ವ್ಯಾಸನತಾಂಡ ಗ್ರಾಮಕ್ಕೆ ದಿಢೀರ್ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ ಶಾಸಕ ಜಿ.ಕರುಣಾಕರ ರೆಡ್ಡಿ
Team Udayavani, Nov 30, 2021, 7:08 PM IST
ಹರಪನಹಳ್ಳಿ: ಹವಾಮಾನ ವೈಪರೀತ್ಯ ಹಿನ್ನೆಲೆ ತಾಲೂಕಿನ ಕೆ.ಕಲ್ಲಹಳ್ಳಿ ಗ್ರಾ.ಪಂ.ವ್ಯಾಪ್ತಿಯ ವ್ಯಾಸನತಾಂಡ ಗ್ರಾಮದಲ್ಲಿ ಜನರಿಗೆ ಕಳೆದ ಎರಡ್ಮೂರು ದಿನಗಳಿಂದ ವಿಶಿಷ್ಟ ಜ್ವರ ಕಾಣಿಸಿಕೊಂಡ ಪರಣಾಮ ಜನರು ಆತಂಕಗೊಂಡಿದ್ದರು, ವಿಷಯ ತಿಳಿದ ಶಾಸಕ ಜಿ.ಕರುಣಾಕರ ರೆಡ್ಡಿ ವೈದ್ಯರೊಂದಿಗೆ ಮಂಗಳವಾರ ದಿಡೀರ್ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರ ಆರೋಗ್ಯ ವಿಚಾರಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು ಗ್ರಾಮದಲ್ಲಿ ಸುಮಾರು 50 ಜನರಿಗೆ ಆರೋಗ್ಯದಲ್ಲಿ ಸಮಸ್ಯೆ ಉಂಟಾಗಿದ್ದು, ವೈದ್ಯರ ಪ್ರಕಾರ ಚಿಕನ್ ಗುನ್ಯಾ, ಅಥವಾ ಡೆಂಗ್ಯೂ ಇರಬಹುದು ಎಂದು ತಿಳಿಸಿದ್ದಾರೆ, ಹಾಗಾಗಿ ಜನರು ಯಾವುದೇ ರೀತಿಯ ಭಯ ಪಡುವ ಆವಶ್ಯಕತೆ ಇಲ್ಲ ಅನಾರೋಗ್ಯಕ್ಕೆ ಒಳಗಾದ ಪ್ರತಿಯೊಬ್ಬರ ರಕ್ತ ಪರೀಕ್ಷೆ ಮಾಡಿ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ತಿಳಿಸಿದ್ದೇನೆ ಎಂದರು.
ಇನ್ನು ಗ್ರಾಮದಲ್ಲಿ ಕುಡಿಯುವ ನೀರಿನ ಸಂಬಂದ ಈಗಾಗಲೇ ಅಧಿಕಾರಿಗಳ ಜೊತೆ ಮಾತನಾಡಿದ್ದು, ಇಡೀ ಗ್ರಾಮಕ್ಕೆ ಫಾಗಿಂಗ್ ವ್ಯವಸ್ಥೆ ಮಾಡಲು ಗ್ರಾಮ ಪಂಚಾಯ್ತಿ ಪಿಡಿಒ ಅವರಿಗೆ ಸೂಚಿಸಿದ್ದೇನೆ, ಗ್ರಾಮಸ್ಥರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗದೇ ದೈರ್ಯದಿಂದ ಇರಬೇಕು ಏನಾದರೂ ಸಮಸ್ಯೆ ಆದರೆ ನನ್ನ ಗಮನಕ್ಕೆ ತಕ್ಷಣ ತನ್ನಿ ಎಂದು ಗ್ರಾಮಸ್ಥರಿಗೆ ತಿಳಿಸಿದ್ದೇನೆ ಎಂದರು.
ಈ ಸಂದರ್ಭದಲ್ಲಿ ಮಾಜಿ ಗ್ರಾಮ ಪಂಚಾಯ್ತಿ ಸದಸ್ಯ ಎಲ್.ಸಂತೋಷ ಕುಮಾರ್, ಬಸವರಾಜ್ ನಾಯ್ಕ್, ಶೇಖರ್ ನಾಯ್ಕ್, ರವಿಕುಮಾರ, ಯು.ಪಿ.ನಾಗರಾಜ್ ಸಂತೋಷ್, ವೈದ್ಯೆ ಅರ್ಪಿತಾ, ಗ್ರಾಮಲೆಕ್ಕಾಧಿಕಾರಿ ನಾಗರಾಜ್, ಸೇರಿದಂತೆ ಗ್ರಾಮಸ್ಥರು ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ