ಉಕ್ರೇನ್ ನಿಂದ ವಿದ್ಯಾರ್ಥಿಗಳನ್ನು ಕರೆತರುವ ವ್ಯವಸ್ಥೆಯಲ್ಲಿ  ಸರ್ಕಾರ ಎಡವಿದೆ: ಶಾಸಕ ಗಣೇಶ್


Team Udayavani, Mar 5, 2022, 5:18 PM IST

Untitled-1

ಕುರುಗೋಡು: ಉಕ್ರೇನ್ ನಲ್ಲಿ ಸಿಲುಕಿಕೊಂಡಿರುವ ಭಾರತೀಯ ವಿದ್ಯಾರ್ಥಿಗಳನ್ನು ಕರೆ ತರುವಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರ ಸಂಪೂರ್ಣ ವಿಫಲಗೊಂಡಿವೆ ಎಂದು ಶಾಸಕ ಜೆ. ಎನ್. ಗಣೇಶ್ ಸರಕಾರದ ವಿರುದ್ಧ ಗುಡುಗಿದರು.

ಸಮೀಪದ ದಮ್ಮೂರು ಗ್ರಾಮದ ಕಾರ್ಯಕರ್ತರ ನಿವಾಸದಲ್ಲಿ ಏರ್ಪಡಿಸಿದ್ದ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು, ಉಕ್ರೇನ್ ನಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ಊಟದ ವ್ಯವಸ್ಥೆ ಇಲ್ಲದೆ ಕೇವಲ ಚಿಪ್ಸ್, ಮಂಡಕ್ಕಿ ಇತರೆ ಆಹಾರಕ್ಕೂ ಪರದಾಡಬೇಕಾಗಿದೆ. ಈಗಾಗಲೇ ಕರ್ನಾಟಕದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಆದರೂ ಸರಕಾರಕ್ಕೆ ಕಿಂಚಿತ್ತೂ ಕಾಳಜಿ ಇಲ್ಲದಾಗಿದೆ.

ಒಂದು ಕಡೆ ನೋಡಿದರೆ ವಿದ್ಯಾರ್ಥಿಗಳನ್ನು ಕರೆತರುವ ವ್ಯವಸ್ಥೆ ಸರಕಾರ ಸಂಪೂರ್ಣ ಜವಾಬ್ದಾರಿ ವಹಿಸುತ್ತಿದೆ. ವಿದ್ಯಾರ್ಥಿಗಳ ಶಿಕ್ಷಣದ ಖರ್ಚು ವೆಚ್ಚ ಕೂಡ ಬರಿಸಲಿದೆ ಎಂದು ಕೇವಲ ಪ್ರಚಾರಕ್ಕೆ, ಶೋಕಿಗೆ ಸೀಮಿತವಾಗಿದ್ದರೆ ಹೊರೆತು ಯಾವುದೇ ಇನ್ನೂ ಕಾರ್ಯ ರೂಪಕ್ಕೆ ತರುತ್ತಿಲ್ಲ ಎಂದು ವ್ಯಂಗ್ಯವಾಡಿದರು.

ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಚೋಚ್ಚಲ ಬಜೆಟ್ ಮಂಡಿಸಿದ್ದು, ರೈತರಿಗೆ ಖುಷಿ ಇಲ್ಲದಂತಾಗಿದೆ.

ಬಜೆಟ್ ನಲ್ಲಿ ರೈತರಿಗೆ ಯಾವುದೇ ಆದ್ಯತೆ ನೀಡಿಲ್ಲ, ಆದ್ದರಿಂದ ರಾಜ್ಯ ಮತ್ತು ಕೇಂದ್ರ ಸರಕಾರಗಳು ರೈತ ವಿರೋದಿಯಾಗಿ ಮಾರ್ಪಟ್ಟಿವೆ ಎಂದು ಬೇಸಾರ ವ್ಯಕ್ತಪಡಿಸಿದರು.

ಇನ್ನೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಮಂತ್ರಿ ಶ್ರೀರಾಮುಲು ಅವರ ಮೇಲೆ ನಮಗೆ ಅಪಾರ ಗೌರವ ಇದೆ ಕ್ಷೇತ್ರದ ಬಹುದೊಡ್ಡ ಅಭಿವೃದ್ಧಿ ಕಾರ್ಯಗಳ ಭೂಮಿ ಪೂಜೆಗೆ ಆಗಮಿಸುತ್ತಾರೆ, ಆದರೂ ಕ್ಷೇತ್ರದ ಶಾಸಕರು ಸಮಯ ನಿಗದಿ ಮಾಡಿ ತಿಳಿಸಿದಾಗ ಬರಬೇಕು ಹೊರೆತು ಇನ್ಯಾರೋ ಮಾತು ಕೇಳಿ ಶಾಸಕರ ಮೇಲೆ ಇಲ್ಲ ಸಲ್ಲದ ಆರೋಪ ಮಾಡುವುದು ಶೋಭೆಯಲ್ಲ ಎಂದು ತಿಳಿಸಿದರು.

ಇದಲ್ಲದೆ ಕ್ಷೇತ್ರಕ್ಕೆ ಬರುತ್ತಿರುವ ಅನುದಾನವನ್ನು ನನ್ನ ಅವಧಿಯಲ್ಲಿ ಮಂಜೂರು ಮಾಡಿಸಿದ ಅನುದಾನ ದ ಮೇಲೆ ಶಾಸಕರು ಭೂಮಿ ಪೂಜೆ ಮಾಡಿಸುತ್ತಿದ್ದಾರೆ. ಆದ್ದರಿಂದ ನನ್ನ ಅವಧಿಯಲ್ಲಿ ತಂದ ಅನುದಾನಕ್ಕೆ ನನ್ನ ಮಾವ ಶ್ರೀರಾಮುಲು ಅವರಿಂದ ಭೂಮಿ ಪೂಜೆ ಮಾಡಿಸುತ್ತೇನೆ ಎಂದು ಹೇಳುತ್ತಿದ್ದಾರೆ ಮಾಜಿ ಶಾಸಕ ಸುರೇಶ್ ಬಾಬು ಅವರು ಉಸ್ತುವಾರಿ ಮಂತ್ರಿಗಳನ್ನು ಮುಂದಿಟ್ಟು ಕೊಂಡು ರಾಜಕಾರಣ ಮಾಡುತ್ತಿದ್ದಾರೆ ಮಾಡಲಿ ಅವರು ದೊಡ್ಡವರು ಅವರ ಬಗ್ಗೆ ಮಾತನಾಡುವುದೇ ಬೇಡಾ ಎಂದು ಪತ್ರಕರ್ತರು ಕೇಳಿದ ಪ್ರೆಶ್ನೆಯಿಂದ ಸಲೀಸಾಗಿ ಜಾರಿಕೊಂಡರು.

ಇನ್ನೂ ಈಗಾಗಲೇ ಚಾನಾಳು ಗ್ರಾಮದಲ್ಲಿ 10 ವರ್ಷಗಳ ಬೇಡಿಕೆಯಾಗಿದ್ದ ಶಾಲೆ ಕೊಠಡಿಗೆ ಭೂಮಿ ಪೂಜೆ ನೆರೆವೇರಿಸಲಾಗಿದೆ ಶೀಘ್ರದಲ್ಲೇ ಕಾಮಗಾರಿ ಪ್ರಾರಂಭಗೊಳ್ಳಲಿದೆ ಎಂದರು.

ಬೇಸಿಗೆ ಸಮೀಪಸುತ್ತಿರುವ ಹಿನ್ನಲೆ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಇತರೆ ಸಮಸ್ಯೆಗಳಿಗೆ ಒತ್ತು ನೀಡಿ ಬಗೆಹರಿಸಲಾಗುತ್ತಿದೆ ಎಂದರು.

ಟಾಪ್ ನ್ಯೂಸ್

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.