂಧೂರ-60 ದರದಲ್ಲಿ ಹಣ್ಣುಗಳನ್ನು ಮಾರಾಟ ಮಾಡುತ್ತಿದ್ದೇವೆ. ಲಾಕ್‌ಡೌನ್‌ ನಂತರ ವ್ಯಾಪಾರ ಜೋರಾಗಿದೆ.

ಯಾವುದೇ ಪೌಡರ್‌ ಬಳಸದೇ ಭತ್ತದ ಹುಲ್ಲಿನಲ್ಲಿ ಹೊತ್ತೆ ಹಾಕಿ ಹಣ್ಣು ಮಾಡಿರುವುದರಿಂದ ಈ ಭಾಗದಲ್ಲಿ ಸಂಚರಿ  ಸುವ ಪ್ರಯಾಣಿಕರು ಮತ್ತು ಪಟ್ಟಣದ ಜನರು ಇಲ್ಲಿಗೆ ಬಂದು ಹಣ್ಣುಗಳನ್ನು ಖರೀದಿ ಮಾಡಿಕೊಂಡು ಹೋಗುತ್ತಿದ್ದಾರೆ. ಕೊಟ್ಟೂರು ರಸ್ತೆಯ 5 ಎಕರೆ ಮತ್ತು ಅನ್ಯ ಕಡೆಯ 18 ಎಕರೆ ತೋಟದ ಬೆಳೆಯ ಹಣ್ಣನ್ನು ಇಲ್ಲಿಯೇ ಮಾರಾಟ ಮಾಡುತ್ತೇವೆ ಎನ್ನುತ್ತಾರೆ ರೈತ ಕಸವನ ಹಳ್ಳಿ ದಾಸಪ್ಪರ ಪರಮೇಶ್ವರಪ್ಪ.

ಬಹುತೇಕ ಹಣ್ಣುಗಳಿಗೆ ಪೌಡರ್‌ ಹಾಕಿ ಹಣ್ಣು ಮಾಡುತ್ತಿರುವುದರಿಂದ ಅವುಗಳ ಸೇವನೆಯಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಆದರೆ ರೈತರು ತೋಟದಲ್ಲಿಯೇ ಮಾವಿನ ಕಾಯಿ ಹೊತ್ತೆ ಹಾಕಿ ಯಾವುದೇ ಪೌಡರ್‌ ಬಳಸದೇ ಹಣ್ಣು ಮಾಡಿರುವುದರಿಂದ ಉತ್ತಮ ರುಚಿ ಇರುತ್ತವೆ. ಹೀಗಾಗಿ ಪಟ್ಟಣದಿಂದ ಇಲ್ಲಿಗೆ ಬಂದು ಮಾವಿನ ಹಣ್ಣು ತೆಗೆದುಕೊಂಡು ಹೋಗುತ್ತೇವೆ. ಸಿ.ಗಂಗಾಧರ್‌, ಸೋಗಿ ಮಲ್ಲಿಕಾರ್ಜುನ್‌, ಗ್ರಾಹಕರು

ಹರಪನಹಳ್ಳಿ ತಾಲೂಕಿನಲ್ಲಿ ಒಟ್ಟು 500 ಹೆಕ್ಟೆರ್‌ ಪ್ರದೇಶದಲ್ಲಿ ಮಾವಿನ ಬೆಳೆ ಹಾಕಲಾಗಿದೆ. ಕಂಚಿಕೇರಿ, ಕ್ಯಾರಕಟ್ಟೆ, ಹಳ್ಳಿಕೆರೆ, ತೆಲಿಗಿ ಕೆ.ಕಲ್ಲಹಳ್ಳಿ ಸೇರಿದಂತೆ ವಿವಿಧೆಡೆ ಫಸಲು ಬಂದಿದೆ. ಪ್ರತಿ ಒಂದು ಹೆಕ್ಟೇರ್‌ ಪ್ರದೇಶದಿಂದ 5ರಿಂದ 6 ಟನ್‌ ಹಣ್ಣು ನಿರೀಕ್ಷೆ ಮಾಡಲಾಗಿದೆ. ಇಡೀ ತಾಲೂಕಿನ ಒಟ್ಟು 2000ರಿಂದ 2500 ಸಾವಿರ ಟನ್‌ ಹಣ್ಣು ಸಿಗುವ ನಿರೀಕ್ಷೆಯಿದೆ. ಕಳೆದ ಬಾರಿಗಿಂತ ಈ ಬಾರಿ ಫಸಲು ಕಡಿಮೆ ಬಂದಿದೆ.
ಜಯಸಿಂಹ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ

ಎಸ್‌.ಎನ್‌. ಕುಮಾರ್‌ ಪುಣಬಗಟ್ಟಿ

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.