ಕನ್ನಡಿಗರ ಅಭಿವೃದ್ಧಿಗೆ ಹೋರಾಡಿ

ಇಂಗ್ಲಿಷ್‌ ಭಾಷೆ ಊಟದಲ್ಲಿನ ಉಪ್ಪಿನಕಾಯಿಯಂತಿರಲಿ: ಮಂಜಮ್ಮ ಜೋಗತಿ

Team Udayavani, Mar 8, 2020, 2:42 PM IST

8-March-17

ಮರಿಯಮ್ಮನಹಳ್ಳಿ: ಕರವೇ ಘಟಕದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಹಿರಿಯ ರಂಗಕಲಾವಿದೆ ಡಾ| ಕೆ.ನಾಗರತ್ನಮ್ಮ ಉದ್ಘಾಟಿಸಿದರು. ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಮಾತಾ ಮಂಜಮ್ಮ ಜೋಗತಿ ಇದ್ದಾರೆ.

ಮರಿಯಮ್ಮನಹಳ್ಳಿ: ಕನ್ನಡವೇ ಜಾತಿ ಕನ್ನಡವೇ ಧರ್ಮವೆಂದು ಭಾವಿಸಿ ಕನ್ನಡಿಗರ ಸಮಗ್ರ ಅಭಿವೃದ್ಧಿಗೆ ಕರ್ನಾಟಕ ರಕ್ಷಣಾ ವೇದಿಕೆಗಳು ಹೋರಾಡಬೇಕಾಗಿದೆ ಎಂದು ಹಿರಿಯ ರಂಗಕಲಾವಿದೆ ವಾಲ್ಮೀಕಿ ಪ್ರಶಸ್ತಿ ಪುರಸ್ಕೃತೆ ಡಾ| ಕೆ.ನಾಗರತ್ನಮ್ಮ ಅಭಿಪ್ರಾಯಪಟ್ಟರು.

ಅವರು ಪಟ್ಟಣದ ದುರ್ಗಾದಾಸ ಬಯಲು ರಂಗಮಂದಿರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್‌ ಶೆಟ್ಟಿಬಣ) ಹೊಸಪೇಟೆ ಘಟಕ ಮರಿಯಮ್ಮನಹಳ್ಳಿ ಹೋಬಳಿ ಘಟಕದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮರಿಯಮ್ಮನಹಳ್ಳಿ ಸುತ್ತಮುತ್ತಲೂ ಕಾರ್ಖಾನೆಗಳು ಇರುವುದರಿಂದ ಪರಭಾಷಿಕರು ಹೆಚ್ಚು ವಲಸೆ ಬರುತ್ತಿದ್ದಾರೆ. ಸ್ಥಳೀಯ ಕನ್ನಡಿಗರ ಭಾಷೆ ಜನಜೀವನ ರಕ್ಷಣೆಗೆ ರಕ್ಷಣಾವೇದಿಕೆಗಳು ಹೋರಾಡಬೇಕಾಗಿದೆ. ಪಟ್ಟಣದ ಮೂಲಭೂತ ಸಮಸ್ಯೆಗಳಿಗಾಗಿ ಹೋರಾಟಗಳನ್ನು ರೂಪಿಸಿ ಸರಿಯಾದ ಮಾರ್ಗದಲ್ಲಿ ಕೊಂಡೊಯ್ಯಬೇಕಾಗಿದೆ. ಕಲಾವಿದರಾದ ನಾವು ಕನ್ನಡಕ್ಕಾಗಿಯೇ ದುಡಿಯುತ್ತಿದ್ದೇವೆ ಕನ್ನಡಕ್ಕಾಗಿಯೇ ಬದುಕುತ್ತಿದ್ದೇವೆ ಎಂದರು.

ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಮಾತಾ ಬಿ. ಮಂಜಮ್ಮ ಜೋಗತಿ ಮಾತನಾಡಿ, ನಾವು ಮೊದಲು ಕನ್ನಡಿಗರಾಗಿರಬೇಕು. ನಮ್ಮ ಪರಿಸರವೂ ಕನ್ನಡವಾಗಿರಬೇಕು. ಇಂಗ್ಲಿಷ್‌ ಭಾಷೆ ಊಟದಲ್ಲಿನ ಉಪ್ಪಿನಕಾಯಿಯಂತೆ ಇರಬೇಕು. ಕನ್ನಡ ನಮ್ಮ ಜೀವನದ ಮೂಲಸತ್ವವಾಗಿರಬೇಕು. ನಮ್ಮ ಭಾಷೆ ಉಳಿಸುವುದರ ಜೊತೆಗೆ ಬೇರೆ ಭಾಷೆಗಳನ್ನು ಕಲಿಯೋಣ ಎಂದರು. ಬಳ್ಳಾರಿ ಜಿಲ್ಲಾ ಕಾರ್ಯಾಧ್ಯಕ್ಷರಾದ ಪಿ. ಶೇಖರ್‌ ಹಾಗೂ ಜಿಲ್ಲಾಧ್ಯಕ್ಷರಾದ ವಿ. ರಾಮಾಂಜಿನೇಯ ಮಾತನಾಡಿದರು.

ಪದಗ್ರಹಣ: ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್‌ಶೆಟ್ಟಿ ಬಣ ಹೊಸಪೇಟೆ ತಾಲೂಕು ಘಟಕಕ್ಕೆ ಸಂಘಟನಾ ಕಾರ್ಯದರ್ಶಿಯನ್ನಾಗಿ ಯೇಸು ರಾಜ್‌, ಮರಿಯಮ್ಮನಹಳ್ಳಿ ಹೋಬಳಿ ಘಟಕದ ಅಧ್ಯಕ್ಷರನ್ನಾಗಿ ಡಣಾಪುರದ ಈ. ರವಿಕುಮಾರ್‌, ಹೋಬಳಿ ಘಟಕದ ಕಾರ್ಯದರ್ಶಿಯಾಗಿ ರಾಜೇಶ್‌ ಕೆ.ಎಸ್‌. ಇವರನ್ನು ಒಂದು ವರ್ಷದ ಅವಧಿವರೆಗೆ ನೇಮಕಮಾಡಲಾಗಿದೆ ಎಂದು ಜಿಲ್ಲಾ ಯುವಾಧ್ಯಕ್ಷರಾದ ಕಟ್ಟೆಸ್ವಾಮಿ ಅವರು ಅಧಿಕೃತವಾಗಿ ಘೋಷಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ನಗರ ಘಟಕ ಅಧ್ಯಕ್ಷರಾದ ಚಂದ್ರಶೇಖರ, ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷ ರಾಜ ವಿ.ಕೆ., ಹೊಸಪೇಟೆ ತಾಲೂಕು ಘಟಕದ ಅಧ್ಯಕ್ಷ ಷಣ್ಮುಖ ಪಿ., ಹಗರಿಬೊಮ್ಮನಹಳ್ಳಿ ತಾಲೂಕು ಘಟಕದ ಅಧ್ಯಕ್ಷ ಭರಮಣ್ಣ, ತಾಲೂಕು ಯುವ ಘಟಕದ ಅಧ್ಯಕ್ಷ ವಿನೋದ ಕುಮಾರ್‌, ಚಲನಚಿತ್ರ ನಿರ್ದೇಶಕ ಅಡ್ಡ ರಮೇಶ, ಸಾಹಿತಿ ಶಿಕ್ಷಕ ಪರಮೇಶ್ವರ ಸೊಪ್ಪಿಮಠ, ರೈತ ಮುಖಂಡರಾದ ಕೆ. ಪರಶುರಾಮಪ್ಪ, ಹೂಗಾರ್‌ ಬಸವರಾಜ ಮತ್ತಿತರರು ಉಪಸ್ಥಿತರಿದ್ದರು. ಸಂಗೀತ ಭಾರತಿಯ ಸಂಸ್ಥಾಪನಾಧ್ಯಕ್ಷ ಎಚ್‌.ಪಿ. ಕಲ್ಲಂಭಟ್ಟ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.