ವಿಮ್ಸ್ ದುರಂತಕ್ಕೆ ನಿರ್ದೇಶಕರ ವೈಫಲ್ಯ ಕಾರಣ: ಶಾಸಕ ಸೋಮಶೇಖರ ರೆಡ್ಡಿ
Team Udayavani, Sep 17, 2022, 11:21 PM IST
ಬಳ್ಳಾರಿ: ವಿಮ್ಸ್ ನಲ್ಲಿ ಸಂಭವಿಸಿದ ಸಾವಿನ ದುರಂತಕ್ಕೆ ಅಲ್ಲಿನ ನಿರ್ದೇಶಕ ಡಾ| ಗಂಗಾಧರ ಗೌಡ ಅವರ ವೈಫಲ್ಯ ಕಾರಣ ಎಂಬ ಗಂಭೀರ ಆರೋಪವನ್ನು ನಗರ ಶಾಸಕ ಜಿ. ಸೋಮಶೇಖರ ರೆಡ್ಡಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೌಡರ ನೇಮಕಕ್ಕೆ ನಮ್ಮ ವಿರೋಧವಿತ್ತು. ಆದರೆ ವೈದ್ಯಕೀಯ ಸಚಿವ ಸುಧಾಕರ್ ಅವರು ಗಂಗಾಧರ ಗೌಡರನ್ನು ಹಠಕ್ಕೆ ಬಿದ್ದು ನೇಮಿಸಿದ್ದಾರೆ. ಇವರ ನೇಮಕಾತಿ ಪಾರದರ್ಶಕ ವಾಗಿಲ್ಲ ಎಂದು ಸಾರ್ವ ಜನಿಕರೂ ಆರೋಪಿಸುತ್ತಿದ್ದಾರೆ. ಸಚಿವರ ಸಹಕಾರ ನಮಗೆ ಇಲ್ಲದಿದ್ದರೂ ಮುಖ್ಯಮಂತ್ರಿ ನಮ್ಮ ಜತೆಗಿದ್ದಾರೆ ಎಂದು ಹೇಳಿದರು.
“ನನ್ನ ಹೆಸರು ಕೆಡಿಸಲು ವಿದ್ಯುತ್ ಕಡಿತ’
ಕೆಲವರು ನನ್ನನ್ನು ಕೆಳಗಿಸಲು ಷಡ್ಯಂತ್ರ ರೂಪಿಸಿದ್ದಾರೆ ಎಂದು ವಿಮ್ಸ್ ನಿರ್ದೇಶಕ ಡಾ| ಗಂಗಾಧರ ಗೌಡ ದೂರಿದ್ದಾರೆ. ವಿಮ್ಸ್ ಆವರಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿರ್ದೇಶಕ ಸ್ಥಾನದಿಂದ ನನ್ನನ್ನು ಕೆಳಗಿಸುವ ಸಲುವಾಗಿ ಏನೇನೋ ಷಡ್ಯಂತ್ರ ಮಾಡುತ್ತಿದ್ದಾರೆ.
ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದ ದಿನ ಕೆಲವರು ಫೋನ್ಗಳಲ್ಲಿ ಮಾತನಾಡಿರುವ ಆಡಿಯೋಗಳನ್ನು ಸಂಗ್ರಹಿಸುತ್ತಿದ್ದೇನೆ. ನನ್ನ ಹೆಸರನ್ನು ಕೆಡಿಸುವ ಸಲುವಾಗಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ. ರೋಗಿಗಳು ಸತ್ತ ಬಳಿಕ ಶವವಿಟ್ಟು ಪ್ರತಿಭಟನೆ ಮಾಡುವ ಯೋಜನೆ ರೂಪಿಸಿದ್ದರು. ನನ್ನ ವಿರುದ್ಧ ಷಡ್ಯಂತ್ರ ನಡೆಸಿದವರ ವಿರುದ್ಧ ಕಾನೂನು ಹೋರಾಟ ಮಾಡುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್