ಗಬ್ಬೆದ್ದು ನಾರುತ್ತಿದೆ ಶೌಚಾಲಯ!

ಮಿನಿ ವಿಧಾನಸೌಧದಲ್ಲಿರುವ ಶೌಚಾಲಯ ಅವ್ಯವಸ್ಥೆಗಳ ಆಗರ, ಸರ್ಕಾರಿ ನೌಕರರ ಪರದಾಟ

Team Udayavani, Oct 4, 2021, 7:12 PM IST

21

ಆರ್‌.ಬಸವರೆಡ್ಡಿ ಕರೂರು

ಸಿರುಗುಪ್ಪ: ನಗರದ ಮಿನಿವಿಧಾನಸೌಧದಲ್ಲಿರುವ ತಾಲೂಕು ಕಚೇರಿ ಮಹಡಿಯಲ್ಲಿರುವ ಶೌಚಾಲಯಗಳು ಗಬ್ಬೆದ್ದು ನಾರುತ್ತಿದ್ದು ಇಲ್ಲಿ ಕಾರ್ಯನಿರ್ವಹಿಸುವ ನೌಕರರು ತಮ್ಮ ದಿನನಿತ್ಯದ ಶೌಚ ಕಾರ್ಯಗಳನ್ನು ಮಾಡಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ತಹಶೀಲ್ದಾರ್‌ ಕಚೇರಿಯಲ್ಲಿ ಆಹಾರ, ಸರ್ವೇ, ಉಪಖಜಾನೆ, ಭೂ ದಾಖಲೆ, ಅಟಲ್‌ಜೀ ಜನಸ್ನೇಹಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ನೂರಾರು ಸಿಬ್ಬಂದಿ ಬಳಕೆಗಾಗಿ ಮೇಲ್ಮಹಡಿಯಲ್ಲಿ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಆದರೆ ಶೌಚಾಲಯಕ್ಕೆ ಬೇಕಾದ ನೀರಿನ ಸೌಕರ್ಯವಿಲ್ಲದೆ ಕಳೆದ 2 ವರ್ಷಗಳಿಂದಲೂ ಈ ಶೌಚಾಲಯಗಳನ್ನು ಬಳಕೆ ಮಾಡದೆ ಇರುವುದರಿಂದ ಈ ಶೌಚಾಲಯಗಳು ಗಬ್ಬು ನಾರುತ್ತಿದ್ದು ಒಳಗೆ ಕಾಲಿಟ್ಟರೆ ವಾಂತಿ ಬರುತ್ತದೆ ಎನ್ನುವ ಕಾರಣದಿಂದ ಇಲ್ಲಿನ ಬಹುತೇಕ ಪುರುಷ ನೌಕರರು ಕಚೇರಿ ಸುತ್ತಮುತ್ತಲು ಮೂತ್ರ ಮಾಡುತ್ತಿದ್ದಾರೆ.

ಆದರೆ ಮಹಿಳಾ ನೌಕರರು ಮಾತ್ರ ಕಚೇರಿ ಸಮೀಪದ ಬಸ್‌ ನಿಲ್ದಾಣದ ಶೌಚಾಲಯಕ್ಕೆ ಅಥವಾ ತಮ್ಮ ಮನೆಗೆ ತೆರಳುವ ಪರಿಸ್ಥಿತಿ ಇದೆ. ಶೌಚಾಲಯಗಳಲ್ಲಿ ನೀರಿನ ಸೌಲಭ್ಯ ಕಲ್ಪಿಸದೇ ಇರುವುದರಿಂದ ಇಲ್ಲಿ ಯಾವುದೇ ನೌಕರರು ಶೌಚಾಲಯದೊಳಗೆ ಕಾಲಿಡಲು ಆಗದಂತಹ ಹೊಲಸು ತುಂಬಿದ್ದು, ನೆಲದಲ್ಲಿ ಖಾಲಿ ಬಾಟಲ್‌ಗ‌ಳು, ರದ್ದಿ ಪೇಪರ್‌ಗಳು ಬಿದ್ದಿದ್ದು, ಅವು ಬಿದ್ದಲ್ಲಿಯೇ ಕೊಳೆತಿದ್ದು, ಹುಳು ಹುಪ್ಪಡಿಗಳ, ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗಿವೆ. ಕಚೇರಿ ಮೇಲ್ಮಹಡಿಯಲ್ಲಿ ವೀಡಿಯೋ ಕಾನ್ಫರೆನ್ಸ್‌ ಹಾಲ್‌ ಇದ್ದು, ಇಲ್ಲಿ ಪ್ರತಿನಿತ್ಯಲೂ ಒಂದಲ್ಲ ಒಂದು ಇಲಾಖೆಯ ವೀಡಿಯೋ ಕಾನ್ಫರೆನ್ಸ್‌ ಕಾರ್ಯಕ್ರಮ ನಡೆಯುತ್ತಲೇ ಇರುತ್ತದೆ. ಇಲ್ಲಿಗೆ ಒಂದೊಂದು ಬಾರಿ ನೂರಕ್ಕಿಂತಲೂ ಹೆಚ್ಚು ನೌಕರರು ವೀಡಿಯೋ ಕಾನ್ಫ ರೆನ್ಸ್‌ ಹಾಲ್‌ನಲ್ಲಿ ಕುಳಿತುಕೊಳ್ಳುತ್ತಾರೆ. ಕೆಲವು ಬಾರಿ ದಿನವಿಡೀ ಕಾನ್ಫರೆನ್ಸ್‌ ನಡೆಯುತ್ತದೆ. ಆದರೆ ಕಾನ್ಫ ರೆನ್ಸ್‌ನಲ್ಲಿ ಭಾಗವಹಿಸುವವರು ಶೌಚಾಕಾರ್ಯಗಳನ್ನು ಮುಗಿಸಿಕೊಳ್ಳಲು ತಮ್ಮ ಕಚೇರಿಗಳಿಗೆ ಹೋಗುವುದು ಅನಿವಾರ್ಯವಾಗಿದೆ. ವೀಡಿಯೋ ಕಾನ್ಫರೆನ್ಸ್‌ಗೆ ಬರುವ ಬಹುತೇಕ ನೌಕರರು ಇಲ್ಲಿನ ಶೌಚಾಲಯದ ಅವ್ಯವಸ್ಥೆ ನೋಡಿ ಅದರೊಳಗೆ ಕಾಲಿಡಲು ಹಿಂಜರಿಯುತ್ತಿದ್ದು, ಅನಿವಾರ್ಯವಿದ್ದರೂ ಅದರೊಳಗೆ ಕಾಲಿಡದೆ ತಾಲೂಕು ಕಚೇರಿ ಆವರಣದೊಳಗೆ ಮೂತ್ರ ವಿಸರ್ಜನೆ ಮಾಡಬೇಕಾದ ಅನಿವಾರ್ಯತೆ ಇರುತ್ತದೆ.

ವೀಡಿಯೋ ಕಾನ್ಫರೆನ್ಸ್‌ಗೆ ಬಂದರೆ ಶೌಚಾಕಾರ್ಯವನ್ನು ಮೊದಲೇ ಮುಗಿಸಿಕೊಂಡು ಬರುತ್ತೇವೆ. ಇಲ್ಲಿರುವ ಶೌಚಾಲಯ ನೀರು ಕಾಣದೇ ಅಸ್ವತ್ಛತೆಯಿಂದ ಕೂಡಿದ್ದು ಒಳಗೆ ಕಾಲಿಡಲು ಸಾಧ್ಯವಿಲ್ಲ.

ನೌಕರ

ಮೇಲ್ಮಹಡಿಯಲ್ಲಿರುವ ಶೌಚಾಲಯ ಬಳಸಲು ಯೋಗ್ಯವಾಗುವಂತೆ ಸ್ವತ್ಛಗೊಳಿಸುವ ಕಾರ್ಯ ಮಾಡಿಸಲಾಗುತ್ತಿದೆ. ಶೌಚಾಲಯ ಬಳಕೆ ಮಾಡುವವರು ಸರಿಯಾಗಿ ನೀರು ಹಾಕಿ ಸ್ವತ್ಛವಾಗಿಟ್ಟುಕೊಂಡರೆ ಶೌಚಾಲಯಗಳು ಬಳಕೆಗೆ ಅನುಕೂಲವಾಗುತ್ತವೆ.

ಮಂಜುನಾಥಸ್ವಾಮಿ, ತಹಶೀಲ್ದಾರ್‌

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

bellary

Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು

ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.