ಭಾರತ್ ಐಕ್ಯತಾ ಯಾತ್ರೆ ಯಶಸ್ವಿಯಾಗಲಿ
ಬಿಜೆಪಿ ಸರ್ಕಾರದ ವಿರುದ್ಧ ಜನ ಬೇಸತ್ತಿದ್ದಾರೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿವೆ
Team Udayavani, Sep 12, 2022, 5:53 PM IST
ಹರಪನಹಳ್ಳಿ: ರಾಷ್ಟ್ರೀಯ ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಅವರ ಸಾರಥ್ಯದಲ್ಲಿ ಕೈಗೊಂಡಿರುವ ಭಾರತ್ ಐಕ್ಯತಾ ಯಾತ್ರೆ ಅಭಿಯಾನ ಯಶಸ್ವಿಯಾಗಲಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಪಿ. ಲತಾ ಮಲ್ಲಿಕಾರ್ಜುನ್ ಶುಭ ಹಾರೈಸಿದರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿರುವ ಗಾಂಧಿ ಮೆಮೋರಿಯಲ್ ಹಾಲ್ಗೆ ತೆರಳಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಸಲ್ಲಿಸಿ ನಂತರ ಮಾತನಾಡಿದ ಅವರು, ಭಾರತ್ ಜೋಡೋ ಯಾತ್ರೆಯು ಕನ್ಯಾಕುಮಾ ರಿಯಿಂದ ಕಾಶ್ಮೀರದವರೆಗೆ 150 ದಿನಗಳ 3570 ಕಿ.ಮೀ ವರೆಗೂ ನಡೆಯಲಿದ್ದು, ಪಾದಯಾತ್ರೆ ಉದ್ದಕ್ಕೂ ರಾಹುಲ್ ಗಾಂಧಿಯವರು ಅಲ್ಲಿನ ಜನರ ಸ್ಥಿತಿ-ಗತಿ ಅವರ ಜೀವನ ಶೈಲಿ ಆಲಿಸಲಿದ್ದಾರೆ ಎಂದರು. ಸದ್ಭಾವನಾ ಯಾತ್ರೆಯು
ರಾಜ್ಯಕ್ಕೆ ಕೇರಳದ ವಯ್ನಾಡಿನಿಂದ ಗುಂಡ್ಲುಪೇಟೆ ಮೂಲಕ ಅಕ್ಟೋಬರ್ನಲ್ಲಿ ತಲುಪಲಿದೆ. ಬಳ್ಳಾರಿ-ವಿಜಯನಗರದ ಮಾರ್ಗವಾಗಿ ಕೂಡ್ಲಿಗಿ ಮೂಲಕ ಹಾದು ಹೋಗಲಿರುವ ಈ ಯಾತ್ರೆಗೆ ನಾವು ಕೂಡ ಸಾಥ್ ನೀಡುತ್ತವೆ. ಭಾರತ್ ಐಕ್ಯತಾ ಯಾತ್ರೆಗೆ ಯಾವುದೇ ಅಡಚಣೆ ಆಗದಂತೆ ಯಶಸ್ವಿಯಾಗಿ ನಡೆಯಲಿ ಎಂದರು.
ಪುರಸಭೆ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಎಂ.ವಿ. ಅಂಜಿನಪ್ಪ ಮಾತನಾಡಿ, ಬ್ರಿಟಿಷರನ್ನು ದೇಶದಿಂದ ಹೊಡೆದೊಡಿಸಿದ ರೀತಿಯಲ್ಲೆಯೇ ಬಿಜೆಪಿಯನ್ನು ಅ ಧಿಕಾರದಿಂದ ಹೊಡಿಸಬೇಕಾಗಿದೆ. ಬಿಜೆಪಿ ಸರ್ಕಾರದ ವಿರುದ್ಧ ಜನ ಬೇಸತ್ತಿದ್ದಾರೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿವೆ. ದೇಶದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ.ಇವೆಲ್ಲವನ್ನೂ ಜನರಿಗೆ ತಿಳಿಸಬೇಕಾದ ಅಗತ್ಯವಿದೆ.
ಭಾರತ ರಾಷ್ಟ್ರೀಯ ಕಾಂಗ್ರೆಸ್ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಯವರು ಭಾರತ ಐಕ್ಯತಾ ಯಾತ್ರೆ ಕೈಗೊಂಡಿದ್ದು ಇದು ಯಶಸ್ವಿಯಾಗಲಿದೆ ಎಂದರು. ಇದೇ ವೇಳೆ ಕಾರ್ಯಕರ್ತರು ಮೇಣದ ಬತ್ತಿ ಬೆಳಗಿಸುವ ಮೂಲಕ ಭಾರತ್ ಜೋಡೋ ಯಾತ್ರೆಗೆ ಬೆಂಬಲ ವ್ಯಕ್ತಪಡಿಸಿದರು. ಪುರಸಭೆ ಸದಸ್ಯರಾದ ವೆಂಕಟೇಶ್ ವಕೀಲರು, ಚಿಕ್ಕೇರಿ ಬಸಪ್ಪ, ಮುಖಂಡರಾದ ಹುಲಿಕಟ್ಟಿ ಚಂದ್ರಪ್ಪ, ಉದಯ್ಶಂಕರ್, ಮತ್ತೂರು ಬಸವರಾಜ, ಸಾಸ್ವಿಹಳ್ಳಿ ನಾಗರಾಜ, ಬಾಲಾಜಿ ಶಿವರಾಜ್, ರಮೇಶ್, ನರೇಶ್, ಗ್ರಾಪಂ ಉಪಾಧ್ಯಕ್ಷೆ ಲಕ್ಷ್ಮಿ ಚಂದ್ರಶೇಖರ್, ಸಹನಾ, ವನಜಾಕ್ಷಮ್ಮ, ರತ್ನಮ್ಮ, ರೇಣುಕಮ್ಮ, ಹಾಲಮ್ಮ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ